<p><strong>ನವದೆಹಲಿ:</strong> ವಿವಿಧ ಕಾರ್ಯತಂತ್ರದ ಭಾಗವಾಗಿ ಹಿಂದೂಮಹಾಸಾಗರದಲ್ಲಿ (ಐಒಆರ್) 120 ಯುದ್ಧನೌಕೆಗಳನ್ನು ನಿಯೋಜನೆ ಮಾಡಲಾಗಿದೆ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಶುಕ್ರವಾರ ಹೇಳಿದರು.</p>.<p>ಜಾಗತಿಕ ಭದ್ರತೆ ಕುರಿಂತೆ ಆನ್ಲೈನ್ ಮೂಲಕ ನಡೆದ ಶೃಂಗಸಭೆಯಲ್ಲಿ ಮಾತನಾಡಿದ ಅವರು, ‘ಯುದ್ಧದ ಕಾರ್ಯತಂತ್ರದ ದೃಷ್ಟಿಯಿಂದ ಅನೇಕ ದೇಶಗಳು ಹಿಂದೂಮಹಾಸಾಗರದಲ್ಲಿ ತಮ್ಮ ನೆಲೆಗಳನ್ನು ಸ್ಥಾಪಿಸಲು ಮುಂದಾಗುತ್ತಿವೆ. ಬರುವ ದಿನಗಳಲ್ಲಿ ಈ ಪ್ರವೃತ್ತಿ ಇನ್ನೂ ಹೆಚ್ಚಲಿದೆ’ ಎಂದರು.</p>.<p>‘ನೆರೆಯ ರಾಷ್ಟ್ರವೊಂದು ಪ್ರಬಲ ಸ್ಪರ್ಧೆಯೊಡ್ಡುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತ ಸಹ ತನ್ನ ಸೇನಾ ಸಾಮರ್ಥ್ಯ ಹೆಚ್ಚಿಸಿಕೊಂಡು ಜಾಗತಿಕವಾಗಿ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಬೇಕಿದೆ’ ಎಂದು ಅವರು ಚೀನಾ ಹೆಸರು ಪ್ರಸ್ತಾಪಿಸದೇ ಹೇಳಿದರು.</p>.<p>‘ಭೌಗೋಳಿಕ ಮತ್ತು ರಾಜಕೀಯ ಕಾರ್ಯತಂತ್ರದ ದೃಷ್ಟಿಯಿಂದಲೂ ಹಿಂದೂಮಹಾಸಾಗರಕ್ಕೆ ಮಹತ್ವ ಇದೆ. ಈ ಕಾರಣದಿಂದಾಗಿಯೂ ಇತರ ದೇಶಗಳು ಈ ಸಾಗರ ಪ್ರದೇಶದ ಮೇಲೆ ಕಣ್ಣಿಟ್ಟಿವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಿವಿಧ ಕಾರ್ಯತಂತ್ರದ ಭಾಗವಾಗಿ ಹಿಂದೂಮಹಾಸಾಗರದಲ್ಲಿ (ಐಒಆರ್) 120 ಯುದ್ಧನೌಕೆಗಳನ್ನು ನಿಯೋಜನೆ ಮಾಡಲಾಗಿದೆ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಶುಕ್ರವಾರ ಹೇಳಿದರು.</p>.<p>ಜಾಗತಿಕ ಭದ್ರತೆ ಕುರಿಂತೆ ಆನ್ಲೈನ್ ಮೂಲಕ ನಡೆದ ಶೃಂಗಸಭೆಯಲ್ಲಿ ಮಾತನಾಡಿದ ಅವರು, ‘ಯುದ್ಧದ ಕಾರ್ಯತಂತ್ರದ ದೃಷ್ಟಿಯಿಂದ ಅನೇಕ ದೇಶಗಳು ಹಿಂದೂಮಹಾಸಾಗರದಲ್ಲಿ ತಮ್ಮ ನೆಲೆಗಳನ್ನು ಸ್ಥಾಪಿಸಲು ಮುಂದಾಗುತ್ತಿವೆ. ಬರುವ ದಿನಗಳಲ್ಲಿ ಈ ಪ್ರವೃತ್ತಿ ಇನ್ನೂ ಹೆಚ್ಚಲಿದೆ’ ಎಂದರು.</p>.<p>‘ನೆರೆಯ ರಾಷ್ಟ್ರವೊಂದು ಪ್ರಬಲ ಸ್ಪರ್ಧೆಯೊಡ್ಡುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತ ಸಹ ತನ್ನ ಸೇನಾ ಸಾಮರ್ಥ್ಯ ಹೆಚ್ಚಿಸಿಕೊಂಡು ಜಾಗತಿಕವಾಗಿ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಬೇಕಿದೆ’ ಎಂದು ಅವರು ಚೀನಾ ಹೆಸರು ಪ್ರಸ್ತಾಪಿಸದೇ ಹೇಳಿದರು.</p>.<p>‘ಭೌಗೋಳಿಕ ಮತ್ತು ರಾಜಕೀಯ ಕಾರ್ಯತಂತ್ರದ ದೃಷ್ಟಿಯಿಂದಲೂ ಹಿಂದೂಮಹಾಸಾಗರಕ್ಕೆ ಮಹತ್ವ ಇದೆ. ಈ ಕಾರಣದಿಂದಾಗಿಯೂ ಇತರ ದೇಶಗಳು ಈ ಸಾಗರ ಪ್ರದೇಶದ ಮೇಲೆ ಕಣ್ಣಿಟ್ಟಿವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>