<p><strong>ನವದೆಹಲಿ: </strong>ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಭಯೋತ್ಪಾದಕ ಗ್ಯಾಂಗ್ ಕೈವಾಡದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ), ದೆಹಲಿ, ದೆಹಲಿ-ಎನ್ಸಿಆರ್, ಹರಿಯಾಣ ಮತ್ತು ಪಂಜಾಬ್ನ ಅನೇಕ ಸ್ಥಳಗಳಲ್ಲಿ ಸೋಮವಾರಶೋಧ ಕಾರ್ಯಾಚರಣೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.</p>.<p>ಈ ಕುರಿತು ಸುದ್ದಿ ಸಂಸ್ಥೆ 'ಎಎನ್ಐ' ಟ್ವೀಟ್ ಮಾಡಿದ್ದು, ಸ್ಥಳೀಯ ಪೊಲೀಸ್ ಪಡೆ ಸಹಾಯದೊಂದಿಗೆ ಎನ್ಐಎ ಏಕಕಾಲದಲ್ಲಿ ವಿವಿಧೆಡೆ ದಾಳಿ ನಡೆಸಿದೆ ಎಂದು ವರದಿ ಮಾಡಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/gyanvapi-mosque-case-verdict-may-announce-on-september-12th-971148.html" itemprop="url">ಜ್ಞಾನವಾಪಿ ಮಸೀದಿ ತೀರ್ಪು ಸೆ.12ಕ್ಕೆ ಪ್ರಕಟಗೊಳ್ಳುವ ನಿರೀಕ್ಷೆ </a><br /><br />ಸಿಧು ಮೂಸೆವಾಲಾ ಹತ್ಯೆಗೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಭಯೋತ್ಪಾದಕ ನಂಟಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿತ್ತು.</p>.<p>ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಸಿಧು ಮೂಸೆವಾಲಾ ಹತ್ಯೆಯ ಪ್ರಮುಖ ಸಂಚುಕೋರನಾಗಿದ್ದು, ಸದ್ಯ ಜೈಲು ಪಾಲಾಗಿದ್ದಾನೆ. ಬಿಷ್ಣೋಯಿ ಸಹಚರ ಕೆನಡಾ ಮೂಲದ ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್ ಪಾತ್ರವನ್ನು ಎನ್ಐಎ ತನಿಖೆ ನಡೆಸುತ್ತಿದೆ.</p>.<p>ಮೇ 29ರಂದು ಸಿಧು ಮೂಸೆವಾಲಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಭಯೋತ್ಪಾದಕ ಗ್ಯಾಂಗ್ ಕೈವಾಡದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ), ದೆಹಲಿ, ದೆಹಲಿ-ಎನ್ಸಿಆರ್, ಹರಿಯಾಣ ಮತ್ತು ಪಂಜಾಬ್ನ ಅನೇಕ ಸ್ಥಳಗಳಲ್ಲಿ ಸೋಮವಾರಶೋಧ ಕಾರ್ಯಾಚರಣೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.</p>.<p>ಈ ಕುರಿತು ಸುದ್ದಿ ಸಂಸ್ಥೆ 'ಎಎನ್ಐ' ಟ್ವೀಟ್ ಮಾಡಿದ್ದು, ಸ್ಥಳೀಯ ಪೊಲೀಸ್ ಪಡೆ ಸಹಾಯದೊಂದಿಗೆ ಎನ್ಐಎ ಏಕಕಾಲದಲ್ಲಿ ವಿವಿಧೆಡೆ ದಾಳಿ ನಡೆಸಿದೆ ಎಂದು ವರದಿ ಮಾಡಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/gyanvapi-mosque-case-verdict-may-announce-on-september-12th-971148.html" itemprop="url">ಜ್ಞಾನವಾಪಿ ಮಸೀದಿ ತೀರ್ಪು ಸೆ.12ಕ್ಕೆ ಪ್ರಕಟಗೊಳ್ಳುವ ನಿರೀಕ್ಷೆ </a><br /><br />ಸಿಧು ಮೂಸೆವಾಲಾ ಹತ್ಯೆಗೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಭಯೋತ್ಪಾದಕ ನಂಟಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿತ್ತು.</p>.<p>ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಸಿಧು ಮೂಸೆವಾಲಾ ಹತ್ಯೆಯ ಪ್ರಮುಖ ಸಂಚುಕೋರನಾಗಿದ್ದು, ಸದ್ಯ ಜೈಲು ಪಾಲಾಗಿದ್ದಾನೆ. ಬಿಷ್ಣೋಯಿ ಸಹಚರ ಕೆನಡಾ ಮೂಲದ ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್ ಪಾತ್ರವನ್ನು ಎನ್ಐಎ ತನಿಖೆ ನಡೆಸುತ್ತಿದೆ.</p>.<p>ಮೇ 29ರಂದು ಸಿಧು ಮೂಸೆವಾಲಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>