ಖರರ್ (ಪಂಜಾಬ್): ಪಂಜಾಬ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಅವರುಇಲ್ಲಿನ ಶ್ರೀ ಕಟಲ್ಗಡ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಇದೇ ವೇಳೆ ಅವರು, ತಮ್ಮ ಸರ್ಕಾರವು ಅತ್ಯಂತ ಸಣ್ಣ ಅವಧಿಯಲ್ಲಿ, ಜನರ ಕಲ್ಯಾಣಕ್ಕಾಗಿ ಹೆಚ್ಚಿನ ಕೆಲಸಗಳನ್ನು ಮಾಡಿದೆ ಎಂದು ಹೇಳಿಕೊಂಡಿದ್ದಾರೆ.