ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಹೊಸ ಕೃಷಿ ಕಾಯ್ದೆಗಳು ತಮ್ಮ ಆದಾಯ ಕುಗ್ಗಿಸುವ ಜೊತೆಗೆ ಕಾರ್ಪೊರೇಟ್ ಶೋಷಣೆಗೆ ಒಳಪಡಿಸಲಿವೆ ಎಂಬ ಆತಂಕದಲ್ಲಿ ಹಗಲಿರುಳೆನ್ನದೆ ಮೈಕೊರೆವ ಚಳಿಯಲ್ಲೂ ಹೋರಾಟ ನಡೆಸುತ್ತಿದ್ದಾರೆ. ಇತ್ತ, ಕೇಂದ್ರ ಸರ್ಕಾರ, ಹೊಸ ಕಾಯ್ದೆಗಳು ಮಧ್ಯವರ್ತಿಗಳ ಕಾಟ ತಪ್ಪಿಸಲಿದ್ದು, ರೈತರು ಉತ್ಪನ್ನಗಳನ್ನ ದೇಶದ ಯಾವುದೇ ಭಾಗದಲ್ಲಿ ಮಾರಾಟ ಮಾಡಲು ಅವಕಾಶ ಮಾಡಿಕೊಡುತ್ತವೆ ಎಂದಿದೆ.