<p class="title"><strong>ನವದೆಹಲಿ:</strong> ಪಂಜಾಬ್ನ ಮಾಜಿ ಹಣಕಾಸು ಸಚಿವ ಮನ್ಪ್ರೀತ್ ಸಿಂಗ್ ಬಾದಲ್ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದು, ಹೊಸ ಪಕ್ಷದಲ್ಲಿ ಮೊದಲ ಇನ್ನಿಂಗ್ಸ್ ಆರಂಭಿಸುವ ಮುನ್ನವೇ ಈ ಹಿಂದೆ ಇದ್ದ ಕಾಂಗ್ರೆಸ್ ಪಕ್ಷದ ಗುಂಪುಗಾರಿಕೆಯನ್ನು ಟೀಕಿಸಿದ್ದಾರೆ. </p>.<p class="title">ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಶ್ಲಾಘಿಸಿದ ಮನ್ಪ್ರೀತ್, ‘ಮೋದಿ ಅವರ ಸುಮಾರು ಒಂಬತ್ತು ವರ್ಷಗಳ ಆಡಳಿತದಲ್ಲಿ ಭಾರತವು ರಾಜತಾಂತ್ರಿಕವಾಗಿ ಮತ್ತು ಆರ್ಥಿಕವಾಗಿಯೂ ಸೇರಿದಂತೆ ಪ್ರಬಲ ಶಕ್ತಿಯಾಗಿ ಹೊರಹೊಮ್ಮಿದೆ’ ಎಂದು ಹೇಳಿದ್ದಾರೆ.</p>.<p class="title">ಪಂಜಾಬ್ನ ಸ್ಥಿತಿಗತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ರಾಜ್ಯದಲ್ಲಿನ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಶಕ್ತಿ ಬಿಜೆಪಿಗೆ ಮಾತ್ರ ಇದೆ ಎಂದೂ ಹೇಳಿದ್ದಾರೆ. </p>.<p class="title">ಕಾಂಗ್ರೆಸ್ ಅನ್ನು ತೊರೆದ ಕಾರಣವನ್ನು ವಿವರಿಸಿದ ಅವರು, ‘ತನ್ನಲ್ಲೇ ಹೋರಾಟ ಮಾಡುತ್ತಿರುವ ಒಂದು ಪಕ್ಷವು ಹೇಗೆ ಕಾರ್ಯನಿರ್ವಹಿಸಬಲ್ಲದು? ಪಂಜಾಬ್ ಮಾತ್ರವಲ್ಲ. ಇತರ ರಾಜ್ಯಗಳಲ್ಲೂ ಕಾಂಗ್ರೆಸ್ ಬಣಗಳಿಂದ ತುಂಬಿ ಹೋಗಿದೆ’ ಎಂದಿದ್ದಾರೆ. </p>.<p class="title">ನವದೆಹಲಿಯಲ್ಲಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮನ್ಪ್ರೀತ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡ ಕೇಂದ್ರ ಸಚಿವ ಪೀಯೂಷ್ ಗೋಯಲ್, ‘ಮನ್ಪ್ರೀತ್ ಬಾದಲ್ ಅವರು ವಿದ್ವಾಂಸ, ಸರಳ ಮತ್ತು ಅನುಭವಿ ನಾಯಕರಾಗಿದ್ದಾರೆ. ಅವರು ಬಿಜೆಪಿಗೆ ಸೇರುವುದರಿಂದ ಸಿಖ್ಖರೊಂದಿಗಿನ ಪಕ್ಷದ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುತ್ತದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ. </p>.<p class="title">ಬಿಜೆಪಿ ಸೇರ್ಪಡೆಗೂ ಮುನ್ನ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿರುವ ಮನ್ಪ್ರೀತ್, ಪಕ್ಷದಲ್ಲಿನ ಗುಂಪುಗಾರಿಕೆಯಿಂದ ತಾವು ಭ್ರಮನಿರಸನಗೊಂಡಿರುವುದಾಗಿ ತಿಳಿಸಿದ್ದಾರೆ. </p>.<p class="title">‘ಪಕ್ಷದಲ್ಲಿ ನನಗೆ ಅವಕಾಶಗಳನ್ನು ಒದಗಿಸಿದ್ದಕ್ಕಾಗಿ ಮತ್ತು ಈ ಹಿಂದೆ ನೀವು ನನ್ನ ಬಗ್ಗೆ ತೋರಿದ ದಯೆ ಹಾಗೂ ಸೌಜನ್ಯಕ್ಕಾಗಿ ಧನ್ಯವಾದಗಳು’ ಎಂದೂ ಅವರು ಟ್ವೀಟ್ನಲ್ಲಿ ಪೋಸ್ಟ್ ಮಾಡಿದ ಪತ್ರದಲ್ಲಿ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಪಂಜಾಬ್ನ ಮಾಜಿ ಹಣಕಾಸು ಸಚಿವ ಮನ್ಪ್ರೀತ್ ಸಿಂಗ್ ಬಾದಲ್ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದು, ಹೊಸ ಪಕ್ಷದಲ್ಲಿ ಮೊದಲ ಇನ್ನಿಂಗ್ಸ್ ಆರಂಭಿಸುವ ಮುನ್ನವೇ ಈ ಹಿಂದೆ ಇದ್ದ ಕಾಂಗ್ರೆಸ್ ಪಕ್ಷದ ಗುಂಪುಗಾರಿಕೆಯನ್ನು ಟೀಕಿಸಿದ್ದಾರೆ. </p>.<p class="title">ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಶ್ಲಾಘಿಸಿದ ಮನ್ಪ್ರೀತ್, ‘ಮೋದಿ ಅವರ ಸುಮಾರು ಒಂಬತ್ತು ವರ್ಷಗಳ ಆಡಳಿತದಲ್ಲಿ ಭಾರತವು ರಾಜತಾಂತ್ರಿಕವಾಗಿ ಮತ್ತು ಆರ್ಥಿಕವಾಗಿಯೂ ಸೇರಿದಂತೆ ಪ್ರಬಲ ಶಕ್ತಿಯಾಗಿ ಹೊರಹೊಮ್ಮಿದೆ’ ಎಂದು ಹೇಳಿದ್ದಾರೆ.</p>.<p class="title">ಪಂಜಾಬ್ನ ಸ್ಥಿತಿಗತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ರಾಜ್ಯದಲ್ಲಿನ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಶಕ್ತಿ ಬಿಜೆಪಿಗೆ ಮಾತ್ರ ಇದೆ ಎಂದೂ ಹೇಳಿದ್ದಾರೆ. </p>.<p class="title">ಕಾಂಗ್ರೆಸ್ ಅನ್ನು ತೊರೆದ ಕಾರಣವನ್ನು ವಿವರಿಸಿದ ಅವರು, ‘ತನ್ನಲ್ಲೇ ಹೋರಾಟ ಮಾಡುತ್ತಿರುವ ಒಂದು ಪಕ್ಷವು ಹೇಗೆ ಕಾರ್ಯನಿರ್ವಹಿಸಬಲ್ಲದು? ಪಂಜಾಬ್ ಮಾತ್ರವಲ್ಲ. ಇತರ ರಾಜ್ಯಗಳಲ್ಲೂ ಕಾಂಗ್ರೆಸ್ ಬಣಗಳಿಂದ ತುಂಬಿ ಹೋಗಿದೆ’ ಎಂದಿದ್ದಾರೆ. </p>.<p class="title">ನವದೆಹಲಿಯಲ್ಲಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮನ್ಪ್ರೀತ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡ ಕೇಂದ್ರ ಸಚಿವ ಪೀಯೂಷ್ ಗೋಯಲ್, ‘ಮನ್ಪ್ರೀತ್ ಬಾದಲ್ ಅವರು ವಿದ್ವಾಂಸ, ಸರಳ ಮತ್ತು ಅನುಭವಿ ನಾಯಕರಾಗಿದ್ದಾರೆ. ಅವರು ಬಿಜೆಪಿಗೆ ಸೇರುವುದರಿಂದ ಸಿಖ್ಖರೊಂದಿಗಿನ ಪಕ್ಷದ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುತ್ತದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ. </p>.<p class="title">ಬಿಜೆಪಿ ಸೇರ್ಪಡೆಗೂ ಮುನ್ನ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿರುವ ಮನ್ಪ್ರೀತ್, ಪಕ್ಷದಲ್ಲಿನ ಗುಂಪುಗಾರಿಕೆಯಿಂದ ತಾವು ಭ್ರಮನಿರಸನಗೊಂಡಿರುವುದಾಗಿ ತಿಳಿಸಿದ್ದಾರೆ. </p>.<p class="title">‘ಪಕ್ಷದಲ್ಲಿ ನನಗೆ ಅವಕಾಶಗಳನ್ನು ಒದಗಿಸಿದ್ದಕ್ಕಾಗಿ ಮತ್ತು ಈ ಹಿಂದೆ ನೀವು ನನ್ನ ಬಗ್ಗೆ ತೋರಿದ ದಯೆ ಹಾಗೂ ಸೌಜನ್ಯಕ್ಕಾಗಿ ಧನ್ಯವಾದಗಳು’ ಎಂದೂ ಅವರು ಟ್ವೀಟ್ನಲ್ಲಿ ಪೋಸ್ಟ್ ಮಾಡಿದ ಪತ್ರದಲ್ಲಿ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>