ಶಿವಸೇನಾ ಹಾಗೂ ಖಲಿಸ್ತಾನ ಪರ ಗುಂಪಿನ ನಡುವೆ ಪಟಿಯಾಲದಲ್ಲಿ ಶುಕ್ರವಾರಘರ್ಷಣೆ ನಡೆದಿತ್ತು. ಘಟನೆಯಲ್ಲಿ ಕಲ್ಲುತೂರಾಟ ನಡೆದು ಹಲವರು ಗಾಯಗೊಂಡಿದ್ದರು. ಆ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ 9.30ರಿಂದ ಸಂಜೆ 6 ಗಂಟೆ ವರೆಗೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಕಡಿತಗೊಳಿಸಲಾಗಿತ್ತು. ಈ ಅವಧಿಯಲ್ಲಿ ಮೊಬೈಲ್ ಕರೆ ಹೊರತುಪಡಿಸಿದರೆ, ಇನ್ನಿತರೆ ಯಾವುದೇ ಸಂಪರ್ಕ ಸೇವೆಗಳೂ ಲಭ್ಯವಿರಲಿಲ್ಲ.