<p><strong>ನವದೆಹಲಿ:</strong> ದೆಹಲಿಯಿಂದ ದೋಹಾಗೆ ಹೊರಟ್ಟಿದ್ದ ಕತಾರ್ ಪ್ರಯಾಣಿಕ ವಿಮಾನವು ಸೋಮವಾರ ಪಾಕಿಸ್ತಾನದ ಕರಾಚಿಯಲ್ಲಿ ಇಳಿದಿದೆ. ವಿಮಾನದಲ್ಲಿ ಹೊಗೆ ಕಾಣಿಸಿಕೊಂಡ ಸೂಚನೆ ಸಿಗುತ್ತಿದ್ದಂತೆ ತುರ್ತಾಗಿ ಇಳಿಸಲಾಗಿದೆ ಎಂದು ಕತಾರ್ ವಿಮಾನಯಾನ ಸಂಸ್ಥೆಯು ತಿಳಿಸಿದೆ.</p>.<p>ವಿಮಾನವು ಕರಾಚಿಯಲ್ಲಿ ಸುರಕ್ಷಿತವಾಗಿ ಇಳಿದಿದ್ದು, ಪ್ರಯಾಣಿಕರನ್ನು ಕ್ರಮವಾಗಿ ಮೆಟ್ಟಿಲುಗಳ ಮೂಲಕ ಹೊರಗೆ ಇಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದೆ.</p>.<p>ಬೆಳಗಿನ ಜಾವ 3:50ಕ್ಕೆ ದೆಹಲಿಯಿಂದ ಪ್ರಯಾಣ ಆರಂಭಿಸಿದ್ದ ವಿಮಾನವು ಬೆಳಿಗ್ಗೆ 5:30ಕ್ಕೆ ಕರಾಚಿಯಲ್ಲಿ ಇಳಿಯಿತು.</p>.<p>ಘಟನೆಯ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ ಹಾಗೂ ಪ್ರಯಾಣಿಕರನ್ನು ದೋಹಾಗೆ ತಲುಪಿಸಲು ಪ್ರತ್ಯೇಕ ವಿಮಾನದ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಯಾಣಿಕರಿಗೆ ಎದುರಾದ ಅನನುಕೂಲಕ್ಕೆ ವಿಮಾನಯಾನ ಸಂಸ್ಥೆಯು ಕ್ಷಮೆಯಾಚಿಸಿದೆ.</p>.<p>'ದೆಹಲಿಯಿಂದ ದೋಹಾಗೆ ಪ್ರಯಾಣಿಸಬೇಕಿದ್ದ QR579 ವಿಮಾನವು ಮಾರ್ಚ್ 21ರಂದು ಕರಾಚಿಯ ಕಡೆಗೆ ತಿರುಗಿಸಲಾಯಿತು. ಸರಕು ಸಂಗ್ರಹ ವಿಭಾಗದಲ್ಲಿ ಹೊಗೆ ಕಾಣಿಸಿಕೊಂಡ ಸೂಚನೆ ಸಿಕ್ಕಿದ್ದರಿಂದ ತುರ್ತು ನಿರ್ಧಾರ ಕೈಗೊಳ್ಳಲಾಯಿತು' ಎಂದು ಪ್ರಕಟಣೆಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿಯಿಂದ ದೋಹಾಗೆ ಹೊರಟ್ಟಿದ್ದ ಕತಾರ್ ಪ್ರಯಾಣಿಕ ವಿಮಾನವು ಸೋಮವಾರ ಪಾಕಿಸ್ತಾನದ ಕರಾಚಿಯಲ್ಲಿ ಇಳಿದಿದೆ. ವಿಮಾನದಲ್ಲಿ ಹೊಗೆ ಕಾಣಿಸಿಕೊಂಡ ಸೂಚನೆ ಸಿಗುತ್ತಿದ್ದಂತೆ ತುರ್ತಾಗಿ ಇಳಿಸಲಾಗಿದೆ ಎಂದು ಕತಾರ್ ವಿಮಾನಯಾನ ಸಂಸ್ಥೆಯು ತಿಳಿಸಿದೆ.</p>.<p>ವಿಮಾನವು ಕರಾಚಿಯಲ್ಲಿ ಸುರಕ್ಷಿತವಾಗಿ ಇಳಿದಿದ್ದು, ಪ್ರಯಾಣಿಕರನ್ನು ಕ್ರಮವಾಗಿ ಮೆಟ್ಟಿಲುಗಳ ಮೂಲಕ ಹೊರಗೆ ಇಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದೆ.</p>.<p>ಬೆಳಗಿನ ಜಾವ 3:50ಕ್ಕೆ ದೆಹಲಿಯಿಂದ ಪ್ರಯಾಣ ಆರಂಭಿಸಿದ್ದ ವಿಮಾನವು ಬೆಳಿಗ್ಗೆ 5:30ಕ್ಕೆ ಕರಾಚಿಯಲ್ಲಿ ಇಳಿಯಿತು.</p>.<p>ಘಟನೆಯ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ ಹಾಗೂ ಪ್ರಯಾಣಿಕರನ್ನು ದೋಹಾಗೆ ತಲುಪಿಸಲು ಪ್ರತ್ಯೇಕ ವಿಮಾನದ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಯಾಣಿಕರಿಗೆ ಎದುರಾದ ಅನನುಕೂಲಕ್ಕೆ ವಿಮಾನಯಾನ ಸಂಸ್ಥೆಯು ಕ್ಷಮೆಯಾಚಿಸಿದೆ.</p>.<p>'ದೆಹಲಿಯಿಂದ ದೋಹಾಗೆ ಪ್ರಯಾಣಿಸಬೇಕಿದ್ದ QR579 ವಿಮಾನವು ಮಾರ್ಚ್ 21ರಂದು ಕರಾಚಿಯ ಕಡೆಗೆ ತಿರುಗಿಸಲಾಯಿತು. ಸರಕು ಸಂಗ್ರಹ ವಿಭಾಗದಲ್ಲಿ ಹೊಗೆ ಕಾಣಿಸಿಕೊಂಡ ಸೂಚನೆ ಸಿಕ್ಕಿದ್ದರಿಂದ ತುರ್ತು ನಿರ್ಧಾರ ಕೈಗೊಳ್ಳಲಾಯಿತು' ಎಂದು ಪ್ರಕಟಣೆಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>