<p><strong>ಚಂಡೀಗಢ</strong>: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಎಎಪಿ ಸರ್ಕಾರ ಹಾಗೂ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ನಡುವೆ ಮತ್ತೊಂದು ಸುತ್ತಿನ ಸಂಘರ್ಷಕ್ಕೆ ಶುಕ್ರವಾರ ನಡೆದ ವಿಶೇಷ ಅಧಿವೇಶನ ಸಾಕ್ಷಿಯಾಯಿತು.</p>.<p>ಅಧಿವೇಶನದಲ್ಲಿ ಪ್ರಸ್ತಾವಿತ ಮೂರು ಮಸೂದೆಗಳನ್ನು ಮಂಡಿಸದಂತೆ ರಾಜ್ಯಪಾಲರು, ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಮಾನ್, ಕಲಾಪದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.</p>.<p>‘ಮಸೂದೆಗಳನ್ನು ತಡೆಹಿಡಿಯುವಂತೆ ರಾಜ್ಯಪಾಲರು ಹೇಳಿದ್ದಾರೆ. ಒಂದು ವೇಳೆ ಮಂಡಿಸಿದರೂ ಅಂಕಿತ ಹಾಕುವುದಿಲ್ಲ ಎಂದಿದ್ದಾರೆ. ಅವರ ನಡೆ ವಿರುದ್ಧ ಸುಪ್ರೀಂ ಕೋರ್ಟ್ನ ಮೊರೆ ಹೋಗಲಾಗುವುದು’ ಎಂದು ಘೋಷಿಸಿದರು.</p>.<p><strong>ಕಲಾಪ ಮುಂದೂಡಿಕೆ:</strong> ಮೊದಲ ದಿನದ ಕಲಾಪ ಶುರುವಾದ ವೇಳೆ ಮಾತನಾಡಿದ ಮಾನ್, ‘ಸರ್ಕಾರವು ಸದನದಲ್ಲಿ ಯಾವುದೇ ಮಸೂದೆ ಮಂಡಿಸಲು ಇಚ್ಛಿಸುವುದಿಲ್ಲ. ಹಾಗಾಗಿ, ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಬೇಕು’ ಎಂದು ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವಾನ್ಗೆ ಕೋರಿದರು.</p>.<p>‘ರಾಜ್ಯಪಾಲರ ಜತೆ ನಾನು ಸಂಘರ್ಷ ಮುಂದುವರಿಸಲು ಇಚ್ಛಿಸುವುದಿಲ್ಲ. ಸದನದಲ್ಲಿ ಮಂಡಿಸುವ ಮಸೂದೆಗಳಿಗೆ ಅಂಕಿತ ಹಾಕುವುದಾಗಿ ರಾಜ್ಯಪಾಲರು ಹೇಳಬೇಕು. ಜತೆಗೆ, ಕಲಾಪವು ಕಾನೂನುಬದ್ಧವಾಗಿದೆ ಎಂದು ಪ್ರಕಟಿಸುವವರೆಗೂ ಸದನದಲ್ಲಿ ಮಸೂದೆ ಮಂಡಿಸುವುದಿಲ್ಲ’ ಎಂದು ಹೇಳಿದರು.</p>.<p>ಮಾನ್ ಅವರ ಕೋರಿಕೆ ಮೇರೆಗೆ ಕಲಾಪವನ್ನು ಮುಂದೂಡುವ ಬಗ್ಗೆ ನಿರ್ಣಯ ಮಂಡಿಸಲಾಯಿತು. ಇದಕ್ಕೆ ಸದನವು ಒಪ್ಪಿಗೆ ನೀಡಿದ ಬಳಿಕ ಸ್ಪೀಕರ್, ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.</p>.<p><strong>ಪತ್ರದಲ್ಲಿ ಏನಿದೆ?:</strong> ಗುರುವಾರ ಸರ್ಕಾರಕ್ಕೆ ಪತ್ರ ಬರೆದಿದ್ದ ರಾಜ್ಯಪಾಲ ಪುರೋಹಿತ್, ‘ವಿಶೇಷ ಅಧಿವೇಶನಕ್ಕೆ ಬದಲಾಗಿ ಚಳಿಗಾಲದ ಅಧಿವೇಶನ ಕರೆಯುವುದು ಉತ್ತಮ’ ಎಂದು ಸಲಹೆ ನೀಡಿದ್ದರು.</p>.<p>ಸರ್ಕಾರ ಕಾನೂನುಬಾಹಿರವಾಗಿ ಅಧಿವೇಶನ ನಡೆಸಲು ಮುಂದಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಈ ಬಗ್ಗೆ ರಾಷ್ಟ್ರಪತಿ ಅವರಿಗೆ ವರದಿ ಮಾಡಲಾಗುವುದು ಎಂದು ಉಲ್ಲೇಖಿಸಿದ್ದರು.</p>.<p>ಶುಕ್ರವಾರ ಮತ್ತು ಶನಿವಾರ ಕರೆದಿರುವ ಅಧಿವೇಶನವು ಬಜೆಟ್ ಕಲಾಪದ ಮುಂದುವರಿದ ಭಾಗವೆಂದು ಸರ್ಕಾರ ಬಿಂಬಿಸುತ್ತಿದೆ. ಆದರೆ, ಇದು ಕಾನೂನುಬಾಹಿರವಾಗಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ</strong>: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಎಎಪಿ ಸರ್ಕಾರ ಹಾಗೂ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ನಡುವೆ ಮತ್ತೊಂದು ಸುತ್ತಿನ ಸಂಘರ್ಷಕ್ಕೆ ಶುಕ್ರವಾರ ನಡೆದ ವಿಶೇಷ ಅಧಿವೇಶನ ಸಾಕ್ಷಿಯಾಯಿತು.</p>.<p>ಅಧಿವೇಶನದಲ್ಲಿ ಪ್ರಸ್ತಾವಿತ ಮೂರು ಮಸೂದೆಗಳನ್ನು ಮಂಡಿಸದಂತೆ ರಾಜ್ಯಪಾಲರು, ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಮಾನ್, ಕಲಾಪದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.</p>.<p>‘ಮಸೂದೆಗಳನ್ನು ತಡೆಹಿಡಿಯುವಂತೆ ರಾಜ್ಯಪಾಲರು ಹೇಳಿದ್ದಾರೆ. ಒಂದು ವೇಳೆ ಮಂಡಿಸಿದರೂ ಅಂಕಿತ ಹಾಕುವುದಿಲ್ಲ ಎಂದಿದ್ದಾರೆ. ಅವರ ನಡೆ ವಿರುದ್ಧ ಸುಪ್ರೀಂ ಕೋರ್ಟ್ನ ಮೊರೆ ಹೋಗಲಾಗುವುದು’ ಎಂದು ಘೋಷಿಸಿದರು.</p>.<p><strong>ಕಲಾಪ ಮುಂದೂಡಿಕೆ:</strong> ಮೊದಲ ದಿನದ ಕಲಾಪ ಶುರುವಾದ ವೇಳೆ ಮಾತನಾಡಿದ ಮಾನ್, ‘ಸರ್ಕಾರವು ಸದನದಲ್ಲಿ ಯಾವುದೇ ಮಸೂದೆ ಮಂಡಿಸಲು ಇಚ್ಛಿಸುವುದಿಲ್ಲ. ಹಾಗಾಗಿ, ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಬೇಕು’ ಎಂದು ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವಾನ್ಗೆ ಕೋರಿದರು.</p>.<p>‘ರಾಜ್ಯಪಾಲರ ಜತೆ ನಾನು ಸಂಘರ್ಷ ಮುಂದುವರಿಸಲು ಇಚ್ಛಿಸುವುದಿಲ್ಲ. ಸದನದಲ್ಲಿ ಮಂಡಿಸುವ ಮಸೂದೆಗಳಿಗೆ ಅಂಕಿತ ಹಾಕುವುದಾಗಿ ರಾಜ್ಯಪಾಲರು ಹೇಳಬೇಕು. ಜತೆಗೆ, ಕಲಾಪವು ಕಾನೂನುಬದ್ಧವಾಗಿದೆ ಎಂದು ಪ್ರಕಟಿಸುವವರೆಗೂ ಸದನದಲ್ಲಿ ಮಸೂದೆ ಮಂಡಿಸುವುದಿಲ್ಲ’ ಎಂದು ಹೇಳಿದರು.</p>.<p>ಮಾನ್ ಅವರ ಕೋರಿಕೆ ಮೇರೆಗೆ ಕಲಾಪವನ್ನು ಮುಂದೂಡುವ ಬಗ್ಗೆ ನಿರ್ಣಯ ಮಂಡಿಸಲಾಯಿತು. ಇದಕ್ಕೆ ಸದನವು ಒಪ್ಪಿಗೆ ನೀಡಿದ ಬಳಿಕ ಸ್ಪೀಕರ್, ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.</p>.<p><strong>ಪತ್ರದಲ್ಲಿ ಏನಿದೆ?:</strong> ಗುರುವಾರ ಸರ್ಕಾರಕ್ಕೆ ಪತ್ರ ಬರೆದಿದ್ದ ರಾಜ್ಯಪಾಲ ಪುರೋಹಿತ್, ‘ವಿಶೇಷ ಅಧಿವೇಶನಕ್ಕೆ ಬದಲಾಗಿ ಚಳಿಗಾಲದ ಅಧಿವೇಶನ ಕರೆಯುವುದು ಉತ್ತಮ’ ಎಂದು ಸಲಹೆ ನೀಡಿದ್ದರು.</p>.<p>ಸರ್ಕಾರ ಕಾನೂನುಬಾಹಿರವಾಗಿ ಅಧಿವೇಶನ ನಡೆಸಲು ಮುಂದಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಈ ಬಗ್ಗೆ ರಾಷ್ಟ್ರಪತಿ ಅವರಿಗೆ ವರದಿ ಮಾಡಲಾಗುವುದು ಎಂದು ಉಲ್ಲೇಖಿಸಿದ್ದರು.</p>.<p>ಶುಕ್ರವಾರ ಮತ್ತು ಶನಿವಾರ ಕರೆದಿರುವ ಅಧಿವೇಶನವು ಬಜೆಟ್ ಕಲಾಪದ ಮುಂದುವರಿದ ಭಾಗವೆಂದು ಸರ್ಕಾರ ಬಿಂಬಿಸುತ್ತಿದೆ. ಆದರೆ, ಇದು ಕಾನೂನುಬಾಹಿರವಾಗಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>