ಖಾಸಗಿ ಶಾಲೆಗಳು ದಾಖಲಾತಿ ಶುಲ್ಕ, ಪುಸ್ತಕ, ಜೆರಾಕ್ಸ್ ಕಾಪಿ ಹಾಗೂ ದೇಣಿಗೆ ಸಂಗ್ರಹ ಮುಂತಾದುವುಗಳಿಂದ ಹಣವನ್ನು ಕೊಳ್ಳೆ ಹೊಡೆಯುತ್ತಿವೆ ಎಂದು ವಿದ್ಯಾರ್ಥಿಗಳ ಹೆತ್ತವರಿಂದ ಹಲವಾರು ದೂರುಗಳು ಬಂದಿವೆ. ಹೀಗಾಗಿ ಈ ನಿರ್ಧಾರವನ್ನು ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ತೆಗೆದುಕೊಂಡಿದ್ದಾರೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.