<p><strong>ಹೋಶಿಯಾರ್ಪುರ (ಪಂಜಾಬ್):</strong> ಮಾದಕವಸ್ತು ಕಳ್ಳಸಾಗಣೆ ಜಾಲದೊಂದಿಗೆ ನಂಟು ಹೊಂದಿರುವ ಆರೋಪದಲ್ಲಿ ಇಲ್ಲಿನ ದಿನೋವಾಲ್ ಖುರ್ದ್ ಗ್ರಾಮದಲ್ಲಿ 9 ಕುಟುಂಬಗಳಿಗೆ ಸೇರಿದ 5 ಮನೆಗಳನ್ನು ನೆಲಸಮಗೊಳಿಸಲಾಗಿದೆ.</p>.<p>ಹೋಶಿಯಾರ್ಪುರ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಕುಮಾರ್ ಮಲ್ಲಿಕ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. </p>.<p>ಪಂಜಾಬ್ ಸರ್ಕಾರವು ಮಾದಕವಸ್ತು ನಿಯಂತ್ರಣ ಅಭಿಯಾನ ಆರಂಭಿಸಿದೆ. ಕಾರ್ಯಾಚರಣೆ ವೇಳೆ ದಿನೋವಾಲ್ ಖುರ್ದ್ ಗ್ರಾಮವನ್ನು ಮಾದಕ ವಸ್ತುಗಳ ಕಳ್ಳಸಾಗಣೆ ನಡೆಯುತ್ತಿರುವ ಕೇಂದ್ರ ಬಿಂದು ಎಂದು ಗುರುತಿಸಲಾಗಿದೆ.</p>.<p>ಇದೇ ಗ್ರಾಮದಲ್ಲಿ ಕ್ರಿಮಿನಲ್ ಹಿನ್ನೆಲೆ ಹೊಂದಿರುವ 13 ಕುಟುಂಬಗಳಿದ್ದು, ಕುಟುಂಬದ ಸದಸ್ಯರ ವಿರುದ್ಧ ಸರಿ ಸುಮಾರು 100ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಅವುಗಳಲ್ಲಿ ಬಹುತೇಕ ಪ್ರಕರಣಗಳು ಮಾದಕ ವಸ್ತು ಕಳ್ಳಸಾಗಣೆಗೆ ಸಂಬಂಧಿಸಿದ್ದಾಗಿವೆ ಎಂದು ಸಂದೀಪ್ ತಿಳಿಸಿದ್ದಾರೆ. </p>.<p class="title">ಅಲ್ಲದೇ, ಈ ಕುಟುಂಬಗಳು ಪಂಚಾಯತಿಗೆ ಸೇರಿದ 13 ಮರಲಾ (3539.26 ಚದರ ಅಡಿ) ಜಮೀನನ್ನು ಅತಿಕ್ರಮಿಸಿ, ಮನೆಗಳನ್ನು ನಿರ್ಮಿಸಿಕೊಂಡಿರುವುದು ಬೆಳಕಿಗೆ ಬಂದಿತ್ತು. ಈ ಕಾರಣ ಆಡಳಿತಾಧಿಕಾರಿಗಳು ಮನೆಗಳನ್ನು ನೆಲಸಮಗೊಳಿಸಿದ್ದಾರೆ ಎಂದೂ ಸಂದೀಪ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೋಶಿಯಾರ್ಪುರ (ಪಂಜಾಬ್):</strong> ಮಾದಕವಸ್ತು ಕಳ್ಳಸಾಗಣೆ ಜಾಲದೊಂದಿಗೆ ನಂಟು ಹೊಂದಿರುವ ಆರೋಪದಲ್ಲಿ ಇಲ್ಲಿನ ದಿನೋವಾಲ್ ಖುರ್ದ್ ಗ್ರಾಮದಲ್ಲಿ 9 ಕುಟುಂಬಗಳಿಗೆ ಸೇರಿದ 5 ಮನೆಗಳನ್ನು ನೆಲಸಮಗೊಳಿಸಲಾಗಿದೆ.</p>.<p>ಹೋಶಿಯಾರ್ಪುರ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಕುಮಾರ್ ಮಲ್ಲಿಕ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. </p>.<p>ಪಂಜಾಬ್ ಸರ್ಕಾರವು ಮಾದಕವಸ್ತು ನಿಯಂತ್ರಣ ಅಭಿಯಾನ ಆರಂಭಿಸಿದೆ. ಕಾರ್ಯಾಚರಣೆ ವೇಳೆ ದಿನೋವಾಲ್ ಖುರ್ದ್ ಗ್ರಾಮವನ್ನು ಮಾದಕ ವಸ್ತುಗಳ ಕಳ್ಳಸಾಗಣೆ ನಡೆಯುತ್ತಿರುವ ಕೇಂದ್ರ ಬಿಂದು ಎಂದು ಗುರುತಿಸಲಾಗಿದೆ.</p>.<p>ಇದೇ ಗ್ರಾಮದಲ್ಲಿ ಕ್ರಿಮಿನಲ್ ಹಿನ್ನೆಲೆ ಹೊಂದಿರುವ 13 ಕುಟುಂಬಗಳಿದ್ದು, ಕುಟುಂಬದ ಸದಸ್ಯರ ವಿರುದ್ಧ ಸರಿ ಸುಮಾರು 100ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಅವುಗಳಲ್ಲಿ ಬಹುತೇಕ ಪ್ರಕರಣಗಳು ಮಾದಕ ವಸ್ತು ಕಳ್ಳಸಾಗಣೆಗೆ ಸಂಬಂಧಿಸಿದ್ದಾಗಿವೆ ಎಂದು ಸಂದೀಪ್ ತಿಳಿಸಿದ್ದಾರೆ. </p>.<p class="title">ಅಲ್ಲದೇ, ಈ ಕುಟುಂಬಗಳು ಪಂಚಾಯತಿಗೆ ಸೇರಿದ 13 ಮರಲಾ (3539.26 ಚದರ ಅಡಿ) ಜಮೀನನ್ನು ಅತಿಕ್ರಮಿಸಿ, ಮನೆಗಳನ್ನು ನಿರ್ಮಿಸಿಕೊಂಡಿರುವುದು ಬೆಳಕಿಗೆ ಬಂದಿತ್ತು. ಈ ಕಾರಣ ಆಡಳಿತಾಧಿಕಾರಿಗಳು ಮನೆಗಳನ್ನು ನೆಲಸಮಗೊಳಿಸಿದ್ದಾರೆ ಎಂದೂ ಸಂದೀಪ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>