<p><strong>ನವದೆಹಲಿ</strong>: ಭವಿಷ್ಯದಲ್ಲಿ ಇಂಧನ ಪೂರೈಕೆಯಲ್ಲಿ ಆಗಬಹುದಾದ ಅಡಚಣೆಗಳನ್ನು ತಪ್ಪಿಸುವ ಸಲುವಾಗಿ ಮಹತ್ವದ ಹೆಜ್ಜೆ ಇಟ್ಟಿರುವ ‘ಕ್ವಾಡ್’, ಈ ಸಂಬಂಧ ಹಿಂದೂಮಹಾಸಾಗರ–ಪೆಸಿಫಿಕ್ ಇಂಧನ ಸುರಕ್ಷತೆ ಚೌಕಟ್ಟನ್ನು ಮಂಗಳವಾರ ಘೋಷಿಸಿದೆ.</p>.<p>ತೈಲ ಸಂಗ್ರಹ ಹೆಚ್ಚಿಸುವುದು, ಸುಲಲಿತವಾಗಿ ಇಂಧನ ಪೂರೈಕೆ ಖಾತ್ರಿಪಡಿಸಲು ನೀತಿಗಳನ್ನು ರೂಪಿಸುವುದು ಹಾಗೂ ತುರ್ತು ಸಂದರ್ಭಗಳಲ್ಲಿ ಸ್ಪಂದನೆಗಾಗಿ ಸದಸ್ಯ ರಾಷ್ಟ್ರಗಳ ನಡುವೆ ಸಮನ್ವಯ ಸಾಧಿಸುವುದಕ್ಕಾಗಿ ವಿಧಾನ ರೂಪಿಸುವಂತಹ ಕ್ರಮಗಳನ್ನು ಈ ಚೌಕಟ್ಟು ಒಳಗೊಂಡಿದೆ.</p>.<p>ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ದಾಳಿ ಆರಂಭಿಸಿದ ಬಳಿಕ, ತೈಲ ಹೊತ್ತ ಹಡಗುಗಳು ಹೊರ್ಮುಜ್ ಜಲಸಂಧಿ ಮೂಲಕ ಸಾಗುವುದಕ್ಕೆ ತೊಂದರೆಯಾಗುತ್ತಿದೆ. ಇದರಿಂದ ವಿಶ್ವದಾದ್ಯಂತ ಇಂಧನ ಬಿಕ್ಕಟ್ಟು ಕಾಣಿಸಿಕೊಂಡಿದೆ. ಜಗತ್ತಿನ ಐದನೇ ಒಂದರಷ್ಟು ತೈಲ ಹಾಗೂ ಎಲ್ಎನ್ಜಿ ಈ ಜಲಮಾರ್ಗದ ಮೂಲಕವೇ ಸಾಗಣೆಯಾಗುತ್ತದೆ. ಈ ಕಾರಣಕ್ಕೆ ಇಂಧನ ಸುರಕ್ಷತೆ ಕುರಿತ ಚೌಕಟ್ಟಿಗೆ ಮಹತ್ವ ಬಂದಿದೆ.</p>.<p>ಇಲ್ಲಿ ನಡೆದ ‘ಕ್ವಾಡ್‘ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ ಈ ಕುರಿತು ಚರ್ಚಿಸಿ, ನಿರ್ಣಯ ಕೈಗೊಳ್ಳಲಾಯಿತು. ವಿದೇಶಾಂಗ ಸಚಿವ ಎಸ್.ಜೈಶಂಕರ್ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರು ಪಾಲ್ಗೊಂಡಿದ್ದರು.</p>.<p>ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜೈಶಂಕರ್,‘ಎಲ್ಲ ದೇಶಗಳು ಆರ್ಥಿಕವಾಗಿ ಮತ್ತೆ ಪುಟಿದೇಳಬೇಕು ಎಂಬುದು ಕ್ವಾಡ್ ರಾಷ್ಟ್ರಗಳ ನಂಬಿಕೆಯಾಗಿದೆ. ಇದಕ್ಕೆ ಉತ್ತೇಜನ ನೀಡುವ ಜೊತೆಗೆ ಸಾಗಾಣಿಕೆ ಸರಪಳಿಯನ್ನು ಬಲಪಡಿಸಬೇಕಿದೆ’ ಎಂದು ಹೇಳಿದರು.</p>.<p>‘ಇಂಧನ, ರಸಗೊಬ್ಬರ, ನಿರ್ಣಾಯಕ ಖನಿಜಗಳ ಲಭ್ಯತೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಈ ಎಲ್ಲ ವಿಚಾರಗಳಲ್ಲಿ ಸದಸ್ಯ ರಾಷ್ಟ್ರಗಳ ನಡುವೆ ಸಹಕಾರ ಹೆಚ್ಚಿಸುವ ಜೊತೆಗೆ ಇತರ ರಾಷ್ಟ್ರಗಳಿಗೂ ನೆರವು ನೀಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು’ ಎಂದರು.</p>.<h2>ಸದಸ್ಯ ರಾಷ್ಟ್ರಗಳ ಒತ್ತಾಯ</h2><p> * ತೈಲ ಉತ್ಪಾದಿಸುವ ಮತ್ತು ಖರೀದಿಸುವ ದೇಶಗಳು ಇಡೀ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಬೇಕು </p><p>* ಇಂಧನ ಮಾರುಕಟ್ಟೆಯಲ್ಲಿ ಏರಿಳಿತ ಹಾಗೂ ಸಮಸ್ಯೆಗಳು ಕಂಡುಬಂದ ಸಂದರ್ಭಗಳಲ್ಲಿ ಹಿಂದೂ ಮಹಾಸಾಗರ–ಪೆಸಿಫಿಕ್ ಪ್ರದೇಶ ಹಾಗೂ ಜಾಗತಿಕ ಮಟ್ಟದಲ್ಲಿ ಇಂಧನ ಲಭ್ಯತೆಯಲ್ಲಿ ಸ್ಥಿರತೆ ಇರುವುದನ್ನು ಖಾತ್ರಿಪಡಿಸಬೇಕು </p><p>* ಸುರಕ್ಷಿತ ಸಮುದ್ರಯಾನ ಖಾತ್ರಿಪಡಿಸಬೇಕು. ನಿರ್ಣಾಯಕ ಜಲಮಾರ್ಗಗಳು ಹಾಗೂ ಮೂಲಸೌಕರ್ಯಗಳಿಗೆ ರಕ್ಷಣೆ ಒದಗಿಸಬೇಕು </p><p>* ತಂತ್ರಜ್ಞಾನ ನಿರ್ವಹಣೆ ನೀತಿ ನಿರೂಪಣೆ ಅಂತರರಾಷ್ಟ್ರೀಯ ಮಾರುಕಟ್ಟೆ ವಿಶ್ಲೇಷಣೆ ಹಾಗೂ ತುರ್ತು ಸಂದರ್ಭಗಳಲ್ಲಿ ಸ್ಪಂದಿಸುವ ವ್ಯವಸ್ಥೆಯನ್ನು ಒಳಗೊಂಡ ‘ಹಿಂದೂಮಹಾಸಾಗರ–ಪೆಸಿಫಿಕ್ ಇಂಧನ ಸುರಕ್ಷತೆ’ ಉಪಕ್ರಮ ಜಾರಿಗೆ ಒತ್ತು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭವಿಷ್ಯದಲ್ಲಿ ಇಂಧನ ಪೂರೈಕೆಯಲ್ಲಿ ಆಗಬಹುದಾದ ಅಡಚಣೆಗಳನ್ನು ತಪ್ಪಿಸುವ ಸಲುವಾಗಿ ಮಹತ್ವದ ಹೆಜ್ಜೆ ಇಟ್ಟಿರುವ ‘ಕ್ವಾಡ್’, ಈ ಸಂಬಂಧ ಹಿಂದೂಮಹಾಸಾಗರ–ಪೆಸಿಫಿಕ್ ಇಂಧನ ಸುರಕ್ಷತೆ ಚೌಕಟ್ಟನ್ನು ಮಂಗಳವಾರ ಘೋಷಿಸಿದೆ.</p>.<p>ತೈಲ ಸಂಗ್ರಹ ಹೆಚ್ಚಿಸುವುದು, ಸುಲಲಿತವಾಗಿ ಇಂಧನ ಪೂರೈಕೆ ಖಾತ್ರಿಪಡಿಸಲು ನೀತಿಗಳನ್ನು ರೂಪಿಸುವುದು ಹಾಗೂ ತುರ್ತು ಸಂದರ್ಭಗಳಲ್ಲಿ ಸ್ಪಂದನೆಗಾಗಿ ಸದಸ್ಯ ರಾಷ್ಟ್ರಗಳ ನಡುವೆ ಸಮನ್ವಯ ಸಾಧಿಸುವುದಕ್ಕಾಗಿ ವಿಧಾನ ರೂಪಿಸುವಂತಹ ಕ್ರಮಗಳನ್ನು ಈ ಚೌಕಟ್ಟು ಒಳಗೊಂಡಿದೆ.</p>.<p>ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ದಾಳಿ ಆರಂಭಿಸಿದ ಬಳಿಕ, ತೈಲ ಹೊತ್ತ ಹಡಗುಗಳು ಹೊರ್ಮುಜ್ ಜಲಸಂಧಿ ಮೂಲಕ ಸಾಗುವುದಕ್ಕೆ ತೊಂದರೆಯಾಗುತ್ತಿದೆ. ಇದರಿಂದ ವಿಶ್ವದಾದ್ಯಂತ ಇಂಧನ ಬಿಕ್ಕಟ್ಟು ಕಾಣಿಸಿಕೊಂಡಿದೆ. ಜಗತ್ತಿನ ಐದನೇ ಒಂದರಷ್ಟು ತೈಲ ಹಾಗೂ ಎಲ್ಎನ್ಜಿ ಈ ಜಲಮಾರ್ಗದ ಮೂಲಕವೇ ಸಾಗಣೆಯಾಗುತ್ತದೆ. ಈ ಕಾರಣಕ್ಕೆ ಇಂಧನ ಸುರಕ್ಷತೆ ಕುರಿತ ಚೌಕಟ್ಟಿಗೆ ಮಹತ್ವ ಬಂದಿದೆ.</p>.<p>ಇಲ್ಲಿ ನಡೆದ ‘ಕ್ವಾಡ್‘ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ ಈ ಕುರಿತು ಚರ್ಚಿಸಿ, ನಿರ್ಣಯ ಕೈಗೊಳ್ಳಲಾಯಿತು. ವಿದೇಶಾಂಗ ಸಚಿವ ಎಸ್.ಜೈಶಂಕರ್ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರು ಪಾಲ್ಗೊಂಡಿದ್ದರು.</p>.<p>ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜೈಶಂಕರ್,‘ಎಲ್ಲ ದೇಶಗಳು ಆರ್ಥಿಕವಾಗಿ ಮತ್ತೆ ಪುಟಿದೇಳಬೇಕು ಎಂಬುದು ಕ್ವಾಡ್ ರಾಷ್ಟ್ರಗಳ ನಂಬಿಕೆಯಾಗಿದೆ. ಇದಕ್ಕೆ ಉತ್ತೇಜನ ನೀಡುವ ಜೊತೆಗೆ ಸಾಗಾಣಿಕೆ ಸರಪಳಿಯನ್ನು ಬಲಪಡಿಸಬೇಕಿದೆ’ ಎಂದು ಹೇಳಿದರು.</p>.<p>‘ಇಂಧನ, ರಸಗೊಬ್ಬರ, ನಿರ್ಣಾಯಕ ಖನಿಜಗಳ ಲಭ್ಯತೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಈ ಎಲ್ಲ ವಿಚಾರಗಳಲ್ಲಿ ಸದಸ್ಯ ರಾಷ್ಟ್ರಗಳ ನಡುವೆ ಸಹಕಾರ ಹೆಚ್ಚಿಸುವ ಜೊತೆಗೆ ಇತರ ರಾಷ್ಟ್ರಗಳಿಗೂ ನೆರವು ನೀಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು’ ಎಂದರು.</p>.<h2>ಸದಸ್ಯ ರಾಷ್ಟ್ರಗಳ ಒತ್ತಾಯ</h2><p> * ತೈಲ ಉತ್ಪಾದಿಸುವ ಮತ್ತು ಖರೀದಿಸುವ ದೇಶಗಳು ಇಡೀ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಬೇಕು </p><p>* ಇಂಧನ ಮಾರುಕಟ್ಟೆಯಲ್ಲಿ ಏರಿಳಿತ ಹಾಗೂ ಸಮಸ್ಯೆಗಳು ಕಂಡುಬಂದ ಸಂದರ್ಭಗಳಲ್ಲಿ ಹಿಂದೂ ಮಹಾಸಾಗರ–ಪೆಸಿಫಿಕ್ ಪ್ರದೇಶ ಹಾಗೂ ಜಾಗತಿಕ ಮಟ್ಟದಲ್ಲಿ ಇಂಧನ ಲಭ್ಯತೆಯಲ್ಲಿ ಸ್ಥಿರತೆ ಇರುವುದನ್ನು ಖಾತ್ರಿಪಡಿಸಬೇಕು </p><p>* ಸುರಕ್ಷಿತ ಸಮುದ್ರಯಾನ ಖಾತ್ರಿಪಡಿಸಬೇಕು. ನಿರ್ಣಾಯಕ ಜಲಮಾರ್ಗಗಳು ಹಾಗೂ ಮೂಲಸೌಕರ್ಯಗಳಿಗೆ ರಕ್ಷಣೆ ಒದಗಿಸಬೇಕು </p><p>* ತಂತ್ರಜ್ಞಾನ ನಿರ್ವಹಣೆ ನೀತಿ ನಿರೂಪಣೆ ಅಂತರರಾಷ್ಟ್ರೀಯ ಮಾರುಕಟ್ಟೆ ವಿಶ್ಲೇಷಣೆ ಹಾಗೂ ತುರ್ತು ಸಂದರ್ಭಗಳಲ್ಲಿ ಸ್ಪಂದಿಸುವ ವ್ಯವಸ್ಥೆಯನ್ನು ಒಳಗೊಂಡ ‘ಹಿಂದೂಮಹಾಸಾಗರ–ಪೆಸಿಫಿಕ್ ಇಂಧನ ಸುರಕ್ಷತೆ’ ಉಪಕ್ರಮ ಜಾರಿಗೆ ಒತ್ತು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>