ಪಂಜಾಬ್ ಕಾಂಗ್ರೆಸ್ನಲ್ಲಿ ಎದುರಾಗಿರುವ ಆಂತರಿಕ ಕಲಹ ಪರಿಸ್ಥಿತಿಯ ನಡುವೆ ನವಜೋತ್ ಸಿಂಗ್ ಸಿಧು ಅವರ ದೆಹಲಿ ಭೇಟಿ ಕುತೂಹಲ ಮೂಡಿಸಿದೆ. 2022ರಲ್ಲಿ ಪಂಜಾಬ್ನ ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ರಾಜ್ಯದಲ್ಲಿ ಪಕ್ಷದ ಬಲವರ್ಧನೆಗೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲು ರಾಹುಲ್ ಗಾಂಧಿ, ಪಕ್ಷದ ನಾಯಕರಿಂದ ರಾಜ್ಯ ರಾಜಕೀಯ ಪರಿಸ್ಥಿತಿ ಕುರಿತು ಅಭಿಪ್ರಾಯಗಳನ್ನು ಸಂಗ್ರಹಿಸುತ್ತಿದ್ದಾರೆ.