<p><strong>ಚಂಡೀಗಢ</strong>: ಅಮೃತಸರದ ಸೇನಾ ಕಂಟೋನ್ಮೆಂಟ್ ಪ್ರದೇಶಗಳು ಮತ್ತು ವಾಯುನೆಲೆಗಳ ಸೂಕ್ಷ್ಮ ಮಾಹಿತಿ ಹಾಗೂ ಛಾಯಾಚಿತ್ರಗಳನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಪಂಜಾಬ್ ಪೊಲೀಸರು ಬೇಹುಗಾರಿಕೆ ಪ್ರತಿ ಕಾರ್ಯಾಚರಣೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ.</p><p>ಅಮೃತಸರ ಗ್ರಾಮೀಣ ಪೊಲೀಸರು ಶನಿವಾರ ಪಾಲಕ್ ಶೇರ್ ಮಸಿಹ್ ಮತ್ತು ಸೂರಜ್ ಮಸಿಹ್ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಭಾನುವಾರ ತಿಳಿಸಿದ್ದಾರೆ.</p><p>ಪ್ರಸ್ತುತ ಅಮೃತಸರ ಕೇಂದ್ರ ಕಾರಾಗೃಹದಲ್ಲಿರುವ ಹರ್ಪ್ರೀತ್ ಸಿಂಗ್ ಅಲಿಯಾಸ್ ಪಿಟ್ಟು ಮೂಲಕ ಪಾಕಿಸ್ತಾನನದ ಗುಪ್ತಚರ ಸಂಸ್ಥೆ ಐಎಸ್ಐ ಜೊತೆ ಅವರ ಸಂಪರ್ಕವಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಡಿಜಿಪಿ ಹೇಳಿದ್ದಾರೆ.</p><p>ಅಧಿಕೃತ ರಹಸ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.</p><p>ತನಿಖೆ ಮುಂದುವರಿದಂತೆ ಮತ್ತಷ್ಟು ನಿರ್ಣಾಯಕ ಮಾಹಿತಿ ಹೊರಬರಬಹುದು ಎಂದು ನಿರೀಕ್ಷಿಸಲಾಗಿರುವುದಾಗಿ ಡಿಜಿಪಿ ಹೇಳಿದ್ದಾರೆ.</p> .ಸಿಂಗಪುರ ಸಾರ್ವತ್ರಿಕ ಚುನಾವಣೆ: ಆಡಳಿತಾರೂಢ ಪಿಎಪಿ ಪಕ್ಷಕ್ಕೆ ಭರ್ಜರಿ ಜಯ.ವಾಮಾಚಾರ ಆರೋಪ: ಪಾಕ್ ಮಹಿಳೆ ಸೀಮಾ ಹೈದರ್ ಮನೆಗೆ ನುಗ್ಗಲೆತ್ನಿಸಿದ ವ್ಯಕ್ತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ</strong>: ಅಮೃತಸರದ ಸೇನಾ ಕಂಟೋನ್ಮೆಂಟ್ ಪ್ರದೇಶಗಳು ಮತ್ತು ವಾಯುನೆಲೆಗಳ ಸೂಕ್ಷ್ಮ ಮಾಹಿತಿ ಹಾಗೂ ಛಾಯಾಚಿತ್ರಗಳನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಪಂಜಾಬ್ ಪೊಲೀಸರು ಬೇಹುಗಾರಿಕೆ ಪ್ರತಿ ಕಾರ್ಯಾಚರಣೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ.</p><p>ಅಮೃತಸರ ಗ್ರಾಮೀಣ ಪೊಲೀಸರು ಶನಿವಾರ ಪಾಲಕ್ ಶೇರ್ ಮಸಿಹ್ ಮತ್ತು ಸೂರಜ್ ಮಸಿಹ್ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಭಾನುವಾರ ತಿಳಿಸಿದ್ದಾರೆ.</p><p>ಪ್ರಸ್ತುತ ಅಮೃತಸರ ಕೇಂದ್ರ ಕಾರಾಗೃಹದಲ್ಲಿರುವ ಹರ್ಪ್ರೀತ್ ಸಿಂಗ್ ಅಲಿಯಾಸ್ ಪಿಟ್ಟು ಮೂಲಕ ಪಾಕಿಸ್ತಾನನದ ಗುಪ್ತಚರ ಸಂಸ್ಥೆ ಐಎಸ್ಐ ಜೊತೆ ಅವರ ಸಂಪರ್ಕವಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಡಿಜಿಪಿ ಹೇಳಿದ್ದಾರೆ.</p><p>ಅಧಿಕೃತ ರಹಸ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.</p><p>ತನಿಖೆ ಮುಂದುವರಿದಂತೆ ಮತ್ತಷ್ಟು ನಿರ್ಣಾಯಕ ಮಾಹಿತಿ ಹೊರಬರಬಹುದು ಎಂದು ನಿರೀಕ್ಷಿಸಲಾಗಿರುವುದಾಗಿ ಡಿಜಿಪಿ ಹೇಳಿದ್ದಾರೆ.</p> .ಸಿಂಗಪುರ ಸಾರ್ವತ್ರಿಕ ಚುನಾವಣೆ: ಆಡಳಿತಾರೂಢ ಪಿಎಪಿ ಪಕ್ಷಕ್ಕೆ ಭರ್ಜರಿ ಜಯ.ವಾಮಾಚಾರ ಆರೋಪ: ಪಾಕ್ ಮಹಿಳೆ ಸೀಮಾ ಹೈದರ್ ಮನೆಗೆ ನುಗ್ಗಲೆತ್ನಿಸಿದ ವ್ಯಕ್ತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>