<p><strong>ಪುರಿ:</strong> ಆಭರಣ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ರತ್ನಭಂಡಾರಕ್ಕೆ ವರ್ಗಾಯಿಸುವ ಪ್ರಕ್ರಿಯೆಯ ಹಿನ್ನೆಲೆ ಪುರಿ ಜಗನ್ನಾಥ ದೇಗುಲಕ್ಕೆ ಮಂಗಳವಾರ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ.</p><p>ಈ ಹಿಂದೆ ದುರಸ್ತಿ ಪಡಿಸಿದ್ದ ರತ್ನ ಬಂಢಾರಕ್ಕೆ ಬೆಲೆಬಾಳುವ ವಸ್ತುಗಳ ಸ್ಥಳಾಂತರ ಮಾಡಲಾಗುತ್ತಿದ್ದು, ದೇಗುಲದ ಆವರಣದಲ್ಲಿ ಹೊರಗಿನ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಆಡಳಿತ ಮಂಡಳಿ ಹೇಳಿದೆ.</p><p>ಈವರೆಗೆ ದೇವರಿಗೆ ಸಂಬಂಧಿಸಿದ ಬೆಲೆಬಾಳುವ ವಸ್ತುಗಳನ್ನು ತಾತ್ಕಾಲಿಕ ಕೊಠಡಿಯಲ್ಲಿ ಇರಿಸಲಾಗಿತ್ತು ಎಂದು ಜಗನ್ನಾಥ ದೇಗುಲದ ಆಡಳಿತ ಮಂಡಳಿಯ ಮುಖ್ಯಸ್ಥ ಅರವಿಂದ ಪಧೀ ಹೇಳಿದ್ದಾರೆ.</p><p>ರತ್ನ ಬಂಢಾರ ಸಮಿತಿ ಸದಸ್ಯರು, ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳಾದ ನ್ಯಾ. ಬಿಸ್ವಾನಾಥ್ ರಥ, ಪುರಿ ಜಿಲ್ಲಾಧಿಕಾರಿ ದಿಬ್ಯಾ ಜ್ಯೋತಿ ಪರಿದಾ, ಎಸ್ಪಿ ಪ್ರತೀಕ್ ಸಿಂಗ್ ಮತ್ತು ಇತರರು ಉಪಸ್ಥಿತರಿರಲಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುರಿ:</strong> ಆಭರಣ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ರತ್ನಭಂಡಾರಕ್ಕೆ ವರ್ಗಾಯಿಸುವ ಪ್ರಕ್ರಿಯೆಯ ಹಿನ್ನೆಲೆ ಪುರಿ ಜಗನ್ನಾಥ ದೇಗುಲಕ್ಕೆ ಮಂಗಳವಾರ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ.</p><p>ಈ ಹಿಂದೆ ದುರಸ್ತಿ ಪಡಿಸಿದ್ದ ರತ್ನ ಬಂಢಾರಕ್ಕೆ ಬೆಲೆಬಾಳುವ ವಸ್ತುಗಳ ಸ್ಥಳಾಂತರ ಮಾಡಲಾಗುತ್ತಿದ್ದು, ದೇಗುಲದ ಆವರಣದಲ್ಲಿ ಹೊರಗಿನ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಆಡಳಿತ ಮಂಡಳಿ ಹೇಳಿದೆ.</p><p>ಈವರೆಗೆ ದೇವರಿಗೆ ಸಂಬಂಧಿಸಿದ ಬೆಲೆಬಾಳುವ ವಸ್ತುಗಳನ್ನು ತಾತ್ಕಾಲಿಕ ಕೊಠಡಿಯಲ್ಲಿ ಇರಿಸಲಾಗಿತ್ತು ಎಂದು ಜಗನ್ನಾಥ ದೇಗುಲದ ಆಡಳಿತ ಮಂಡಳಿಯ ಮುಖ್ಯಸ್ಥ ಅರವಿಂದ ಪಧೀ ಹೇಳಿದ್ದಾರೆ.</p><p>ರತ್ನ ಬಂಢಾರ ಸಮಿತಿ ಸದಸ್ಯರು, ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳಾದ ನ್ಯಾ. ಬಿಸ್ವಾನಾಥ್ ರಥ, ಪುರಿ ಜಿಲ್ಲಾಧಿಕಾರಿ ದಿಬ್ಯಾ ಜ್ಯೋತಿ ಪರಿದಾ, ಎಸ್ಪಿ ಪ್ರತೀಕ್ ಸಿಂಗ್ ಮತ್ತು ಇತರರು ಉಪಸ್ಥಿತರಿರಲಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>