ರಾಜ್ಯ ವಿಧಾನಸಭೆಗೆ ನಿಗದಿತ ಅವಧಿಯಲ್ಲಿನಿಯಮಾನುಸಾರ ಆಯ್ಕೆಯಾಗದ ಕಾರಣ ಹಾಲಿ ಮುಖ್ಯಮಂತ್ರಿ ತೀರತ್ ಸಿಂಗ್ ರಾವತ್ ಅವರು ಶುಕ್ರವಾರ ರಾಜೀನಾಮೆಯನ್ನು ಸಲ್ಲಿಸಿದ್ದರು. ಹೀಗಾಗಿ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಧಾಮಿ ಆಯ್ಕೆಯಾಗಿದ್ದು, ರಾಜ್ಯಪಾಲ ಬೇಬಿ ರಾಣಿ ಮೌರ್ಯ ಅವರನ್ನು ಭೇಟಿಯಾಗಿ, ಸರ್ಕಾರ ರಚನೆಗೆ ತಮ್ಮ ಹಕ್ಕು ಪ್ರತಿಪಾದಿಸಲಿದ್ದಾರೆ.