<p><strong>ಚಂಡೀಗಢ/ಅಮೃತಸರ:</strong> ಪಂಜಾಬ್ನ ಅಮೃತಸರ ಜಿಲ್ಲೆಯ ಮಜಿತಾ ಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 21 ಮಂದಿ ಮೃತಪಟ್ಟಿದ್ದಾರೆ.</p><p>ಸಾವಿಗೀಡಾದವರಲ್ಲಿ ಬಹುತೇಕರು ದಿನಗೂಲಿ ಕಾರ್ಮಿಕರು. ನಕಲಿ ಮದ್ಯ ಸೇವಿಸಿ ಅಸ್ವಸ್ಥಗೊಂಡ ಹಲವರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ.</p><p>ದುರಂತಕ್ಕೆ ಸಂಬಂಧಿಸಿದಂತೆ 10 ಆರೋಪಿಗಳನ್ನು ಬಂಧಿಸಲಾಗಿದೆ.</p><p>ಎಥೆನಾಲ್ ಬದಲಿಗೆ ಕಡಿಮೆ ಬೆಲೆಯಲ್ಲಿ ಸಿಗುವ ಮೆಥೆನಾಲ್ ಅನ್ನು ಆನ್ಲೈನ್ ಮೂಲಕ ಖರೀದಿಸಿ ಮದ್ಯ ತಯಾರಿಸಲು ಬಳಸಲಾಗಿತ್ತು. ಇದರಿಂದಲೇ ಜನರ ಸಾವು ಸಂಭವಿಸಿವೆ ಎಂದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ.</p><p>ಕಿಂಗ್ಪಿನ್ ಸಾಹಿಬ್ ಸಿಂಗ್ ಮೆಥೆನಾಲ್ ಪೂರೈಕೆ ಮಾಡಿದ್ದರು. ನಿರ್ಲಕ್ಷ್ಯ ಆರೋಪದ ಮೇಲೆ ಡಿಎಸ್ಪಿ, ಸಬ್ಇನ್ಸ್ಪೆಕ್ಟರ್ ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಅವರು ತಿಳಿಸಿದ್ದಾರೆ. ದುರಂತ ನಡೆದ ಸ್ಥಳಗಳಿಗೆ ವೈದ್ಯಕೀಯ ತಂಡಗಳನ್ನು ನಿಯೋಜಿಸಲಾಗಿದೆ.</p><p>ದುರಂತ ಸ್ಥಳಕ್ಕೆ ಭೇಟಿ ನೀಡಿದ ನಂತರ ‘ಎಕ್ಸ್’ ಪೋಸ್ಟ್ ಮಾಡಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್, ‘ಇವು ಸಾವಲ್ಲ, ಕೊಲೆಗಳು. ಅಮಾಯಕರ ಸಾವಿಗೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ’ ಎಂದು ಹೇಳಿದ್ದಾರೆ.</p><p>ಆಮ್ ಆದ್ಮಿ ಸರ್ಕಾರ ನಕಲಿ ಮದ್ಯದ ಜಾಲ ಮಟ್ಟಹಾಕುವಲ್ಲಿ ವಿಫಲವಾಗಿದೆ. ದುರಂತದ ಹೊಣೆ ಹೊತ್ತು ಮುಖ್ಯಮಂತ್ರಿ ಭಗವಂತ ಮಾನ್, ಅಬಕಾರಿ ಸಚಿವ ಹರ್ಪಲ್ ಸಿಂಗ್ ಚೀಮಾ ರಾಜೀನಾಮೆ ಕೊಡಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸಿವೆ.</p><p>ಒಂದು ವರ್ಷದಲ್ಲಿ ಇದು ಪಂಜಾಬ್ನ ಎರಡನೇ ದೊಡ್ಡ ಕಳ್ಳಭಟ್ಟಿ ದುರಂತವಾಗಿದೆ. 2024ರ ಮಾರ್ಚ್ನಲ್ಲಿ 20 ಜನರು ಸಂಗ್ರೂರ್ನಲ್ಲಿ ನಕಲಿ ಮದ್ಯ ಸೇವಿಸಿ ಸಾವಿಗೀಡಾಗಿದ್ದರು. 2020ರಲ್ಲಿ 120 ಮಂದಿ ಜೀವ ಬಿಟ್ಟಿದ್ದರು.</p><p>ಮಜಿತಾದ ಡಿಎಸ್ಪಿ ಮತ್ತು ಠಾಣಾಧಿಕಾರಿಯನ್ನು ಅಮಾನತು ಮಾಡಲಾಗಿದ್ದು, ಇಲಾಖೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಡಿಜಿಪಿ ಗೌರವ್ ಯಾದವ್ ತಿಳಿಸಿದ್ದಾರೆ.</p>.ಬಿಹಾರ | ಶಂಕಿತ ನಕಲಿ ಮದ್ಯ ಸೇವನೆ: 7 ಮಂದಿ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ/ಅಮೃತಸರ:</strong> ಪಂಜಾಬ್ನ ಅಮೃತಸರ ಜಿಲ್ಲೆಯ ಮಜಿತಾ ಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 21 ಮಂದಿ ಮೃತಪಟ್ಟಿದ್ದಾರೆ.</p><p>ಸಾವಿಗೀಡಾದವರಲ್ಲಿ ಬಹುತೇಕರು ದಿನಗೂಲಿ ಕಾರ್ಮಿಕರು. ನಕಲಿ ಮದ್ಯ ಸೇವಿಸಿ ಅಸ್ವಸ್ಥಗೊಂಡ ಹಲವರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ.</p><p>ದುರಂತಕ್ಕೆ ಸಂಬಂಧಿಸಿದಂತೆ 10 ಆರೋಪಿಗಳನ್ನು ಬಂಧಿಸಲಾಗಿದೆ.</p><p>ಎಥೆನಾಲ್ ಬದಲಿಗೆ ಕಡಿಮೆ ಬೆಲೆಯಲ್ಲಿ ಸಿಗುವ ಮೆಥೆನಾಲ್ ಅನ್ನು ಆನ್ಲೈನ್ ಮೂಲಕ ಖರೀದಿಸಿ ಮದ್ಯ ತಯಾರಿಸಲು ಬಳಸಲಾಗಿತ್ತು. ಇದರಿಂದಲೇ ಜನರ ಸಾವು ಸಂಭವಿಸಿವೆ ಎಂದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ.</p><p>ಕಿಂಗ್ಪಿನ್ ಸಾಹಿಬ್ ಸಿಂಗ್ ಮೆಥೆನಾಲ್ ಪೂರೈಕೆ ಮಾಡಿದ್ದರು. ನಿರ್ಲಕ್ಷ್ಯ ಆರೋಪದ ಮೇಲೆ ಡಿಎಸ್ಪಿ, ಸಬ್ಇನ್ಸ್ಪೆಕ್ಟರ್ ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಅವರು ತಿಳಿಸಿದ್ದಾರೆ. ದುರಂತ ನಡೆದ ಸ್ಥಳಗಳಿಗೆ ವೈದ್ಯಕೀಯ ತಂಡಗಳನ್ನು ನಿಯೋಜಿಸಲಾಗಿದೆ.</p><p>ದುರಂತ ಸ್ಥಳಕ್ಕೆ ಭೇಟಿ ನೀಡಿದ ನಂತರ ‘ಎಕ್ಸ್’ ಪೋಸ್ಟ್ ಮಾಡಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್, ‘ಇವು ಸಾವಲ್ಲ, ಕೊಲೆಗಳು. ಅಮಾಯಕರ ಸಾವಿಗೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ’ ಎಂದು ಹೇಳಿದ್ದಾರೆ.</p><p>ಆಮ್ ಆದ್ಮಿ ಸರ್ಕಾರ ನಕಲಿ ಮದ್ಯದ ಜಾಲ ಮಟ್ಟಹಾಕುವಲ್ಲಿ ವಿಫಲವಾಗಿದೆ. ದುರಂತದ ಹೊಣೆ ಹೊತ್ತು ಮುಖ್ಯಮಂತ್ರಿ ಭಗವಂತ ಮಾನ್, ಅಬಕಾರಿ ಸಚಿವ ಹರ್ಪಲ್ ಸಿಂಗ್ ಚೀಮಾ ರಾಜೀನಾಮೆ ಕೊಡಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸಿವೆ.</p><p>ಒಂದು ವರ್ಷದಲ್ಲಿ ಇದು ಪಂಜಾಬ್ನ ಎರಡನೇ ದೊಡ್ಡ ಕಳ್ಳಭಟ್ಟಿ ದುರಂತವಾಗಿದೆ. 2024ರ ಮಾರ್ಚ್ನಲ್ಲಿ 20 ಜನರು ಸಂಗ್ರೂರ್ನಲ್ಲಿ ನಕಲಿ ಮದ್ಯ ಸೇವಿಸಿ ಸಾವಿಗೀಡಾಗಿದ್ದರು. 2020ರಲ್ಲಿ 120 ಮಂದಿ ಜೀವ ಬಿಟ್ಟಿದ್ದರು.</p><p>ಮಜಿತಾದ ಡಿಎಸ್ಪಿ ಮತ್ತು ಠಾಣಾಧಿಕಾರಿಯನ್ನು ಅಮಾನತು ಮಾಡಲಾಗಿದ್ದು, ಇಲಾಖೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಡಿಜಿಪಿ ಗೌರವ್ ಯಾದವ್ ತಿಳಿಸಿದ್ದಾರೆ.</p>.ಬಿಹಾರ | ಶಂಕಿತ ನಕಲಿ ಮದ್ಯ ಸೇವನೆ: 7 ಮಂದಿ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>