<p><strong>ಚಂಡೀಗಢ:</strong> ವಿವಾದಿತ ಕೃಷಿ ಕಾನೂನುಗಳನ್ನು ಹಿಂಪಡೆಯುವ ವೇಳೆ ಕೇಂದ್ರ ಸರ್ಕಾರ ನೀಡಿದ್ದ ಭವರಸೆಗಳನ್ನು ನೆನಪಿಸಲು ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ಪಂಜಾಬ್ನಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಯಿತು.</p><p>ಸಂಗೂರ್, ಜಲಂಧರ್, ಮೊಹಾಲಿ ಹಾಗೂ ಇನ್ನಿತರ ಪ್ರದೇಶಗಳಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಯಿತು. ಇದೇ ವೇಳೆ ಕೃಷಿ ಕಾನೂನಿನ ವಿರುದ್ಧ ಹೋರಾಟದಲ್ಲಿ ಮಡಿದ ರೈತರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.</p>.ಕೃಷಿ ಕಾಯ್ದೆ ರದ್ದು: ರೈತರ ಕಾನೂನು ಹೋರಾಟಕ್ಕೆ ಕೊನೆ.<p>ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಪಡಿಸುವ ಕಾನೂನನ್ನು ಜಾರಿಗೊಳಿಸಲು ನಾವು ಒತ್ತಾಯಿಸುತ್ತೇವೆ. ಕೃಷಿ ಕಾನೂನುಗಳನ್ನು ಹಿಂಪಡೆಯುವ ವೇಳೆ ಸರ್ಕಾರಿ ನೀಡಿದ್ದ ಭರವಸೆಗಳನ್ನು ನೆನಪಿಸಲು ಈ ರ್ಯಾಲಿ ಆಯೋಜಿಸಿದ್ದೇವೆ ಎಂದು ರೈತ ಮುಖಂಡ ಹರಿಂದರ್ ಸಿಂಗ್ ಲಖೋವಾಲ್ ಹೇಳಿದರು.</p><p>‘ಕೃಷಿ ಸಾಲ ಮನ್ನಾ ಹಾಗೂ ಕನಿಷ್ಠ ಬೆಂಬಲ ಬೆಲೆ ನೀಡಬೇಕು ಎನ್ನುವುದು ನಮ್ಮ ಆಗ್ರಹ. ರೈತರ ಆದಾಯ ದ್ವಿಗುಣ ಮಾಡಬೇಕು ಎಂದು ಸರ್ಕಾರ ಹೇಳಿತ್ತು. ಆದರೆ ಈಗ ಸಾಲ ದುಪ್ಪಟ್ಟಾಗಿದೆ. ನಮ್ಮ ಬೆಳೆಗಳಿಗೆ ಸರಿಯಾದ ಬೆಳೆ ಸಿಗುತ್ತಿಲ್ಲ’ ಎಂದು ಲಖೋವಾಲ್ ಹೇಳಿದರು.</p><p>ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದೂ ರೈತರು ಆಗ್ರಹಿಸಿದರು.</p> .ಕೃಷಿ ಕಾಯ್ದೆ ಹಿಂಪಡೆಯುವುದಾಗಿ ಘೋಷಿಸಿದ ಮೋದಿ: ಕಾನೂನು ರದ್ದುಗೊಳಿಸುವುದು ಹೇಗೆ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ವಿವಾದಿತ ಕೃಷಿ ಕಾನೂನುಗಳನ್ನು ಹಿಂಪಡೆಯುವ ವೇಳೆ ಕೇಂದ್ರ ಸರ್ಕಾರ ನೀಡಿದ್ದ ಭವರಸೆಗಳನ್ನು ನೆನಪಿಸಲು ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ಪಂಜಾಬ್ನಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಯಿತು.</p><p>ಸಂಗೂರ್, ಜಲಂಧರ್, ಮೊಹಾಲಿ ಹಾಗೂ ಇನ್ನಿತರ ಪ್ರದೇಶಗಳಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಯಿತು. ಇದೇ ವೇಳೆ ಕೃಷಿ ಕಾನೂನಿನ ವಿರುದ್ಧ ಹೋರಾಟದಲ್ಲಿ ಮಡಿದ ರೈತರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.</p>.ಕೃಷಿ ಕಾಯ್ದೆ ರದ್ದು: ರೈತರ ಕಾನೂನು ಹೋರಾಟಕ್ಕೆ ಕೊನೆ.<p>ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಪಡಿಸುವ ಕಾನೂನನ್ನು ಜಾರಿಗೊಳಿಸಲು ನಾವು ಒತ್ತಾಯಿಸುತ್ತೇವೆ. ಕೃಷಿ ಕಾನೂನುಗಳನ್ನು ಹಿಂಪಡೆಯುವ ವೇಳೆ ಸರ್ಕಾರಿ ನೀಡಿದ್ದ ಭರವಸೆಗಳನ್ನು ನೆನಪಿಸಲು ಈ ರ್ಯಾಲಿ ಆಯೋಜಿಸಿದ್ದೇವೆ ಎಂದು ರೈತ ಮುಖಂಡ ಹರಿಂದರ್ ಸಿಂಗ್ ಲಖೋವಾಲ್ ಹೇಳಿದರು.</p><p>‘ಕೃಷಿ ಸಾಲ ಮನ್ನಾ ಹಾಗೂ ಕನಿಷ್ಠ ಬೆಂಬಲ ಬೆಲೆ ನೀಡಬೇಕು ಎನ್ನುವುದು ನಮ್ಮ ಆಗ್ರಹ. ರೈತರ ಆದಾಯ ದ್ವಿಗುಣ ಮಾಡಬೇಕು ಎಂದು ಸರ್ಕಾರ ಹೇಳಿತ್ತು. ಆದರೆ ಈಗ ಸಾಲ ದುಪ್ಪಟ್ಟಾಗಿದೆ. ನಮ್ಮ ಬೆಳೆಗಳಿಗೆ ಸರಿಯಾದ ಬೆಳೆ ಸಿಗುತ್ತಿಲ್ಲ’ ಎಂದು ಲಖೋವಾಲ್ ಹೇಳಿದರು.</p><p>ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದೂ ರೈತರು ಆಗ್ರಹಿಸಿದರು.</p> .ಕೃಷಿ ಕಾಯ್ದೆ ಹಿಂಪಡೆಯುವುದಾಗಿ ಘೋಷಿಸಿದ ಮೋದಿ: ಕಾನೂನು ರದ್ದುಗೊಳಿಸುವುದು ಹೇಗೆ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>