<p><strong>ನವದೆಹಲಿ</strong>: ಪಂಜಾಬ್ನ ಕಾಂಗ್ರೆಸ್ ಪಕ್ಷದ ರಾಜ್ಯ ಘಟಕದೊಳಗೆ ಭುಗಿಲೆದ್ದಿರುವ ಸಂಘರ್ಷವನ್ನು ಬಗೆಹರಿಸುವ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ರಚಿಸಿರುವ ತ್ರಿಸದಸ್ಯ ಸಮಿತಿಯನ್ನು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಶುಕ್ರವಾರ ಇಲ್ಲಿ ಭೇಟಿಯಾದರು.</p>.<p>ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ರಚಿಸಿರುವ ತ್ರಿಸದಸ್ಯರ ಸಮಿತಿಯನ್ನು ಶುಕ್ರವಾರ ಇಲ್ಲಿನ ಅಕ್ಬರ್ ರಸ್ತೆಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಅಮರಿಂದರ್ ಸಿಂಗ್ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಪಕ್ಷವನ್ನು ಒಗ್ಗೂಡಿಸುವ ಪ್ರಯತ್ನಗಳ ಕುರಿತು ಮತ್ತು ಮುಂಬರುವ ವಿಧಾನಸಭಾ ಚುನಾವಣೆಗೆ ಅಗತ್ಯದ ಸಿದ್ದತೆಗಳ ಬಗ್ಗೆಯೂ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಖರ್ಗೆ ನೇತೃತ್ವದ ಈ ಸಮಿತಿಯಲ್ಲಿ ಪಂಜಾಬ್ನ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್ ಮತ್ತು ಮಾಜಿ ಸಂಸದ ಜೆ.ಪಿ.ಅಗರ್ವಾಲ್ ಅವರು ಸಮಿತಿಯ ಸದಸ್ಯರಾಗಿದ್ದಾರೆ.</p>.<p>ಅಮರಿಂದರ್ ಸಿಂಗ್ ಮತ್ತು ಸಂಪುಟದ ಮಾಜಿ ಸಹೋದ್ಯೋಗಿ ನವಜೋತ್ ಸಿಂಗ್ ಸಿಧು ನಡುವೆ ಎಸ್ಐಟಿ ತನಿಖಾ ವರದಿಗೆ ಸಂಬಂಧಿಸಿದಂತೆ ಮಾತಿನ ಸಮರ ಮುಂದುವರಿದಿದೆ. ಈ ವಿಷಯಕ್ಕೆ ಸಂಬಂಧಿಸಿದ ಸಿಧು ಅವರು ಮುಖ್ಯಮಂತ್ರಿಯ ವಿರುದ್ಧ ಸಾರ್ವಜನಿಕವಾಗಿ ವಾಗ್ದಾಳಿ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷದ ಆಂತರಿಕ ಸಂಘರ್ಷವನ್ನು ಬಗೆಹರಿಸುವ ಸಂಬಂಧ ಅಧ್ಯಕ್ಷೆ ಸೋನಿಯಾ ಗಾಂಧಿ ಈ ತ್ರಿಸದಸ್ಯ ಸಮಿತಿಯನ್ನು ರಚಿಸಿದ್ದಾರೆ.</p>.<p>ಈಸಮಿತಿ ಕಳೆದ ನಾಲ್ಕು ದಿನಗಳಲ್ಲಿ ನವಜೋತ್ ಸಿಂಗ್ ಸಿಧು, ಪಕ್ಷದ ಸಂಸದರು, ಶಾಸಕರು ಮತ್ತು ಮಾಜಿ ಪಿಸಿಸಿ ಮುಖ್ಯಸ್ಥರನ್ನು ಭೇಟಿ ಮಾಡಿದೆ. ಈ ವಾರಾಂತ್ಯದಲ್ಲಿ ಅಥವಾ ಮುಂದಿನ ವಾರದಲ್ಲಿ ಸಮಿತಿ ತನ್ನ ವರದಿಯನ್ನು ಹೈಕಮಾಂಡ್ಗೆ ಸಲ್ಲಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪಂಜಾಬ್ನ ಕಾಂಗ್ರೆಸ್ ಪಕ್ಷದ ರಾಜ್ಯ ಘಟಕದೊಳಗೆ ಭುಗಿಲೆದ್ದಿರುವ ಸಂಘರ್ಷವನ್ನು ಬಗೆಹರಿಸುವ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ರಚಿಸಿರುವ ತ್ರಿಸದಸ್ಯ ಸಮಿತಿಯನ್ನು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಶುಕ್ರವಾರ ಇಲ್ಲಿ ಭೇಟಿಯಾದರು.</p>.<p>ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ರಚಿಸಿರುವ ತ್ರಿಸದಸ್ಯರ ಸಮಿತಿಯನ್ನು ಶುಕ್ರವಾರ ಇಲ್ಲಿನ ಅಕ್ಬರ್ ರಸ್ತೆಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಅಮರಿಂದರ್ ಸಿಂಗ್ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಪಕ್ಷವನ್ನು ಒಗ್ಗೂಡಿಸುವ ಪ್ರಯತ್ನಗಳ ಕುರಿತು ಮತ್ತು ಮುಂಬರುವ ವಿಧಾನಸಭಾ ಚುನಾವಣೆಗೆ ಅಗತ್ಯದ ಸಿದ್ದತೆಗಳ ಬಗ್ಗೆಯೂ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಖರ್ಗೆ ನೇತೃತ್ವದ ಈ ಸಮಿತಿಯಲ್ಲಿ ಪಂಜಾಬ್ನ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್ ಮತ್ತು ಮಾಜಿ ಸಂಸದ ಜೆ.ಪಿ.ಅಗರ್ವಾಲ್ ಅವರು ಸಮಿತಿಯ ಸದಸ್ಯರಾಗಿದ್ದಾರೆ.</p>.<p>ಅಮರಿಂದರ್ ಸಿಂಗ್ ಮತ್ತು ಸಂಪುಟದ ಮಾಜಿ ಸಹೋದ್ಯೋಗಿ ನವಜೋತ್ ಸಿಂಗ್ ಸಿಧು ನಡುವೆ ಎಸ್ಐಟಿ ತನಿಖಾ ವರದಿಗೆ ಸಂಬಂಧಿಸಿದಂತೆ ಮಾತಿನ ಸಮರ ಮುಂದುವರಿದಿದೆ. ಈ ವಿಷಯಕ್ಕೆ ಸಂಬಂಧಿಸಿದ ಸಿಧು ಅವರು ಮುಖ್ಯಮಂತ್ರಿಯ ವಿರುದ್ಧ ಸಾರ್ವಜನಿಕವಾಗಿ ವಾಗ್ದಾಳಿ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷದ ಆಂತರಿಕ ಸಂಘರ್ಷವನ್ನು ಬಗೆಹರಿಸುವ ಸಂಬಂಧ ಅಧ್ಯಕ್ಷೆ ಸೋನಿಯಾ ಗಾಂಧಿ ಈ ತ್ರಿಸದಸ್ಯ ಸಮಿತಿಯನ್ನು ರಚಿಸಿದ್ದಾರೆ.</p>.<p>ಈಸಮಿತಿ ಕಳೆದ ನಾಲ್ಕು ದಿನಗಳಲ್ಲಿ ನವಜೋತ್ ಸಿಂಗ್ ಸಿಧು, ಪಕ್ಷದ ಸಂಸದರು, ಶಾಸಕರು ಮತ್ತು ಮಾಜಿ ಪಿಸಿಸಿ ಮುಖ್ಯಸ್ಥರನ್ನು ಭೇಟಿ ಮಾಡಿದೆ. ಈ ವಾರಾಂತ್ಯದಲ್ಲಿ ಅಥವಾ ಮುಂದಿನ ವಾರದಲ್ಲಿ ಸಮಿತಿ ತನ್ನ ವರದಿಯನ್ನು ಹೈಕಮಾಂಡ್ಗೆ ಸಲ್ಲಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>