<p><strong>ನವದೆಹಲಿ: </strong>ಸರ್ವಶಕ್ತಿಯಿಂದ ದೇಶದ ಸ್ವಾತಂತ್ರ್ಯವನ್ನು ರಕ್ಷಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಂಗಳವಾರ ಜನರಿಗೆ ಕರೆ ನೀಡಿದ್ದಾರೆ.</p>.<p>ಕ್ವಿಟ್ ಇಂಡಿಯಾ ಚಳವಳಿಯ ಸ್ಮರಣಾರ್ಥ ಸಂದೇಶ ನೀಡಿರುವ ಅವರು, ‘ಈ ಐತಿಹಾಸಿಕ ದಿನದಂದು ಲಕ್ಷಾಂತರ ಮಂದಿ ಕಾಂಗ್ರೆಸ್ ಕಾಯರ್ಕರ್ತರನ್ನು ಬಡಿದು ಜೈಲಿಗಟ್ಟಿದಾಗ, ಅರುಣಾ ಅಸಫ್ ಅಲಿ ಅವರು ರಾಷ್ಟ್ರಧ್ವಜವನ್ನು ಹಾರಿಸಿದ್ದರು. ಅವರ ಧೈರ್ಯವು ಸ್ವಾತಂತ್ರ್ಯಾನ್ವೇಷಣೆಯ ಸಂಕೇತವಾಗಿದೆ’ ಎಂದಿದ್ದಾರೆ.</p>.<p>‘ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ನಡೆದಿರುವ ಕ್ವಿಟ್ ಇಂಡಿಯಾ ಚಳವಳಿಯನ್ನು ಸ್ಮರಿಸುವಾಗ ನಾವು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಲಕ್ಷಾಂತರ ಮಂದಿಯನ್ನು ಮತ್ತು ಮಹಿಳೆಯರನ್ನು ಮರೆಯಬಾರದು’ ಎಂದೂ ಹೇಳಿದ್ದಾರೆ.</p>.<p>‘ಕಾಂಗ್ರೆಸ್ ನೇತೃತ್ವದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ನಡೆಯುತ್ತಿದ್ದಾಗ, ಆರ್ಎಸ್ಎಸ್ ಅದನ್ನು ಬಹಿಷ್ಕರಿಸಿದ್ದು ಮಾತ್ರವಲ್ಲ ಬ್ರಿಟಿಷರಿಗೆ ಸಕ್ರಿಯವಾಗಿ ಸಹಾಯ ಮಾಡಿತ್ತು’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.</p>.<p>‘80 ವರ್ಷಗಳ ಹಿಂದೆ ಮಹಾತ್ಮ ಗಾಂಧಿ ಅವರು ಈ ದಿನದಂದು ಕ್ವಿಟ್ ಇಂಡಿಯಾ ಚಳವಳಿ ಆರಂಭಿಸಿದಾಗ ಆರ್ಎಸ್ಎಸ್ ಏನು ಮಾಡುತ್ತಿತ್ತು’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಸರ್ವಶಕ್ತಿಯಿಂದ ದೇಶದ ಸ್ವಾತಂತ್ರ್ಯವನ್ನು ರಕ್ಷಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಂಗಳವಾರ ಜನರಿಗೆ ಕರೆ ನೀಡಿದ್ದಾರೆ.</p>.<p>ಕ್ವಿಟ್ ಇಂಡಿಯಾ ಚಳವಳಿಯ ಸ್ಮರಣಾರ್ಥ ಸಂದೇಶ ನೀಡಿರುವ ಅವರು, ‘ಈ ಐತಿಹಾಸಿಕ ದಿನದಂದು ಲಕ್ಷಾಂತರ ಮಂದಿ ಕಾಂಗ್ರೆಸ್ ಕಾಯರ್ಕರ್ತರನ್ನು ಬಡಿದು ಜೈಲಿಗಟ್ಟಿದಾಗ, ಅರುಣಾ ಅಸಫ್ ಅಲಿ ಅವರು ರಾಷ್ಟ್ರಧ್ವಜವನ್ನು ಹಾರಿಸಿದ್ದರು. ಅವರ ಧೈರ್ಯವು ಸ್ವಾತಂತ್ರ್ಯಾನ್ವೇಷಣೆಯ ಸಂಕೇತವಾಗಿದೆ’ ಎಂದಿದ್ದಾರೆ.</p>.<p>‘ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ನಡೆದಿರುವ ಕ್ವಿಟ್ ಇಂಡಿಯಾ ಚಳವಳಿಯನ್ನು ಸ್ಮರಿಸುವಾಗ ನಾವು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಲಕ್ಷಾಂತರ ಮಂದಿಯನ್ನು ಮತ್ತು ಮಹಿಳೆಯರನ್ನು ಮರೆಯಬಾರದು’ ಎಂದೂ ಹೇಳಿದ್ದಾರೆ.</p>.<p>‘ಕಾಂಗ್ರೆಸ್ ನೇತೃತ್ವದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ನಡೆಯುತ್ತಿದ್ದಾಗ, ಆರ್ಎಸ್ಎಸ್ ಅದನ್ನು ಬಹಿಷ್ಕರಿಸಿದ್ದು ಮಾತ್ರವಲ್ಲ ಬ್ರಿಟಿಷರಿಗೆ ಸಕ್ರಿಯವಾಗಿ ಸಹಾಯ ಮಾಡಿತ್ತು’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.</p>.<p>‘80 ವರ್ಷಗಳ ಹಿಂದೆ ಮಹಾತ್ಮ ಗಾಂಧಿ ಅವರು ಈ ದಿನದಂದು ಕ್ವಿಟ್ ಇಂಡಿಯಾ ಚಳವಳಿ ಆರಂಭಿಸಿದಾಗ ಆರ್ಎಸ್ಎಸ್ ಏನು ಮಾಡುತ್ತಿತ್ತು’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>