<p><strong>ಜೈಪುರ:</strong> ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶುರುವಾಗಿದ್ದ ‘ಪ್ರಶ್ನೆ ಪತ್ರಿಕೆ ಸೋರಿಕೆ’ ಸಂಸ್ಕೃತಿಯನ್ನು ಭಜನ್ಲಾಲ್ ಶರ್ಮಾ ಸರ್ಕಾರವು ಅಂತ್ಯಗೊಳಿಸಿದ್ದು, ರಾಜಸ್ಥಾನಕ್ಕೆ ಈ ಸಮಸ್ಯೆಯಿಂದ ಮುಕ್ತಿ ನೀಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ. </p>.<p>ರಾಜಸ್ಥಾನ ಪೊಲೀಸ್ ಅಕಾಡೆಮಿಯಲ್ಲಿ ನಡೆದ ಕಾನ್ಸ್ಟೇಬಲ್ ನೇಮಕಾತಿ ಸಮಾರಂಭದಲ್ಲಿ ಸಚಿವ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿ, ‘ ಉತ್ತಮ ಆಡಳಿತಕ್ಕೆ ಸಾರ್ವಜನಿಕ ಸೇವೆಗಳಲ್ಲಿನ ನೇಮಕಾತಿಯು ಪಾರದರ್ಶವಾಗಿ ಇರಬೇಕಾದ ಅಗತ್ಯವಿದೆ. ನೇಮಕಾತಿಯೇ ಭ್ರಷ್ಟಾಚಾರದಿಂದ ಕೂಡಿದ್ದರೆ ಅಂಥ ರಾಜ್ಯ ಮಂದುವರಿಯಲು ಸಾಧ್ಯವಿಲ್ಲ’ ಎಂದೂ ಹೇಳಿದ್ದಾರೆ. </p>.<p>ಜತೆಗೆ ‘ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದಾಗಷ್ಟೇ ರಾಜ್ಯದ ಅಭಿವೃದ್ಧಿ ಸಾಧ್ಯ. ಭಜನ್ಲಾಲ್ ಸರ್ಕಾರವು ‘ಪ್ರಶ್ನೆ ಪತ್ರಿಕೆ ಸೋರಿಕೆ’ ಅಂತ್ಯಗೊಳಿಸಿದ್ದು ಮಾತ್ರವಲ್ಲದೇ, ಕಾನೂನು ವ್ಯವಸ್ಥೆ ಭದ್ರಗೊಳಿಸಿದೆ. ರಾಜ್ಯದಲ್ಲಿ ಕಳೆದ ಎರಡು ವರ್ಷದಲ್ಲಿ ಅಪರಾಧ ಪ್ರಕರಣಗಳ ಪ್ರಮಾಣವು ಶೇ 14ರಷ್ಟು ಕಡಿಮೆಯಾಗಿದೆ’ ಎಂದೂ ಸಚಿವ ಪತ್ರಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶುರುವಾಗಿದ್ದ ‘ಪ್ರಶ್ನೆ ಪತ್ರಿಕೆ ಸೋರಿಕೆ’ ಸಂಸ್ಕೃತಿಯನ್ನು ಭಜನ್ಲಾಲ್ ಶರ್ಮಾ ಸರ್ಕಾರವು ಅಂತ್ಯಗೊಳಿಸಿದ್ದು, ರಾಜಸ್ಥಾನಕ್ಕೆ ಈ ಸಮಸ್ಯೆಯಿಂದ ಮುಕ್ತಿ ನೀಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ. </p>.<p>ರಾಜಸ್ಥಾನ ಪೊಲೀಸ್ ಅಕಾಡೆಮಿಯಲ್ಲಿ ನಡೆದ ಕಾನ್ಸ್ಟೇಬಲ್ ನೇಮಕಾತಿ ಸಮಾರಂಭದಲ್ಲಿ ಸಚಿವ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿ, ‘ ಉತ್ತಮ ಆಡಳಿತಕ್ಕೆ ಸಾರ್ವಜನಿಕ ಸೇವೆಗಳಲ್ಲಿನ ನೇಮಕಾತಿಯು ಪಾರದರ್ಶವಾಗಿ ಇರಬೇಕಾದ ಅಗತ್ಯವಿದೆ. ನೇಮಕಾತಿಯೇ ಭ್ರಷ್ಟಾಚಾರದಿಂದ ಕೂಡಿದ್ದರೆ ಅಂಥ ರಾಜ್ಯ ಮಂದುವರಿಯಲು ಸಾಧ್ಯವಿಲ್ಲ’ ಎಂದೂ ಹೇಳಿದ್ದಾರೆ. </p>.<p>ಜತೆಗೆ ‘ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದಾಗಷ್ಟೇ ರಾಜ್ಯದ ಅಭಿವೃದ್ಧಿ ಸಾಧ್ಯ. ಭಜನ್ಲಾಲ್ ಸರ್ಕಾರವು ‘ಪ್ರಶ್ನೆ ಪತ್ರಿಕೆ ಸೋರಿಕೆ’ ಅಂತ್ಯಗೊಳಿಸಿದ್ದು ಮಾತ್ರವಲ್ಲದೇ, ಕಾನೂನು ವ್ಯವಸ್ಥೆ ಭದ್ರಗೊಳಿಸಿದೆ. ರಾಜ್ಯದಲ್ಲಿ ಕಳೆದ ಎರಡು ವರ್ಷದಲ್ಲಿ ಅಪರಾಧ ಪ್ರಕರಣಗಳ ಪ್ರಮಾಣವು ಶೇ 14ರಷ್ಟು ಕಡಿಮೆಯಾಗಿದೆ’ ಎಂದೂ ಸಚಿವ ಪತ್ರಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>