ಕಳೆದ ವರ್ಷ ಕೋವಿಡ್–19 ಲಾಕ್ಡೌನ್ ಸಂದರ್ಭದಲ್ಲಿ ಆರ್ಥಿಕವಾಗಿ ಹಿಂದುಳಿದವರು, ವಲಸೆ ಕಾರ್ಮಿಕರು ಸುರಕ್ಷಿತವಾಗಿ ಊರುಗಳಿಗೆ ಮರಳಲು ಬಸ್ಸು, ವಿಮಾನದ ವ್ಯವಸ್ಥೆಯನ್ನು ಸೋನು ಸೂದ್ ಮಾಡಿದ್ದರು. ತಮ್ಮ ಸ್ವಂತ ಖರ್ಚಿನಲ್ಲಿ ವಾಹನ ವ್ಯವಸ್ಥೆ ಮಾಡಿದ್ದಲ್ಲದೇ ಆರ್ಥಿಕ ಸಹಾಯವನ್ನೂ ನೀಡಿದ್ದರು. ಸೋನು ಅವರ ಈ ಕಾರ್ಯಕ್ಕೆ ದೇಶವೇ ತಲೆದೂಗಿತ್ತು. ರಾಜಕಾರಣಿಗಳು, ಸಿನಿಮಾರಂಗದವರು ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಕೂಡ ಸೋನು ಮಾಡಿದ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಹೀಗಾಗಿ ಅವರ ಸಹೋದರಿಯ ಪಕ್ಷ ಸೇರ್ಪಡೆಯಿಂದ ಕಾಂಗ್ರೆಸ್ಗೆ ಹೆಚ್ಚಿನ ನೆರವಾಗಲಿದೆ ಎಂದು ಭಾವಿಸಲಾಗಿತ್ತು. ಆದರೆ, ಎಲ್ಲ ಲೆಕ್ಕಾಚಾರಗಳನ್ನೂ ಎಎಪಿ ಬುಡಮೇಲು ಮಾಡಿದೆ.