ಇದೇ ಪ್ರಕರಣದಲ್ಲಿ ಕಳೆದ ವಾರ ವಿ.ಬಿ ಅಧಿಕಾರಿಗಳು ವಿಭಾಗೀಯ ಅರಣ್ಯ ಅಧಿಕಾರಿ ಗುರ್ನಾಮ್ಪ್ರೀತ್ ಸಿಂಗ್ ಮತ್ತು ಹರ್ಮಿಂದರ್ ಸಿಂಗ್ ಹುಮ್ಮಿ ಎಂಬುವವರನ್ನು ಬಂಧಿಸಿದ್ದರು. ಅವರು ನೀಡಿರುವ ಮಾಹಿತಿಯ ಆಧಾರದ ಮೇಲೆ ಸಾಧು ಸಿಂಗ್ ಅವರ ವಿರುದ್ಧ ವಿ.ಬಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸಾಕ್ಷ್ಯ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.