<p><strong>ಚಂಡೀಗಢ:</strong> ಕೇಂದ್ರ ಸರ್ಕಾರದ ಮೂರು ಕೃಷಿ ಮಸೂದೆಗಳನ್ನು ವಿರೋಧಿಸುವ ನಿರ್ಣಯವನ್ನುಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಮಂಗಳವಾರವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ಇದು ಕೃಷಿ ಮತ್ತು ರಾಜ್ಯದ ರೈತರ ರಕ್ಷಣೆಗಾಗಿ ಕೈಗೊಂಡಿರುವ ಕ್ರಮ ಎಂದು ಅವರು ಹೇಳಿದರು.</p>.<p>ಈ ವೇಳೆ ಕೇಂದ್ರದ ವಿದ್ಯುತ್ (ತಿದ್ದುಪಡಿ) ಮಸೂದೆಯನ್ನು ತಿರಸ್ಕರಿಸುವ ನಿರ್ಣಯವನ್ನೂ ಮಂಡಿಸಲಾಗಿದೆ.</p>.<p>ಎಲ್ಲಾ ಪಕ್ಷಗಳು ತಮ್ಮ ರಾಜಕೀಯ ಹಿತಾಸಕ್ತಿಗಳನ್ನು ಬದಿಗಿಟ್ಟು ಪಂಜಾಬ್ ಅನ್ನು ರಕ್ಷಿಸಬೇಕು ಎಂದು ಅಮರಿಂದರ್ ಸಿಂಗ್ ಮನವಿ ಮಾಡಿದರು.</p>.<p>ವಿವಿಧ ತಜ್ಞರೊಂದಿಗೆ ಚರ್ಚೆ ನಡೆಸಿದ ಬಳಿಕ ಸೋಮವಾರ ರಾತ್ರಿ 9.30 ಕ್ಕೆ ‘ಕೃಷಿ ವಿರೋಧಿ ಕಾನೂನು’ ವಿರುದ್ಧದ ನಿರ್ಣಯ ಮಂಡನೆಗೆ ಸಹಿ ಹಾಕಿದ್ದೇನೆ. ಭಾರತ ಸರ್ಕಾರ ಏನು ಮಾಡಲು ಇಚ್ಛಿಸುತ್ತಿದೆ ಎಂಬುದೇ ತಿಳಿಯುತ್ತಿಲ್ಲ ಎಂದು ಅವರು ಹೇಳಿದರು.</p>.<p>ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ನೆರವು) ಮಸೂದೆ, ಬೆಲೆ ಖಾತರಿ ಹಾಗೂ ಬೇಸಾಯ ಸೇವೆಗಳಿಗೆ ರೈತರ ಒಪ್ಪಿಗೆ (ಸಶಕ್ತೀಕರಣ ಹಾಗೂ ರಕ್ಷಣೆ), ಅಗತ್ಯ ವಸ್ತುಗಳ (ತಿದ್ದುಪಡಿ) ಮಸೂದೆಗಳಿಗೆ ಸಂತ್ತಿನಲ್ಲಿ ಅಂಗೀಕಾರಿಸಲಾಗಿದ್ದು, ರಾಷ್ಟ್ರಪತಿ ಅವರು ಕೂಡ ಅಂಕಿತ ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ಕೇಂದ್ರ ಸರ್ಕಾರದ ಮೂರು ಕೃಷಿ ಮಸೂದೆಗಳನ್ನು ವಿರೋಧಿಸುವ ನಿರ್ಣಯವನ್ನುಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಮಂಗಳವಾರವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ಇದು ಕೃಷಿ ಮತ್ತು ರಾಜ್ಯದ ರೈತರ ರಕ್ಷಣೆಗಾಗಿ ಕೈಗೊಂಡಿರುವ ಕ್ರಮ ಎಂದು ಅವರು ಹೇಳಿದರು.</p>.<p>ಈ ವೇಳೆ ಕೇಂದ್ರದ ವಿದ್ಯುತ್ (ತಿದ್ದುಪಡಿ) ಮಸೂದೆಯನ್ನು ತಿರಸ್ಕರಿಸುವ ನಿರ್ಣಯವನ್ನೂ ಮಂಡಿಸಲಾಗಿದೆ.</p>.<p>ಎಲ್ಲಾ ಪಕ್ಷಗಳು ತಮ್ಮ ರಾಜಕೀಯ ಹಿತಾಸಕ್ತಿಗಳನ್ನು ಬದಿಗಿಟ್ಟು ಪಂಜಾಬ್ ಅನ್ನು ರಕ್ಷಿಸಬೇಕು ಎಂದು ಅಮರಿಂದರ್ ಸಿಂಗ್ ಮನವಿ ಮಾಡಿದರು.</p>.<p>ವಿವಿಧ ತಜ್ಞರೊಂದಿಗೆ ಚರ್ಚೆ ನಡೆಸಿದ ಬಳಿಕ ಸೋಮವಾರ ರಾತ್ರಿ 9.30 ಕ್ಕೆ ‘ಕೃಷಿ ವಿರೋಧಿ ಕಾನೂನು’ ವಿರುದ್ಧದ ನಿರ್ಣಯ ಮಂಡನೆಗೆ ಸಹಿ ಹಾಕಿದ್ದೇನೆ. ಭಾರತ ಸರ್ಕಾರ ಏನು ಮಾಡಲು ಇಚ್ಛಿಸುತ್ತಿದೆ ಎಂಬುದೇ ತಿಳಿಯುತ್ತಿಲ್ಲ ಎಂದು ಅವರು ಹೇಳಿದರು.</p>.<p>ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ನೆರವು) ಮಸೂದೆ, ಬೆಲೆ ಖಾತರಿ ಹಾಗೂ ಬೇಸಾಯ ಸೇವೆಗಳಿಗೆ ರೈತರ ಒಪ್ಪಿಗೆ (ಸಶಕ್ತೀಕರಣ ಹಾಗೂ ರಕ್ಷಣೆ), ಅಗತ್ಯ ವಸ್ತುಗಳ (ತಿದ್ದುಪಡಿ) ಮಸೂದೆಗಳಿಗೆ ಸಂತ್ತಿನಲ್ಲಿ ಅಂಗೀಕಾರಿಸಲಾಗಿದ್ದು, ರಾಷ್ಟ್ರಪತಿ ಅವರು ಕೂಡ ಅಂಕಿತ ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>