<p><strong>ಶ್ರೀನಗರ</strong>: ನನ್ನನ್ನು ಗೃಹಬಂಧನದಲ್ಲಿ ಇರಿಸಲಾಗಿದ್ದು, ಜಾಮಾ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸದಂತೆ ತಡೆಯಲಾಗಿದೆ ಎಂದು ಹುರಿಯತ್ ಕಾನ್ಫರೆನ್ಸ್ನ ಅಧ್ಯಕ್ಷ ಹಾಗೂ ಮುಸ್ಲಿಂ ಚಿಂತಕ ಮಿರ್ವೈಜ್ ಉಮರ್ ಫಾರೂಕ್ ಆರೋಪಿಸಿದ್ದಾರೆ.</p><p>ಶ್ರೀನಗರ ನಗರದ ನೌಹಟ್ಟಾ ಪ್ರದೇಶದಲ್ಲಿರುವ ಜಾಮಾ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಸತತ ಎರಡನೇ ಶುಕ್ರವಾರವೂ ನಿರ್ಬಂಧ ವಿಧಿಸಿದಂತಾಗಿದೆ. ಫಾರೂಕ್ ಆರೋಪದ ಬಗ್ಗೆ ಪೊಲೀಸರು ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. </p><p>‘ಸತತ ಎರಡನೇ ಶುಕ್ರವಾರವೂ ಜಾಮಾ ಮಸೀದಿಗೆ ಹೋಗುವುದನ್ನು ಮತ್ತೆ ನಿಷೇಧಿಸಲಾಗಿದೆ. ಜನರ ಸಮಸ್ಯೆ ಅಳಿಸುವುದು ನನ್ನ ಕರ್ತವ್ಯವಾಗಿದೆ. ಆದರೆ, ಇದರಿಂದ ಗೊಂದಲ ಮತ್ತು ಅನಾನುಕೂಲತೆಯನ್ನು ಉಂಟಾಗಲಿದೆ ಎಂದು ಅಧಿಕಾರಿಗಳು ಭಾವಿಸಿದ್ದಾರೆ’ ಎಂದು ಉಮರ್ ಫಾರೂಕ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. </p><p>‘ನನ್ನನ್ನು ಗೃಹಬಂಧನದಲ್ಲಿ ಇರಿಸುವ ಮೂಲಕ ಸಮಸ್ಯೆಗಳು ಕಣ್ಮರೆಯಾಗುತ್ತವೆ ಮತ್ತು ವಾಸ್ತವವು ಬದಲಾಗುತ್ತದೆ ಎಂದು ಕೆಲವರು ಭಾವಿಸಿದ್ದಾರೆ. ಆದರೆ, ನನ್ನ ಗೃಹಬಂಧನ ಮತ್ತು ಸರ್ವಾಧಿಕಾರಿ ಮನಸ್ಥಿತಿಗೆ ಬಲಿಯಾದ ಸಾವಿರಾರು ಕಾಶ್ಮೀರಿ ಕೈದಿಗಳ ಜೈಲುವಾಸವನ್ನು ಬಲವಾಗಿ ಖಂಡಿಸುತ್ತೇನೆ’ ಎಂದು ಫಾರೂಕ್ ವಾಗ್ದಾಳಿ ನಡೆಸಿದ್ದಾರೆ.</p>.ಜಮ್ಮು: ಮಿರ್ವಾಯಿಜ್ ಉಮರ್ ಫಾರೂಕ್ ಗೃಹ ಬಂಧನ ಮುಂದುವರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ನನ್ನನ್ನು ಗೃಹಬಂಧನದಲ್ಲಿ ಇರಿಸಲಾಗಿದ್ದು, ಜಾಮಾ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸದಂತೆ ತಡೆಯಲಾಗಿದೆ ಎಂದು ಹುರಿಯತ್ ಕಾನ್ಫರೆನ್ಸ್ನ ಅಧ್ಯಕ್ಷ ಹಾಗೂ ಮುಸ್ಲಿಂ ಚಿಂತಕ ಮಿರ್ವೈಜ್ ಉಮರ್ ಫಾರೂಕ್ ಆರೋಪಿಸಿದ್ದಾರೆ.</p><p>ಶ್ರೀನಗರ ನಗರದ ನೌಹಟ್ಟಾ ಪ್ರದೇಶದಲ್ಲಿರುವ ಜಾಮಾ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಸತತ ಎರಡನೇ ಶುಕ್ರವಾರವೂ ನಿರ್ಬಂಧ ವಿಧಿಸಿದಂತಾಗಿದೆ. ಫಾರೂಕ್ ಆರೋಪದ ಬಗ್ಗೆ ಪೊಲೀಸರು ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. </p><p>‘ಸತತ ಎರಡನೇ ಶುಕ್ರವಾರವೂ ಜಾಮಾ ಮಸೀದಿಗೆ ಹೋಗುವುದನ್ನು ಮತ್ತೆ ನಿಷೇಧಿಸಲಾಗಿದೆ. ಜನರ ಸಮಸ್ಯೆ ಅಳಿಸುವುದು ನನ್ನ ಕರ್ತವ್ಯವಾಗಿದೆ. ಆದರೆ, ಇದರಿಂದ ಗೊಂದಲ ಮತ್ತು ಅನಾನುಕೂಲತೆಯನ್ನು ಉಂಟಾಗಲಿದೆ ಎಂದು ಅಧಿಕಾರಿಗಳು ಭಾವಿಸಿದ್ದಾರೆ’ ಎಂದು ಉಮರ್ ಫಾರೂಕ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. </p><p>‘ನನ್ನನ್ನು ಗೃಹಬಂಧನದಲ್ಲಿ ಇರಿಸುವ ಮೂಲಕ ಸಮಸ್ಯೆಗಳು ಕಣ್ಮರೆಯಾಗುತ್ತವೆ ಮತ್ತು ವಾಸ್ತವವು ಬದಲಾಗುತ್ತದೆ ಎಂದು ಕೆಲವರು ಭಾವಿಸಿದ್ದಾರೆ. ಆದರೆ, ನನ್ನ ಗೃಹಬಂಧನ ಮತ್ತು ಸರ್ವಾಧಿಕಾರಿ ಮನಸ್ಥಿತಿಗೆ ಬಲಿಯಾದ ಸಾವಿರಾರು ಕಾಶ್ಮೀರಿ ಕೈದಿಗಳ ಜೈಲುವಾಸವನ್ನು ಬಲವಾಗಿ ಖಂಡಿಸುತ್ತೇನೆ’ ಎಂದು ಫಾರೂಕ್ ವಾಗ್ದಾಳಿ ನಡೆಸಿದ್ದಾರೆ.</p>.ಜಮ್ಮು: ಮಿರ್ವಾಯಿಜ್ ಉಮರ್ ಫಾರೂಕ್ ಗೃಹ ಬಂಧನ ಮುಂದುವರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>