<p><strong>ಚಂಡೀಗಢ:</strong> ಪಂಜಾಬ್ನಲ್ಲಿ ಭೀಕರ ಪ್ರವಾಹದಿಂದಾಗಿ ಮೃತಪಟ್ಟವರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. ಜತೆಗೆ, ರಾಜ್ಯದಾದ್ಯಂತ 1.84 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಸೋಮವಾರ ನಡೆದ ಪಂಜಾಬ್ ಸಚಿವ ಸಂಪುಟ ಸಭೆಯಲ್ಲಿ ಪ್ರತಿ ಎಕರೆಗೆ ತಲಾ ₹20 ಸಾವಿರ ಪರಿಹಾರ ನೀಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ಜತೆಗೆ, ಪ್ರವಾಹದ ಬಳಿಕ ರೈತರು ತಮ್ಮ ಹೊಲಗಳಲ್ಲಿ ಸಂಗ್ರಹವಾಗಿರುವ ಮರಳನ್ನು ಹೊರತೆಗೆದು ಮಾರಾಟ ಮಾಡಲು ಅವಕಾಶ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. </p><p>ಏತನ್ಮಧ್ಯೆ, ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತುಸು ತಗ್ಗಿದ್ದು, ಪರಿಹಾರ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಬಿಯಾಸ್ ನದಿಯ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಬಿಯಾಸ್ ನದಿಯ ಒಳಹರಿವು ಭಾನುವಾರ 36,968 ಕ್ಯೂಸೆಕ್ನಿಂದ 34,580 ಕ್ಯೂಸೆಕ್ಗೆ ಇಳಿದಿದೆ. ಜತೆಗೆ, ಹೊರಹರಿವು ಭಾನುವಾರ ಸಂಜೆ 90,000 ಕ್ಯೂಸೆಕ್ನಿಂದ 76,008 ಕ್ಯೂಸೆಕ್ಗೆ ಇಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಭಾಕ್ರಾ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಸೋಮವಾರ 1,677.2 ಅಡಿಗಳಿಗೆ ದಾಖಲಾಗಿದ್ದು, ಭಾನುವಾರ 1,677.98 ಅಡಿಗಳಷ್ಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>‘ರಾಜ್ಯದ 15 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದ್ದು, 3.87 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ಪಂಜಾಬ್ ಕಂದಾಯ ಸಚಿವ ಹರ್ದೀಪ್ ಸಿಂಗ್ ಹೇಳಿದ್ದಾರೆ. </p><p>ಮಾನ್ಸಾ, ಮೋಗಾ ಮತ್ತು ಪಟಿಯಾಲ ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಮೂವರು ಮೃತಪಟ್ಟಿದ್ದಾರೆ. ಈ ಮೂಲಕ ಮಳೆ ಸಂಬಂಧಿತ ಅವಘಡಗಳಲ್ಲಿ ಮೃತಪಟ್ಟವರ ಸಂಖ್ಯೆ 51ಕ್ಕೆ ಏರಿದೆ. ಪಠಾಣ್ಕೋಟ್ನಲ್ಲಿ ಇನ್ನೂ ಮೂವರು ಕಾಣೆಯಾಗಿದ್ದಾರೆ ಎಂದು ಸಿಂಗ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ಪಂಜಾಬ್ನಲ್ಲಿ ಭೀಕರ ಪ್ರವಾಹದಿಂದಾಗಿ ಮೃತಪಟ್ಟವರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. ಜತೆಗೆ, ರಾಜ್ಯದಾದ್ಯಂತ 1.84 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಸೋಮವಾರ ನಡೆದ ಪಂಜಾಬ್ ಸಚಿವ ಸಂಪುಟ ಸಭೆಯಲ್ಲಿ ಪ್ರತಿ ಎಕರೆಗೆ ತಲಾ ₹20 ಸಾವಿರ ಪರಿಹಾರ ನೀಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ಜತೆಗೆ, ಪ್ರವಾಹದ ಬಳಿಕ ರೈತರು ತಮ್ಮ ಹೊಲಗಳಲ್ಲಿ ಸಂಗ್ರಹವಾಗಿರುವ ಮರಳನ್ನು ಹೊರತೆಗೆದು ಮಾರಾಟ ಮಾಡಲು ಅವಕಾಶ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. </p><p>ಏತನ್ಮಧ್ಯೆ, ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತುಸು ತಗ್ಗಿದ್ದು, ಪರಿಹಾರ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಬಿಯಾಸ್ ನದಿಯ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಬಿಯಾಸ್ ನದಿಯ ಒಳಹರಿವು ಭಾನುವಾರ 36,968 ಕ್ಯೂಸೆಕ್ನಿಂದ 34,580 ಕ್ಯೂಸೆಕ್ಗೆ ಇಳಿದಿದೆ. ಜತೆಗೆ, ಹೊರಹರಿವು ಭಾನುವಾರ ಸಂಜೆ 90,000 ಕ್ಯೂಸೆಕ್ನಿಂದ 76,008 ಕ್ಯೂಸೆಕ್ಗೆ ಇಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಭಾಕ್ರಾ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಸೋಮವಾರ 1,677.2 ಅಡಿಗಳಿಗೆ ದಾಖಲಾಗಿದ್ದು, ಭಾನುವಾರ 1,677.98 ಅಡಿಗಳಷ್ಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>‘ರಾಜ್ಯದ 15 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದ್ದು, 3.87 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ಪಂಜಾಬ್ ಕಂದಾಯ ಸಚಿವ ಹರ್ದೀಪ್ ಸಿಂಗ್ ಹೇಳಿದ್ದಾರೆ. </p><p>ಮಾನ್ಸಾ, ಮೋಗಾ ಮತ್ತು ಪಟಿಯಾಲ ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಮೂವರು ಮೃತಪಟ್ಟಿದ್ದಾರೆ. ಈ ಮೂಲಕ ಮಳೆ ಸಂಬಂಧಿತ ಅವಘಡಗಳಲ್ಲಿ ಮೃತಪಟ್ಟವರ ಸಂಖ್ಯೆ 51ಕ್ಕೆ ಏರಿದೆ. ಪಠಾಣ್ಕೋಟ್ನಲ್ಲಿ ಇನ್ನೂ ಮೂವರು ಕಾಣೆಯಾಗಿದ್ದಾರೆ ಎಂದು ಸಿಂಗ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>