<p><strong>ವಿಜಯವಾಡ:</strong> ‘ಆಂಧ್ರಪ್ರದೇಶದ ರಾಜಧಾನಿ ಅಮರಾವತಿಯಲ್ಲಿ ‘ಕ್ವಾಂಟಮ್ ಕಂಪ್ಯೂಟಿಂಗ್ ಕೇಂದ್ರ’ವು 2026ರ ಜ. 1ರಿಂದ ಕಾರ್ಯಾರಂಭ ಮಾಡಲಿದೆ’ ಎಂದು ಆಂಧ್ರ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಸೋಮವಾರ ತಿಳಿಸಿದ್ದಾರೆ.</p><p>ವಿಜಯವಾಡದಲ್ಲಿ ಆಯೋಜನೆಗೊಂಡಿದ್ದ ಅಮರಾವತಿ ಕ್ವಾಂಟಮ್ ವ್ಯಾಲಿ ಶಿಬಿರವನ್ನು ಉದ್ದೇಶಿಸಿ ಸೋಮವಾರ ಮಾತನಾಡಿದ ಅವರು, ‘ರಾಜ್ಯದ ಕ್ವಾಂಟಮ್ ವ್ಯಾಲಿ ಯೋಜನೆಯ ಭಾಗವಾಗಿ ಈ ಕೇಂದ್ರ ಸ್ಥಾಪನೆಯಾಗಲಿದೆ. ಆ ಮೂಲಕ ಈ ಕ್ಷೇತ್ರಕ್ಕೆ ಅಗತ್ಯವಿರುವ ಸದೃಢ ಪರಿಸರವನ್ನು ಸೃಷ್ಟಿಸುವುದು ಮತ್ತು ಅದರ ಬಳಕೆಯ ಮಾರ್ಗವನ್ನು ಸೃಜಿಸುವುದು ಯೋಜನೆಯ ಮೂಲ ಉದ್ದೇವಾಗಿದೆ’ ಎಂದಿದ್ದಾರೆ.</p><p>‘ತಂತ್ರಜ್ಞಾನ ಜಗತ್ತಿನ ಸದ್ಯದ ಅಗತ್ಯ ಕ್ವಾಂಟಮ್ ಕಂಪ್ಯೂಟಿಂಗ್ ಆಗಿದೆ. 2026ರ ಜ. 1ಕ್ಕೆ ಕಾರ್ಯಾರಂಭ ಮಾಡಲಿರುವ ಕ್ವಾಂಟಮ್ ಕಂಪ್ಯೂಟಿಂಗ್ ಕೇಂದ್ರದ ಮೂಲಕ ಅಮರಾವತಿಯಲ್ಲಿ ಕ್ವಾಂಟಮ್ ವ್ಯಾಲಿ ಸ್ಥಾಪನೆಯಾಗಲಿದೆ. ಆ ಮೂಲಕ ದಕ್ಷಿಣ ಏಷ್ಯಾದ ಮೊದಲ ಕ್ವಾಂಟಮ್ ವ್ಯಾಲಿಯನ್ನಾಗಿ ಮತ್ತು ಅಮರಾವತಿಯ ಗ್ರೀನ್ಫೀಲ್ಡ್ ರಾಜಧಾನಿಯನ್ನಾಗಿ ಅಭಿವೃದ್ಧಿಪಡಿಸಲು ಸರ್ಕಾರ ಉತ್ಸುಕವಾಗಿದೆ’ ಎಂದಿದ್ದಾರೆ.</p><p>‘ಅಮರಾವತಿ ಘೋಷಣೆಯಲ್ಲಿ ಕ್ವಾಂಟಮ್ ಕಂಪ್ಯೂಟಿಂಗ್ ವ್ಯಾಲಿ ಸ್ಥಾಪನೆಯ ಘೋಷಣೆ ಆಗಲಿದೆ. ಇದಕ್ಕೆ ಯಾವುದೇ ಅಡೆತಡೆ ಬಂದಲ್ಲಿ ಅದನ್ನು ನಾನು ಪರಿಹರಿಸುತ್ತೇನೆ’ ಎಂದು ಹೂಡಿಕೆದಾರರಿಗೆ ನಾಯ್ಡು ಭರವಸೆ ನೀಡಿದರು.</p><p>‘ಕೇಂದ್ರ ಸರ್ಕಾರದ ಬೆಂಬಲದೊಂದಿಗೆ ಆಂಧ್ರಪ್ರದೇಶದ ಮಹತ್ವಾಕಾಂಕ್ಷೆಯ ಕ್ವಾಂಟಮ್ ವ್ಯಾಲಿಗೆ ಯಾವುದೇ ಅಡೆತಡೆ ಎದುರಾಗದು. ಕಾರ್ಯಾಗಾರದಲ್ಲಿ ಪಾಲ್ಗೊಂಡು ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ವಾಂಟಮ್ ಕಂಪ್ಯೂಟಿಂಗ್ ತಜ್ಞರು ಈ ಕೇಂದ್ರದ ಕುರಿತು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎಲ್ಲವೂ ಸಾಧ್ಯವಾಗಲಿದ್ದು, ಮುಂದುವರಿಯುವಂತೆ ಸಲಹೆ ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯವಾಡ:</strong> ‘ಆಂಧ್ರಪ್ರದೇಶದ ರಾಜಧಾನಿ ಅಮರಾವತಿಯಲ್ಲಿ ‘ಕ್ವಾಂಟಮ್ ಕಂಪ್ಯೂಟಿಂಗ್ ಕೇಂದ್ರ’ವು 2026ರ ಜ. 1ರಿಂದ ಕಾರ್ಯಾರಂಭ ಮಾಡಲಿದೆ’ ಎಂದು ಆಂಧ್ರ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಸೋಮವಾರ ತಿಳಿಸಿದ್ದಾರೆ.</p><p>ವಿಜಯವಾಡದಲ್ಲಿ ಆಯೋಜನೆಗೊಂಡಿದ್ದ ಅಮರಾವತಿ ಕ್ವಾಂಟಮ್ ವ್ಯಾಲಿ ಶಿಬಿರವನ್ನು ಉದ್ದೇಶಿಸಿ ಸೋಮವಾರ ಮಾತನಾಡಿದ ಅವರು, ‘ರಾಜ್ಯದ ಕ್ವಾಂಟಮ್ ವ್ಯಾಲಿ ಯೋಜನೆಯ ಭಾಗವಾಗಿ ಈ ಕೇಂದ್ರ ಸ್ಥಾಪನೆಯಾಗಲಿದೆ. ಆ ಮೂಲಕ ಈ ಕ್ಷೇತ್ರಕ್ಕೆ ಅಗತ್ಯವಿರುವ ಸದೃಢ ಪರಿಸರವನ್ನು ಸೃಷ್ಟಿಸುವುದು ಮತ್ತು ಅದರ ಬಳಕೆಯ ಮಾರ್ಗವನ್ನು ಸೃಜಿಸುವುದು ಯೋಜನೆಯ ಮೂಲ ಉದ್ದೇವಾಗಿದೆ’ ಎಂದಿದ್ದಾರೆ.</p><p>‘ತಂತ್ರಜ್ಞಾನ ಜಗತ್ತಿನ ಸದ್ಯದ ಅಗತ್ಯ ಕ್ವಾಂಟಮ್ ಕಂಪ್ಯೂಟಿಂಗ್ ಆಗಿದೆ. 2026ರ ಜ. 1ಕ್ಕೆ ಕಾರ್ಯಾರಂಭ ಮಾಡಲಿರುವ ಕ್ವಾಂಟಮ್ ಕಂಪ್ಯೂಟಿಂಗ್ ಕೇಂದ್ರದ ಮೂಲಕ ಅಮರಾವತಿಯಲ್ಲಿ ಕ್ವಾಂಟಮ್ ವ್ಯಾಲಿ ಸ್ಥಾಪನೆಯಾಗಲಿದೆ. ಆ ಮೂಲಕ ದಕ್ಷಿಣ ಏಷ್ಯಾದ ಮೊದಲ ಕ್ವಾಂಟಮ್ ವ್ಯಾಲಿಯನ್ನಾಗಿ ಮತ್ತು ಅಮರಾವತಿಯ ಗ್ರೀನ್ಫೀಲ್ಡ್ ರಾಜಧಾನಿಯನ್ನಾಗಿ ಅಭಿವೃದ್ಧಿಪಡಿಸಲು ಸರ್ಕಾರ ಉತ್ಸುಕವಾಗಿದೆ’ ಎಂದಿದ್ದಾರೆ.</p><p>‘ಅಮರಾವತಿ ಘೋಷಣೆಯಲ್ಲಿ ಕ್ವಾಂಟಮ್ ಕಂಪ್ಯೂಟಿಂಗ್ ವ್ಯಾಲಿ ಸ್ಥಾಪನೆಯ ಘೋಷಣೆ ಆಗಲಿದೆ. ಇದಕ್ಕೆ ಯಾವುದೇ ಅಡೆತಡೆ ಬಂದಲ್ಲಿ ಅದನ್ನು ನಾನು ಪರಿಹರಿಸುತ್ತೇನೆ’ ಎಂದು ಹೂಡಿಕೆದಾರರಿಗೆ ನಾಯ್ಡು ಭರವಸೆ ನೀಡಿದರು.</p><p>‘ಕೇಂದ್ರ ಸರ್ಕಾರದ ಬೆಂಬಲದೊಂದಿಗೆ ಆಂಧ್ರಪ್ರದೇಶದ ಮಹತ್ವಾಕಾಂಕ್ಷೆಯ ಕ್ವಾಂಟಮ್ ವ್ಯಾಲಿಗೆ ಯಾವುದೇ ಅಡೆತಡೆ ಎದುರಾಗದು. ಕಾರ್ಯಾಗಾರದಲ್ಲಿ ಪಾಲ್ಗೊಂಡು ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ವಾಂಟಮ್ ಕಂಪ್ಯೂಟಿಂಗ್ ತಜ್ಞರು ಈ ಕೇಂದ್ರದ ಕುರಿತು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎಲ್ಲವೂ ಸಾಧ್ಯವಾಗಲಿದ್ದು, ಮುಂದುವರಿಯುವಂತೆ ಸಲಹೆ ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>