<p><strong>ಚಂಡೀಗಢ:</strong> ನಂಗಲ್ ಅಣೆಕಟ್ಟೆ ಭದ್ರತೆಗೆ ಸಿಐಎಸ್ಎಫ್ನ 296 ಸಿಬ್ಬಂದಿಯನ್ನು ನಿಯೋಜಿಸಿರುವ ಕೇಂದ್ರದ ಕ್ರಮವನ್ನು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಗುರುವಾರ ಖಂಡಿಸಿದ್ದಾರೆ. </p>.<p>ಸಂಗ್ರೂರ್ನಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಮಾನ್, ರಾಜ್ಯದ ಪೊಲೀಸರು ಈಗಾಗಲೇ ಅಣೆಕಟ್ಟೆಗೆ ಭದ್ರತೆ ಒದಗಿಸುತ್ತಿರುವಾಗ, ಸಿಐಎಸ್ಎಫ್ ಸಿಬ್ಬಂದಿಯನ್ನು ನಿಯೋಜಿಸುವ ಅಗತ್ಯವೇನಿತ್ತು. ಭದ್ರತೆ ಒದಗಿಸುವ ಬಗ್ಗೆ ಪಂಜಾಬ್ ಪೊಲೀಸರ ಮೇಲೆ ನಂಬಿಕೆ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ. </p>.<p>ಶನಿವಾರ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸುವುದಾಗಿ ಅವರು ಹೇಳಿದ್ದಾರೆ.</p>.<p>ನಂಗಲ್ ಅಣೆಕಟ್ಟೆ ನೀರು ಹಂಚಿಕೆ ಬಗ್ಗೆ ಪಂಜಾಬ್ ಮತ್ತು ಹರಿಯಾಣ ನಡುವೆ ಉದ್ವಿಗ್ನತೆ ಉಂಟಾಗಿದೆ. ಈ ಮಧ್ಯೆ, ಭದ್ರತೆಗಾಗಿ ಕೇಂದ್ರ ಸರ್ಕಾರ ಸಿಐಎಸ್ಎಫ್ನ 296 ಸಿಬ್ಬಂದಿಯ ತುಕಡಿಯನ್ನು ನಿಯೋಜಿಸಿದೆ.</p>.<p>ಸಿಐಎಸ್ಎಫ್ ಸಿಬ್ಬಂದಿ ನಿಯೋಜನೆಗೆ ವರ್ಷಕ್ಕೆ ₹8.58 ಕೋಟಿ ವೆಚ್ಚವಾಗಲಿದೆ. ಈ ಹಣವನ್ನು ಭಾಕ್ರಾ ಬಿಯಾಸ್ ನಿರ್ವಹಣಾ ಮಂಡಳಿ (ಬಿಬಿಎಂಬಿ) ಅಥವಾ ಪಂಜಾಬ್ ಸರ್ಕಾರ ಪಾವತಿಸುತ್ತದೆ ಎಂದು ಕೇಂದ್ರ ಹೇಳಿದೆ. ಈಗಾಗಲೇ ಪಂಜಾಬ್ ಪೊಲೀಸರು ಅಣೆಕಟ್ಟೆಗೆ ಭದ್ರತೆ ಒದಗಿಸುತ್ತಿರುವಾಗ ಇದರ ಅಗತ್ಯ ಏನಿತ್ತು?. ನಾವು ಏಕೆ ಹಣವನ್ನು ನೀಡಬೇಕು? ಎಂದು ಮಾನ್ ಕೇಳಿದ್ದಾರೆ.</p>.<p>ಕೇಂದ್ರದ ಈ ಕ್ರಮವನ್ನು ನಾನು ವಿರೋಧಿಸುತ್ತೇನೆ. ಬಿಬಿಎಂಬಿ ಮೂಲಕವಾಗಲಿ ಅಥವಾ ಪಂಜಾಬ್ ಸರ್ಕಾರದ ಖಜಾನೆಯಿಂದ ಹಣವನ್ನು ನೀಡಲು ನಾವು ಒಪ್ಪುವುದಿಲ್ಲ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ನಂಗಲ್ ಅಣೆಕಟ್ಟೆ ಭದ್ರತೆಗೆ ಸಿಐಎಸ್ಎಫ್ನ 296 ಸಿಬ್ಬಂದಿಯನ್ನು ನಿಯೋಜಿಸಿರುವ ಕೇಂದ್ರದ ಕ್ರಮವನ್ನು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಗುರುವಾರ ಖಂಡಿಸಿದ್ದಾರೆ. </p>.<p>ಸಂಗ್ರೂರ್ನಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಮಾನ್, ರಾಜ್ಯದ ಪೊಲೀಸರು ಈಗಾಗಲೇ ಅಣೆಕಟ್ಟೆಗೆ ಭದ್ರತೆ ಒದಗಿಸುತ್ತಿರುವಾಗ, ಸಿಐಎಸ್ಎಫ್ ಸಿಬ್ಬಂದಿಯನ್ನು ನಿಯೋಜಿಸುವ ಅಗತ್ಯವೇನಿತ್ತು. ಭದ್ರತೆ ಒದಗಿಸುವ ಬಗ್ಗೆ ಪಂಜಾಬ್ ಪೊಲೀಸರ ಮೇಲೆ ನಂಬಿಕೆ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ. </p>.<p>ಶನಿವಾರ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸುವುದಾಗಿ ಅವರು ಹೇಳಿದ್ದಾರೆ.</p>.<p>ನಂಗಲ್ ಅಣೆಕಟ್ಟೆ ನೀರು ಹಂಚಿಕೆ ಬಗ್ಗೆ ಪಂಜಾಬ್ ಮತ್ತು ಹರಿಯಾಣ ನಡುವೆ ಉದ್ವಿಗ್ನತೆ ಉಂಟಾಗಿದೆ. ಈ ಮಧ್ಯೆ, ಭದ್ರತೆಗಾಗಿ ಕೇಂದ್ರ ಸರ್ಕಾರ ಸಿಐಎಸ್ಎಫ್ನ 296 ಸಿಬ್ಬಂದಿಯ ತುಕಡಿಯನ್ನು ನಿಯೋಜಿಸಿದೆ.</p>.<p>ಸಿಐಎಸ್ಎಫ್ ಸಿಬ್ಬಂದಿ ನಿಯೋಜನೆಗೆ ವರ್ಷಕ್ಕೆ ₹8.58 ಕೋಟಿ ವೆಚ್ಚವಾಗಲಿದೆ. ಈ ಹಣವನ್ನು ಭಾಕ್ರಾ ಬಿಯಾಸ್ ನಿರ್ವಹಣಾ ಮಂಡಳಿ (ಬಿಬಿಎಂಬಿ) ಅಥವಾ ಪಂಜಾಬ್ ಸರ್ಕಾರ ಪಾವತಿಸುತ್ತದೆ ಎಂದು ಕೇಂದ್ರ ಹೇಳಿದೆ. ಈಗಾಗಲೇ ಪಂಜಾಬ್ ಪೊಲೀಸರು ಅಣೆಕಟ್ಟೆಗೆ ಭದ್ರತೆ ಒದಗಿಸುತ್ತಿರುವಾಗ ಇದರ ಅಗತ್ಯ ಏನಿತ್ತು?. ನಾವು ಏಕೆ ಹಣವನ್ನು ನೀಡಬೇಕು? ಎಂದು ಮಾನ್ ಕೇಳಿದ್ದಾರೆ.</p>.<p>ಕೇಂದ್ರದ ಈ ಕ್ರಮವನ್ನು ನಾನು ವಿರೋಧಿಸುತ್ತೇನೆ. ಬಿಬಿಎಂಬಿ ಮೂಲಕವಾಗಲಿ ಅಥವಾ ಪಂಜಾಬ್ ಸರ್ಕಾರದ ಖಜಾನೆಯಿಂದ ಹಣವನ್ನು ನೀಡಲು ನಾವು ಒಪ್ಪುವುದಿಲ್ಲ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>