<p><strong>ಭುವನೇಶ್ವರ</strong>: ಪುರಿ ಜಗನ್ನಾಥ ದೇಗುಲದ ಬಳಿ ಇಂದು ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಮೃತಪಟ್ಟು, ಸುಮಾರು 50 ಜನರು ಗಾಯಗೊಂಡಿದ್ದಾರೆ. ಘಟನೆ ಬೆನ್ನಲ್ಲೇ ಜಿಲ್ಲಾಧಿಕಾರಿ ಸಿದ್ಧಾರ್ಥ್ ಶಂಕರ್ ಸ್ವೈನ್ ಮತ್ತು ಎಸ್ಪಿ ವಿನೀತ್ ಅಗರ್ವಾಲ್ ಅವರನ್ನು ವರ್ಗಾವಣೆ ಮಾಡಿ ಮುಖ್ಯಮಂತ್ರಿ ಮೋಹನ್ ಮಾಝಿ ಆದೇಶಿಸಿದ್ದಾರೆ.</p>.<p>ನಿರ್ಲಕ್ಷ್ಯದಿಂದ ಕಾಲ್ತುಳಿತ ಸಂಭವಿಸಿದ್ದು, ಇದು ಅಕ್ಷಮ್ಯ ಎಂದು ಮಾಝಿ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಪಿ ವಿಷ್ಣು ಪಾಟಿ ಮತ್ತು ಕಮಾಂಡೆಂಟ್ ಅಜಯ್ ಪಧಿ ಎಂಬ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿರುವುದಾಗಿ ಸಿಎಂ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.Puri Temple Stampede| ಪರಿಹಾರ ಕಾರ್ಯ ತ್ವರಿತಗೊಳಿಸುವಂತೆ ರಾಹುಲ್ ಗಾಂಧಿ ಆಗ್ರಹ.<p>ಖುರ್ದಾ ಜಿಲ್ಲಾಧಿಕಾರಿ ಚಂಚಲ್ ರಾಣಾ ಅವರನ್ನು ಪುರಿಯ ನೂತನ ಜಿಲ್ಲಾಧಿಕಾರಿಯಾಗಿ ಸಿಎಂ ನೇಮಿಸಿದ್ದಾರೆ . ಅಗರ್ವಾಲ್ ಅವರ ಬದಲಿಗೆ ಪಿನಕ್ ಮಿಶ್ರಾ ಅವರನ್ನು ಪುರಿ ಎಸ್ಪಿಯಾಗಿ ನೇಮಿಸಲಾಗಿದೆ. </p>.<p>ಮೃತರ ಸಂಬಂಧಿಕರಿಗೆ ಸರ್ಕಾರ ತಲಾ ₹25 ಲಕ್ಷ ಆರ್ಥಿಕ ನೆರವು ನೀಡಲಿದೆ ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>ಗುಂಡಿಚಾ ದೇವಸ್ಥಾನದ ಬಳಿ ಬೆಳಿಗಿನ ಜಾವ 4 ಗಂಟೆ ಸುಮಾರಿಗೆ ಸಂಭವಿಸಿದ ಕಾಲ್ತುಳಿತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಮೂವರು ಮೃತಪಟ್ಟು, ಸುಮಾರು 50 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ: 3 ಸಾವು, 50 ಜನರಿಗೆ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ</strong>: ಪುರಿ ಜಗನ್ನಾಥ ದೇಗುಲದ ಬಳಿ ಇಂದು ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಮೃತಪಟ್ಟು, ಸುಮಾರು 50 ಜನರು ಗಾಯಗೊಂಡಿದ್ದಾರೆ. ಘಟನೆ ಬೆನ್ನಲ್ಲೇ ಜಿಲ್ಲಾಧಿಕಾರಿ ಸಿದ್ಧಾರ್ಥ್ ಶಂಕರ್ ಸ್ವೈನ್ ಮತ್ತು ಎಸ್ಪಿ ವಿನೀತ್ ಅಗರ್ವಾಲ್ ಅವರನ್ನು ವರ್ಗಾವಣೆ ಮಾಡಿ ಮುಖ್ಯಮಂತ್ರಿ ಮೋಹನ್ ಮಾಝಿ ಆದೇಶಿಸಿದ್ದಾರೆ.</p>.<p>ನಿರ್ಲಕ್ಷ್ಯದಿಂದ ಕಾಲ್ತುಳಿತ ಸಂಭವಿಸಿದ್ದು, ಇದು ಅಕ್ಷಮ್ಯ ಎಂದು ಮಾಝಿ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಪಿ ವಿಷ್ಣು ಪಾಟಿ ಮತ್ತು ಕಮಾಂಡೆಂಟ್ ಅಜಯ್ ಪಧಿ ಎಂಬ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿರುವುದಾಗಿ ಸಿಎಂ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.Puri Temple Stampede| ಪರಿಹಾರ ಕಾರ್ಯ ತ್ವರಿತಗೊಳಿಸುವಂತೆ ರಾಹುಲ್ ಗಾಂಧಿ ಆಗ್ರಹ.<p>ಖುರ್ದಾ ಜಿಲ್ಲಾಧಿಕಾರಿ ಚಂಚಲ್ ರಾಣಾ ಅವರನ್ನು ಪುರಿಯ ನೂತನ ಜಿಲ್ಲಾಧಿಕಾರಿಯಾಗಿ ಸಿಎಂ ನೇಮಿಸಿದ್ದಾರೆ . ಅಗರ್ವಾಲ್ ಅವರ ಬದಲಿಗೆ ಪಿನಕ್ ಮಿಶ್ರಾ ಅವರನ್ನು ಪುರಿ ಎಸ್ಪಿಯಾಗಿ ನೇಮಿಸಲಾಗಿದೆ. </p>.<p>ಮೃತರ ಸಂಬಂಧಿಕರಿಗೆ ಸರ್ಕಾರ ತಲಾ ₹25 ಲಕ್ಷ ಆರ್ಥಿಕ ನೆರವು ನೀಡಲಿದೆ ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>ಗುಂಡಿಚಾ ದೇವಸ್ಥಾನದ ಬಳಿ ಬೆಳಿಗಿನ ಜಾವ 4 ಗಂಟೆ ಸುಮಾರಿಗೆ ಸಂಭವಿಸಿದ ಕಾಲ್ತುಳಿತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಮೂವರು ಮೃತಪಟ್ಟು, ಸುಮಾರು 50 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ: 3 ಸಾವು, 50 ಜನರಿಗೆ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>