<p><strong>ಸೋನ್ಭದ್ರ (ಉತ್ತರಪ್ರದೇಶ):</strong> ಇಲ್ಲಿನ ಸೋನ್ಭದ್ರ ಜಿಲ್ಲೆಯಲ್ಲಿ ಭಾನುವಾರ ಕಲ್ಲಿನ ಕ್ವಾರಿ ಕುಸಿದುಬಿದ್ದು, ಮೂರು ಮಂದಿ ಮೃತಪಟ್ಟಿದ್ದು, ಡಜನ್ಗೂ ಅಧಿಕ ಮಂದಿ ಸಿಲುಕಿಕೊಂಡಿದ್ದಾರೆ.</p>.<p>‘ಭಿಲ್ಲಿ ಮರ್ಕುಂಡಿ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದ ವೇಳೆ ದೊಡ್ಡದಾದ ಬಂಡೆಯೊಂದು ಕುಸಿದುಬಿತ್ತು. ಸ್ಥಳದಿಂದ ಮೂರು ಮಂದಿಯ ಮೃತದೇಹವನ್ನು ವಶಕ್ಕೆ ಪಡೆಯಲಾಗಿದೆ. ಮೃತರ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ನಿರೀಕ್ಷೆಯಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಅಂದಾಜಿನ ಪ್ರಕಾರ, ದುರಂತ ಸಂಭವಿಸಿದ ವೇಳೆ 15ಕ್ಕೂ ಹೆಚ್ಚಿನ ಕಾರ್ಮಿಕರು ಕೆಲಸ ಮಾಡುತ್ತಿದ್ದರು, ಇವರೆಲ್ಲರೂ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ.</p><p>ಪ್ರಕರಣದ ಕುರಿತು ಜಿಲ್ಲಾ ಮ್ಯಾಜಿಸ್ಟ್ರೇಟ್ ಬಿ.ಎನ್.ಸಿಂಗ್ ಅವರು ಆದೇಶ ಹೊರಡಿಸಿದ್ದಾರೆ.</p><p>‘ನಿಷೇಧದ ಹೊರತಾಗಿಯೂ ಅಕ್ರಮವಾಗಿ ಗಣಿಗಾರಿಕೆ ನಡೆಸಲಾಗುತ್ತಿತ್ತು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.</p><p>ಸ್ಥಳದಲ್ಲಿ ಗಣಿಗಾರಿಕೆ ನಡೆಸುತ್ತಿದ್ದ ಸಂಸ್ಥೆಯ ಮಾಲೀಕ, ಬ್ಲಾಕ್ ಮಾಜಿ ಮುಖ್ಯಸ್ಥನ ವಿರುದ್ಧ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೃತರ ಪೈಕಿ ಇಬ್ಬರ ಮೃತದೇಹಗಳನ್ನು ಗುರುತಿಸಲಾಗಿದ್ದು, ಇಂದ್ರಜಿತ್ ಯಾದವ್ ಅವರ ಸಹೋದರ ಸಂತೋಷ್ ಎಂದು ಗುರುತಿಸಲಾಗಿದೆ.</p><p>‘ಅವಶೇಷಗಳ ಅಡಿಯಲ್ಲಿ ಸಿಲುಕಿದವರನ್ನು ರಕ್ಷಿಸುವುದು ಮೊದಲ ಆದ್ಯತೆಯಾಗಿದೆ’ ಎಂದು ಸ್ಥಳೀಯ ಶಾಸಕ ಹಾಗೂ ಸಮಾಜ ಕಲ್ಯಾಣ ಸಚಿವ ಸಂಜೀವ್ ಕುಮಾರ್ ಗೊಂಡ್ ತಿಳಿಸಿದ್ದಾರೆ.</p><p>ಕಲ್ಲು ಕ್ವಾರಿಯು ನೂರಾರು ಅಡಿ ಆಳವಿರುವ ಕಾರಣ ಸ್ಥಳಕ್ಕೆ ತೆರಳಲು ರಕ್ಷಣಾ ಕಾರ್ಯಕರ್ತರಿಗೆ ಸಾಧ್ಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋನ್ಭದ್ರ (ಉತ್ತರಪ್ರದೇಶ):</strong> ಇಲ್ಲಿನ ಸೋನ್ಭದ್ರ ಜಿಲ್ಲೆಯಲ್ಲಿ ಭಾನುವಾರ ಕಲ್ಲಿನ ಕ್ವಾರಿ ಕುಸಿದುಬಿದ್ದು, ಮೂರು ಮಂದಿ ಮೃತಪಟ್ಟಿದ್ದು, ಡಜನ್ಗೂ ಅಧಿಕ ಮಂದಿ ಸಿಲುಕಿಕೊಂಡಿದ್ದಾರೆ.</p>.<p>‘ಭಿಲ್ಲಿ ಮರ್ಕುಂಡಿ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದ ವೇಳೆ ದೊಡ್ಡದಾದ ಬಂಡೆಯೊಂದು ಕುಸಿದುಬಿತ್ತು. ಸ್ಥಳದಿಂದ ಮೂರು ಮಂದಿಯ ಮೃತದೇಹವನ್ನು ವಶಕ್ಕೆ ಪಡೆಯಲಾಗಿದೆ. ಮೃತರ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ನಿರೀಕ್ಷೆಯಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಅಂದಾಜಿನ ಪ್ರಕಾರ, ದುರಂತ ಸಂಭವಿಸಿದ ವೇಳೆ 15ಕ್ಕೂ ಹೆಚ್ಚಿನ ಕಾರ್ಮಿಕರು ಕೆಲಸ ಮಾಡುತ್ತಿದ್ದರು, ಇವರೆಲ್ಲರೂ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ.</p><p>ಪ್ರಕರಣದ ಕುರಿತು ಜಿಲ್ಲಾ ಮ್ಯಾಜಿಸ್ಟ್ರೇಟ್ ಬಿ.ಎನ್.ಸಿಂಗ್ ಅವರು ಆದೇಶ ಹೊರಡಿಸಿದ್ದಾರೆ.</p><p>‘ನಿಷೇಧದ ಹೊರತಾಗಿಯೂ ಅಕ್ರಮವಾಗಿ ಗಣಿಗಾರಿಕೆ ನಡೆಸಲಾಗುತ್ತಿತ್ತು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.</p><p>ಸ್ಥಳದಲ್ಲಿ ಗಣಿಗಾರಿಕೆ ನಡೆಸುತ್ತಿದ್ದ ಸಂಸ್ಥೆಯ ಮಾಲೀಕ, ಬ್ಲಾಕ್ ಮಾಜಿ ಮುಖ್ಯಸ್ಥನ ವಿರುದ್ಧ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೃತರ ಪೈಕಿ ಇಬ್ಬರ ಮೃತದೇಹಗಳನ್ನು ಗುರುತಿಸಲಾಗಿದ್ದು, ಇಂದ್ರಜಿತ್ ಯಾದವ್ ಅವರ ಸಹೋದರ ಸಂತೋಷ್ ಎಂದು ಗುರುತಿಸಲಾಗಿದೆ.</p><p>‘ಅವಶೇಷಗಳ ಅಡಿಯಲ್ಲಿ ಸಿಲುಕಿದವರನ್ನು ರಕ್ಷಿಸುವುದು ಮೊದಲ ಆದ್ಯತೆಯಾಗಿದೆ’ ಎಂದು ಸ್ಥಳೀಯ ಶಾಸಕ ಹಾಗೂ ಸಮಾಜ ಕಲ್ಯಾಣ ಸಚಿವ ಸಂಜೀವ್ ಕುಮಾರ್ ಗೊಂಡ್ ತಿಳಿಸಿದ್ದಾರೆ.</p><p>ಕಲ್ಲು ಕ್ವಾರಿಯು ನೂರಾರು ಅಡಿ ಆಳವಿರುವ ಕಾರಣ ಸ್ಥಳಕ್ಕೆ ತೆರಳಲು ರಕ್ಷಣಾ ಕಾರ್ಯಕರ್ತರಿಗೆ ಸಾಧ್ಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>