<p><strong>ಫಗ್ವಾರ:</strong> ಡ್ರಗ್ ಪೆಡ್ಲರ್ನನ್ನು ಪೊಲೀಸರ ವಶದಿಂದ ಬಿಡುಗಡೆಗೊಳಿಸಲು ಅವನ ಕುಟುಂಬದಿಂದ ಹಣ ಪಡೆದ ಆರೋಪದ ಮೇಲೆ ಪಂಜಾಬ್ನಲ್ಲಿ ನಾಲ್ಕು ಜನ ಪೊಲೀಸ್ ಅಧಿಕಾರಿಗಳನ್ನು ಬಂಧಿಸಲಾಗಿದೆ ಎಂದು ಡಿಜಿಐ ನವೀನ್ ಸಿಂಗ್ಲಾ ತಿಳಿಸಿದರು.</p><p>ಫಗ್ವಾರ ಪೊಲೀಸ್ ಠಾಣೆಯ ಅಪರಾಧ ತನಿಖಾ ವಿಭಾಗ(ಸಿಐಎ)ದ ಎಸ್ಐ ಬಿಸ್ಮನ್ ಸಾಹಿ, ಎಎಸ್ಐ ಜಸ್ವಿಂದರ್ ಸಿಂಗ್, ನಿರ್ಮಲ್ ಕುಮಾರ್ ಹಾಗೂ ಹೆಡ್ ಕಾನ್ಸ್ಟೇಬಲ್ ಜಗರೂಪ್ ಸಿಂಗ್ ಅವರನ್ನು ಭ್ರಷ್ಟಾಚಾರ ತಡೆ ಕಾಯ್ದೆ ಅಡಿಯಲ್ಲಿ ಶುಕ್ರವಾರ ಬಂಧಿಸಲಾಗಿದೆ ಎಂದರು.</p> .ರಾಜ್ಯ ಪೊಲೀಸ್ ಇಲಾಖೆಯ ಪ್ರಭಾರ ಡಿಜಿಪಿಯಾಗಿ ಎಂ.ಎ. ಸಲೀಂ ನೇಮಕ.<p>ಹನಿ ಎನ್ನುವ ಡ್ರಗ್ ಪೆಡ್ಲರ್ನನ್ನು ಬಿಡುಗಡೆಮಾಡಲು ಅವನ ಕುಟುಂಬದಿಂದ ₹2.5 ಲಕ್ಷ ಮೊತ್ತವನ್ನು ಆರೋಪಿಗಳು ಪಡೆದಿದ್ದಾರೆ. ಯಾವುದೇ ಕಾರಣಕ್ಕೂ ಭ್ರಷ್ಟಾಚಾರವನ್ನು ನಾವು ಸಹಿಸುವುದಿಲ್ಲ. ಅದರಲ್ಲೂ ಪೊಲೀಸ್ ಇಲಾಖೆಯಲ್ಲಿ ಈ ರೀತಿಯ ಘಟನೆಗಳು ಜರುಗಬಾರದು, ಹಾಗಾಗಿ ಕಠಿಣ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.</p><p>ಆರೋಪಿಗಳನ್ನು ಫಗ್ವಾರ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ವಿಚಾರಣೆ ಮುಗಿಯುವರೆಗೆ ಅವರನ್ನು ಅಮಾನತ್ತಿನಲ್ಲಿಡಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಫಗ್ವಾರ:</strong> ಡ್ರಗ್ ಪೆಡ್ಲರ್ನನ್ನು ಪೊಲೀಸರ ವಶದಿಂದ ಬಿಡುಗಡೆಗೊಳಿಸಲು ಅವನ ಕುಟುಂಬದಿಂದ ಹಣ ಪಡೆದ ಆರೋಪದ ಮೇಲೆ ಪಂಜಾಬ್ನಲ್ಲಿ ನಾಲ್ಕು ಜನ ಪೊಲೀಸ್ ಅಧಿಕಾರಿಗಳನ್ನು ಬಂಧಿಸಲಾಗಿದೆ ಎಂದು ಡಿಜಿಐ ನವೀನ್ ಸಿಂಗ್ಲಾ ತಿಳಿಸಿದರು.</p><p>ಫಗ್ವಾರ ಪೊಲೀಸ್ ಠಾಣೆಯ ಅಪರಾಧ ತನಿಖಾ ವಿಭಾಗ(ಸಿಐಎ)ದ ಎಸ್ಐ ಬಿಸ್ಮನ್ ಸಾಹಿ, ಎಎಸ್ಐ ಜಸ್ವಿಂದರ್ ಸಿಂಗ್, ನಿರ್ಮಲ್ ಕುಮಾರ್ ಹಾಗೂ ಹೆಡ್ ಕಾನ್ಸ್ಟೇಬಲ್ ಜಗರೂಪ್ ಸಿಂಗ್ ಅವರನ್ನು ಭ್ರಷ್ಟಾಚಾರ ತಡೆ ಕಾಯ್ದೆ ಅಡಿಯಲ್ಲಿ ಶುಕ್ರವಾರ ಬಂಧಿಸಲಾಗಿದೆ ಎಂದರು.</p> .ರಾಜ್ಯ ಪೊಲೀಸ್ ಇಲಾಖೆಯ ಪ್ರಭಾರ ಡಿಜಿಪಿಯಾಗಿ ಎಂ.ಎ. ಸಲೀಂ ನೇಮಕ.<p>ಹನಿ ಎನ್ನುವ ಡ್ರಗ್ ಪೆಡ್ಲರ್ನನ್ನು ಬಿಡುಗಡೆಮಾಡಲು ಅವನ ಕುಟುಂಬದಿಂದ ₹2.5 ಲಕ್ಷ ಮೊತ್ತವನ್ನು ಆರೋಪಿಗಳು ಪಡೆದಿದ್ದಾರೆ. ಯಾವುದೇ ಕಾರಣಕ್ಕೂ ಭ್ರಷ್ಟಾಚಾರವನ್ನು ನಾವು ಸಹಿಸುವುದಿಲ್ಲ. ಅದರಲ್ಲೂ ಪೊಲೀಸ್ ಇಲಾಖೆಯಲ್ಲಿ ಈ ರೀತಿಯ ಘಟನೆಗಳು ಜರುಗಬಾರದು, ಹಾಗಾಗಿ ಕಠಿಣ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.</p><p>ಆರೋಪಿಗಳನ್ನು ಫಗ್ವಾರ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ವಿಚಾರಣೆ ಮುಗಿಯುವರೆಗೆ ಅವರನ್ನು ಅಮಾನತ್ತಿನಲ್ಲಿಡಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>