<p><strong>ಚಂಡೀಗಢ</strong>: ಪಂಜಾಬ್ನ ತರನ್ ತಾರನ್ನಲ್ಲಿ ತನ್ನ ಸಹಪಾಠಿಯನ್ನು ಗುಂಡಿಕ್ಕಿ ಕೊಂದು ತಾನು ಗುಂಡು ಹಾರಿಸಿಕೊಂಡಿದ್ದ ಕಾನೂನು ವಿದ್ಯಾರ್ಥಿ ಮೃತಪಟ್ಟಿದ್ದಾರೆ.</p>.<p>‘ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಿನ್ಸ್ ರಾಜ್(20) ಬುಧವಾರ ರಾತ್ರಿ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಪ್ರಿನ್ಸ್ ರಾಜ್, ಸಂದೀಪ್ ಕೌರ್(19) ಮತ್ತು ಮತ್ತೊಬ್ಬ ವಿದ್ಯಾರ್ಥಿನಿ ಸೋಮವಾರ ಕಾಲೇಜಿನ ಕೊಠಡಿಯಲ್ಲಿ ಕುಳಿತು ಮಾತನಾಡುತ್ತಿದ್ದರು. ಈ ವೇಳೆ ತನ್ನ ಚೀಲದಿಂದ ಪಿಸ್ತೂಲನ್ನು ತೆಗೆದು ಪ್ರಿನ್ಸ್, ಸಹಪಾಠಿ ಕೌರ್ ಮೇಲೆ ಗುಂಡು ಹಾರಿಸಿದ್ದ. ಬಳಿಕ ತನ್ನ ತಲೆಗೆ ಗುಂಡು ಹೊಡೆದುಕೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>ಪ್ರಿನ್ಸ್ ರಾಜ್ ಮತ್ತು ಸಂದೀಪ್ ಕೌರ್ ಅವರು ಮೈ ಭಾಗೊ ಕಾನೂನು ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳು. </p>.<p>ಕೆಲ ದಿನಗಳಿಂದ ಸಂದೀಪ್ಗೆ ಪ್ರಿನ್ಸ್ ಕಿರುಕುಳ ನೀಡುತ್ತಿದ್ದ. ಮನೆಯವರೆಗೆ ಹಿಂಬಾಲಿಸಿಕೊಂಡು ಬರುತ್ತಿದ್ದ. ಸಂದೀಪ್ ಕೌರ್ಗೆ ಬೇರೊಬ್ಬರ ಜೊತೆ ವಿವಾಹ ನಿಶ್ಚಿತಾರ್ಥವಾಗಿತ್ತು ಎಂದು ಸಂದೀಪ್ ಕೌರ್ ಕುಟುಂಬಸ್ಥರೊಬ್ಬರು ತಿಳಿಸಿದ್ದಾರೆ.</p>.<p>ಕೃತ್ಯಕ್ಕೆ ಪ್ರಿನ್ಸ್ ಬಳಸಿದ್ದ ಪಿಸ್ತೂಲ್ ಅಕ್ರಮವಾಗಿ ಖರೀದಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ</strong>: ಪಂಜಾಬ್ನ ತರನ್ ತಾರನ್ನಲ್ಲಿ ತನ್ನ ಸಹಪಾಠಿಯನ್ನು ಗುಂಡಿಕ್ಕಿ ಕೊಂದು ತಾನು ಗುಂಡು ಹಾರಿಸಿಕೊಂಡಿದ್ದ ಕಾನೂನು ವಿದ್ಯಾರ್ಥಿ ಮೃತಪಟ್ಟಿದ್ದಾರೆ.</p>.<p>‘ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಿನ್ಸ್ ರಾಜ್(20) ಬುಧವಾರ ರಾತ್ರಿ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಪ್ರಿನ್ಸ್ ರಾಜ್, ಸಂದೀಪ್ ಕೌರ್(19) ಮತ್ತು ಮತ್ತೊಬ್ಬ ವಿದ್ಯಾರ್ಥಿನಿ ಸೋಮವಾರ ಕಾಲೇಜಿನ ಕೊಠಡಿಯಲ್ಲಿ ಕುಳಿತು ಮಾತನಾಡುತ್ತಿದ್ದರು. ಈ ವೇಳೆ ತನ್ನ ಚೀಲದಿಂದ ಪಿಸ್ತೂಲನ್ನು ತೆಗೆದು ಪ್ರಿನ್ಸ್, ಸಹಪಾಠಿ ಕೌರ್ ಮೇಲೆ ಗುಂಡು ಹಾರಿಸಿದ್ದ. ಬಳಿಕ ತನ್ನ ತಲೆಗೆ ಗುಂಡು ಹೊಡೆದುಕೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>ಪ್ರಿನ್ಸ್ ರಾಜ್ ಮತ್ತು ಸಂದೀಪ್ ಕೌರ್ ಅವರು ಮೈ ಭಾಗೊ ಕಾನೂನು ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳು. </p>.<p>ಕೆಲ ದಿನಗಳಿಂದ ಸಂದೀಪ್ಗೆ ಪ್ರಿನ್ಸ್ ಕಿರುಕುಳ ನೀಡುತ್ತಿದ್ದ. ಮನೆಯವರೆಗೆ ಹಿಂಬಾಲಿಸಿಕೊಂಡು ಬರುತ್ತಿದ್ದ. ಸಂದೀಪ್ ಕೌರ್ಗೆ ಬೇರೊಬ್ಬರ ಜೊತೆ ವಿವಾಹ ನಿಶ್ಚಿತಾರ್ಥವಾಗಿತ್ತು ಎಂದು ಸಂದೀಪ್ ಕೌರ್ ಕುಟುಂಬಸ್ಥರೊಬ್ಬರು ತಿಳಿಸಿದ್ದಾರೆ.</p>.<p>ಕೃತ್ಯಕ್ಕೆ ಪ್ರಿನ್ಸ್ ಬಳಸಿದ್ದ ಪಿಸ್ತೂಲ್ ಅಕ್ರಮವಾಗಿ ಖರೀದಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>