<p><strong>ಚಂಡೀಗಢ</strong>: ಅಮೃತಸರದ ರಾಜ್ಯ ಉಗ್ರಾಣ ನಿಗಮದ ಅಧಿಕಾರಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪಂಜಾಬ್ನ ಸಚಿವ ಲಾಲ್ಜಿತ್ ಸಿಂಗ್ ಭುಲ್ಲಾರ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. </p>.<p>ತರನ್ ತಾರನ್ ಜಿಲ್ಲೆಯ ಪಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಲಾಲ್ಜಿತ್ ಅವರು ಭಗವಂತ್ ಮಾನ್ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದರು.</p>.<p>‘ತಮ್ಮ ಮೇಲೆ ಆಧಾರರಹಿತ ಆರೋಪ ಮಾಡಲಾಗಿದೆ’ ಎಂದು ಭುಲ್ಲಾರ್ ತಿರುಗೇಟು ನೀಡಿದ್ದಾರೆ.</p>.<p class="title">ಆರೋಪ ಬಂದ ಬೆನ್ನಲ್ಲೇ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಭುಲ್ಲಾರ್ ಅವರಿಗೆ ಸೂಚನೆ ನೀಡಿದ್ದರು. ಪ್ರಕರಣದ ತನಿಖೆ ನಡೆಸುವಂತೆ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದರು. </p>.<p class="title">‘ಪ್ರಕರಣದ ಹಿಂದಿನ ಕಾರಣಗಳು ತನಿಖೆಯಿಂದ ಪತ್ತೆಯಾಗಲಿವೆ. ತನಿಖೆ ಆರಂಭಿಸುವ ಮೊದಲು ಸಚಿವರಿಂದ ರಾಜೀನಾಮೆ ಪಡೆಯುವ ಮೂಲಕ ಯಾರೂ ಒತ್ತಡಕ್ಕೆ ಒಳಗಾಗದಂತೆ ಕ್ರಮ ವಹಿಸಲಾಗಿದೆ’ ಎಂದು ಮಾನ್ ತಿಳಿಸಿದ್ದಾರೆ.</p>.<p class="title">‘ಈ ವಿಚಾರದಲ್ಲಿ ಯಾವುದೇ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ. ಭುಲ್ಲಾರ್ ಅವರ ಖಾತೆಯನ್ನು ಬೇರೆಯವರಿಗೆ ವಹಿಸಲಾಗುವುದು’ ಎಂದು ಹೇಳಿದ್ದಾರೆ.</p>.<p class="title">ಲಾಲ್ಜಿತ್ ಸಿಂಗ್ ಭುಲ್ಲಾರ್ ಅವರ ಕಿರುಕುಳದಿಂದ ಬೇಸತ್ತು ತಾನು ವಿಷ ಸೇವಿಸಿ, ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ರಾಜ್ಯ ಉಗ್ರಾಣ ನಿಗಮದ ವ್ಯವಸ್ಥಾಪಕರಾದ ಗಗನ್ದೀಪ್ ಸಿಂಗ್ ರಾಂಧವ ಅವರು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು.</p>.<p class="title">ಇದರ ಬೆನ್ನಲ್ಲೇ, ಬಿಜೆಪಿ, ಕಾಂಗ್ರೆಸ್ ಹಾಗೂ ಶಿರೋಮಣಿ ಅಕಾಲಿದಳದ ಮುಖಂಡರು ಸಚಿವರು ರಾಜೀನಾಮೆಗೆ ಆಗ್ರಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ</strong>: ಅಮೃತಸರದ ರಾಜ್ಯ ಉಗ್ರಾಣ ನಿಗಮದ ಅಧಿಕಾರಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪಂಜಾಬ್ನ ಸಚಿವ ಲಾಲ್ಜಿತ್ ಸಿಂಗ್ ಭುಲ್ಲಾರ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. </p>.<p>ತರನ್ ತಾರನ್ ಜಿಲ್ಲೆಯ ಪಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಲಾಲ್ಜಿತ್ ಅವರು ಭಗವಂತ್ ಮಾನ್ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದರು.</p>.<p>‘ತಮ್ಮ ಮೇಲೆ ಆಧಾರರಹಿತ ಆರೋಪ ಮಾಡಲಾಗಿದೆ’ ಎಂದು ಭುಲ್ಲಾರ್ ತಿರುಗೇಟು ನೀಡಿದ್ದಾರೆ.</p>.<p class="title">ಆರೋಪ ಬಂದ ಬೆನ್ನಲ್ಲೇ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಭುಲ್ಲಾರ್ ಅವರಿಗೆ ಸೂಚನೆ ನೀಡಿದ್ದರು. ಪ್ರಕರಣದ ತನಿಖೆ ನಡೆಸುವಂತೆ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದರು. </p>.<p class="title">‘ಪ್ರಕರಣದ ಹಿಂದಿನ ಕಾರಣಗಳು ತನಿಖೆಯಿಂದ ಪತ್ತೆಯಾಗಲಿವೆ. ತನಿಖೆ ಆರಂಭಿಸುವ ಮೊದಲು ಸಚಿವರಿಂದ ರಾಜೀನಾಮೆ ಪಡೆಯುವ ಮೂಲಕ ಯಾರೂ ಒತ್ತಡಕ್ಕೆ ಒಳಗಾಗದಂತೆ ಕ್ರಮ ವಹಿಸಲಾಗಿದೆ’ ಎಂದು ಮಾನ್ ತಿಳಿಸಿದ್ದಾರೆ.</p>.<p class="title">‘ಈ ವಿಚಾರದಲ್ಲಿ ಯಾವುದೇ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ. ಭುಲ್ಲಾರ್ ಅವರ ಖಾತೆಯನ್ನು ಬೇರೆಯವರಿಗೆ ವಹಿಸಲಾಗುವುದು’ ಎಂದು ಹೇಳಿದ್ದಾರೆ.</p>.<p class="title">ಲಾಲ್ಜಿತ್ ಸಿಂಗ್ ಭುಲ್ಲಾರ್ ಅವರ ಕಿರುಕುಳದಿಂದ ಬೇಸತ್ತು ತಾನು ವಿಷ ಸೇವಿಸಿ, ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ರಾಜ್ಯ ಉಗ್ರಾಣ ನಿಗಮದ ವ್ಯವಸ್ಥಾಪಕರಾದ ಗಗನ್ದೀಪ್ ಸಿಂಗ್ ರಾಂಧವ ಅವರು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು.</p>.<p class="title">ಇದರ ಬೆನ್ನಲ್ಲೇ, ಬಿಜೆಪಿ, ಕಾಂಗ್ರೆಸ್ ಹಾಗೂ ಶಿರೋಮಣಿ ಅಕಾಲಿದಳದ ಮುಖಂಡರು ಸಚಿವರು ರಾಜೀನಾಮೆಗೆ ಆಗ್ರಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>