<p><strong>ಚಂಡೀಗಢ:</strong> ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ ಎಂದು ಅವರು ದಾಖಲಾಗಿದ್ದ ಖಾಸಗಿ ಆಸ್ಪತ್ರೆಯು ಮಾಹಿತಿ ನೀಡಿದೆ.</p><p>51 ವರ್ಷದ ಭಗವಂತ್ ಸಿಂಗ್ ಅವರು ಬಳಲಿಕೆ ಹಾಗೂ ಕಡಿಮೆ ಹೃದಯ ಬಡಿತದ ಕಾರಣ ಮೊಹಲಿಯ ಖಾಸಗಿ ಆಸ್ಪತ್ರೆಗೆ ಶುಕ್ರವಾರ ಸಂಜೆ ದಾಖಲಾಗಿದ್ದರು. </p><p>ಅನಾರೋಗ್ಯದ ಕಾರಣ, ಶುಕ್ರವಾರ ಮುಖ್ಯಮಂತ್ರಿ ಮಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿತ್ತು. ಪಂಜಾಬ್ನ ನೆರೆಪೀಡಿತ ಪ್ರದೇಶಗಳಿಗೆ ಗುರುವಾರ ಎಎಪಿ ರಾಷ್ಟ್ರೀಯ ವಕ್ತಾರ ಅರವಿಂದ್ ಕ್ರೇಜಿವಾಲ್ ಭೇಟಿ ನೀಡಿದ್ದಾಗ ಕೂಡ ಮಾನ್ ಅವರ ಜೊತೆಗಿರಲಿಲ್ಲ. </p><p>ಮುಖ್ಯಮಂತ್ರಿ ಭಗವಂತ್ ಸಿಂಗ್ ಅವರ ಅಧಿಕೃತ ನಿವಾಸದಲ್ಲಿ ಅವರನ್ನು ಕ್ರೇಜಿವಾಲ್ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದರು. </p><p>ಕಳೆದ ವರ್ಷ ಇದೇ ಖಾಸಗಿ ಆಸ್ಪತ್ರೆಯಲ್ಲಿ ಮಾನ್ ಅವರು ವೈರಾಣು ಸೋಂಕಿಗೆ ಚಿಕಿತ್ಸೆ ಪಡೆದಿದ್ದರು. </p><p>ಪಂಜಾಬ್ನಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮಳೆಯ ಪ್ರಮಾಣ ಕಡಿಮೆಯಾಗಿದ್ದು, ರಕ್ಷಣಾ ಕಾರ್ಯಾಚರಣೆಗಳು ಜರುಗುತ್ತಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ ಎಂದು ಅವರು ದಾಖಲಾಗಿದ್ದ ಖಾಸಗಿ ಆಸ್ಪತ್ರೆಯು ಮಾಹಿತಿ ನೀಡಿದೆ.</p><p>51 ವರ್ಷದ ಭಗವಂತ್ ಸಿಂಗ್ ಅವರು ಬಳಲಿಕೆ ಹಾಗೂ ಕಡಿಮೆ ಹೃದಯ ಬಡಿತದ ಕಾರಣ ಮೊಹಲಿಯ ಖಾಸಗಿ ಆಸ್ಪತ್ರೆಗೆ ಶುಕ್ರವಾರ ಸಂಜೆ ದಾಖಲಾಗಿದ್ದರು. </p><p>ಅನಾರೋಗ್ಯದ ಕಾರಣ, ಶುಕ್ರವಾರ ಮುಖ್ಯಮಂತ್ರಿ ಮಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿತ್ತು. ಪಂಜಾಬ್ನ ನೆರೆಪೀಡಿತ ಪ್ರದೇಶಗಳಿಗೆ ಗುರುವಾರ ಎಎಪಿ ರಾಷ್ಟ್ರೀಯ ವಕ್ತಾರ ಅರವಿಂದ್ ಕ್ರೇಜಿವಾಲ್ ಭೇಟಿ ನೀಡಿದ್ದಾಗ ಕೂಡ ಮಾನ್ ಅವರ ಜೊತೆಗಿರಲಿಲ್ಲ. </p><p>ಮುಖ್ಯಮಂತ್ರಿ ಭಗವಂತ್ ಸಿಂಗ್ ಅವರ ಅಧಿಕೃತ ನಿವಾಸದಲ್ಲಿ ಅವರನ್ನು ಕ್ರೇಜಿವಾಲ್ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದರು. </p><p>ಕಳೆದ ವರ್ಷ ಇದೇ ಖಾಸಗಿ ಆಸ್ಪತ್ರೆಯಲ್ಲಿ ಮಾನ್ ಅವರು ವೈರಾಣು ಸೋಂಕಿಗೆ ಚಿಕಿತ್ಸೆ ಪಡೆದಿದ್ದರು. </p><p>ಪಂಜಾಬ್ನಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮಳೆಯ ಪ್ರಮಾಣ ಕಡಿಮೆಯಾಗಿದ್ದು, ರಕ್ಷಣಾ ಕಾರ್ಯಾಚರಣೆಗಳು ಜರುಗುತ್ತಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>