<p><strong>ಚಂಡೀಗಡ: </strong>ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯ ಅಡಿಯಲ್ಲಿ ಸೇರಿಸಲಾಗಿದ್ದ 15 ಲಕ್ಷ ಕುಟುಂಬಗಳಿಗೆ ಉಚಿತ ವಿಮಾ ಸೌಲಭ್ಯ ಒದಗಿಸಲು ಪಂಜಾಬ್ ಸರ್ಕಾರ ತೀರ್ಮಾನಿಸಿದೆ.</p>.<p>ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಸರ್ಕಾರದ ನಿರ್ಧಾರವನ್ನು ತಿಳಿಸಿದ್ದಾರೆ.</p>.<p>ಈಗಾಗಲೇ ಪಂಜಾಬ್ ವೈದ್ಯಕೀಯ ಹಾಜರಾತಿ ನಿಯಮಗಳ ಅಡಿಯಲ್ಲಿರುವ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ಕುಟುಂಬಗಳನ್ನು ಹೊರತುಪಡಿಸಿ, ರಾಜ್ಯದಲ್ಲಿ ಸುಮಾರು 55 ಲಕ್ಷ ಕುಟುಂಬಗಳು ಯೋಜನೆಯ ವ್ಯಾಪ್ತಿಗೆ ಬರುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ರಾಜ್ಯ ಸರ್ಕಾರವು ಆರೋಗ್ಯ ಸೇವೆ ಒದಗಿಸಲು ಪ್ರತಿ ವರ್ಷ ₹593 ಕೋಟಿ ವೆಚ್ಚವನ್ನು ಭರಿಸಲಿದ್ದು, ಪ್ರತಿ ಕುಟುಂಬಕ್ಕೆ ₹5 ಲಕ್ಷ ವಿಮಾ ರಕ್ಷಣೆಯನ್ನು ಒದಗಿಸಲಿದೆ. ಇದರಿಂದಾಗಿ 55 ಲಕ್ಷ ಕುಟುಂಬಗಳಿಗೆ ಅನುಕೂಲವಾಗಲಿದ್ದು, ಪಲಾನುಭವಿಗಳು ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಈ ಯೋಜನೆಯಿಂದ ಹೊರಗುಳಿದಿರುವ ಕುಟುಂಬಗಳನ್ನು ಗುರುತಿಸಿ, ಸೇರ್ಪಡೆಗೊಳಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ: </strong>ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯ ಅಡಿಯಲ್ಲಿ ಸೇರಿಸಲಾಗಿದ್ದ 15 ಲಕ್ಷ ಕುಟುಂಬಗಳಿಗೆ ಉಚಿತ ವಿಮಾ ಸೌಲಭ್ಯ ಒದಗಿಸಲು ಪಂಜಾಬ್ ಸರ್ಕಾರ ತೀರ್ಮಾನಿಸಿದೆ.</p>.<p>ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಸರ್ಕಾರದ ನಿರ್ಧಾರವನ್ನು ತಿಳಿಸಿದ್ದಾರೆ.</p>.<p>ಈಗಾಗಲೇ ಪಂಜಾಬ್ ವೈದ್ಯಕೀಯ ಹಾಜರಾತಿ ನಿಯಮಗಳ ಅಡಿಯಲ್ಲಿರುವ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ಕುಟುಂಬಗಳನ್ನು ಹೊರತುಪಡಿಸಿ, ರಾಜ್ಯದಲ್ಲಿ ಸುಮಾರು 55 ಲಕ್ಷ ಕುಟುಂಬಗಳು ಯೋಜನೆಯ ವ್ಯಾಪ್ತಿಗೆ ಬರುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ರಾಜ್ಯ ಸರ್ಕಾರವು ಆರೋಗ್ಯ ಸೇವೆ ಒದಗಿಸಲು ಪ್ರತಿ ವರ್ಷ ₹593 ಕೋಟಿ ವೆಚ್ಚವನ್ನು ಭರಿಸಲಿದ್ದು, ಪ್ರತಿ ಕುಟುಂಬಕ್ಕೆ ₹5 ಲಕ್ಷ ವಿಮಾ ರಕ್ಷಣೆಯನ್ನು ಒದಗಿಸಲಿದೆ. ಇದರಿಂದಾಗಿ 55 ಲಕ್ಷ ಕುಟುಂಬಗಳಿಗೆ ಅನುಕೂಲವಾಗಲಿದ್ದು, ಪಲಾನುಭವಿಗಳು ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಈ ಯೋಜನೆಯಿಂದ ಹೊರಗುಳಿದಿರುವ ಕುಟುಂಬಗಳನ್ನು ಗುರುತಿಸಿ, ಸೇರ್ಪಡೆಗೊಳಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>