ಭಾರತದ ಜೊತೆ ಸುಮಾರು 8 ದಶಕಗಳಿಂದ ಕಾಯ್ದುಕೊಂಡು ಬಂದಿರುವ ದ್ವಿಪಕ್ಷೀಯ ಪಾಲುದಾರಿಕೆಯನ್ನು ಮತ್ತಷ್ಟು ಬಲಗೊಳಿಸುವುದಕ್ಕಾಗಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಗುರುವಾರ ದೆಹಲಿಗೆ ಬಂದಿಳಿದರು.
ಚಿತ್ರ ಕೃಪೆ: ಎಕ್ಸ್
ADVERTISEMENT
ಉಕ್ರೇನ್ ವಿರುದ್ಧ ಯುದ್ಧ ಆರಂಭವಾದ ಬಳಿಕ ಪುಟಿನ್ ಅವರು ಭಾರತಕ್ಕೆ ಭೇಟಿ ನೀಡಿರುವುದು ಇದೇ ಮೊದಲು.
ಚಿತ್ರ ಕೃಪೆ: ಎಕ್ಸ್
ಭಾರತ–ರಷ್ಯಾ 23ನೇ ಶೃಂಗಸಭೆಯ ಮಾತುಕತೆ ಶುಕ್ರವಾರ ನಡೆಯಲಿದ್ದು, ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.
ಚಿತ್ರ ಕೃಪೆ: ಎಕ್ಸ್
ರಷ್ಯಾದಿಂದ ಯುದ್ಧ ವಿಮಾನಗಳು ಮತ್ತು ವಾಯು ರಕ್ಷಣಾ ವ್ಯವಸ್ಥೆ ಖರೀದಿ ಸಂಬಂಧ ಒಪ್ಪಂದ ಏರ್ಪಡುವ ಸಾಧ್ಯತೆಯಿದೆ.
ಚಿತ್ರ ಕೃಪೆ: ಎಕ್ಸ್
ಭಾರತಕ್ಕೆ ಆಗಮಿಸಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಭಗವದ್ಗೀತೆಯನ್ನು ಉಡುಗೊರೆಯಾಗಿ ನೀಡಿದ್ದಾರೆ.