ವಿಖೆ ಪಾಟೀಲ್ ಅವರು ಮಹಾಜನ್ ಅವರನ್ನು ಅವರ ನಿವಾಸದಲ್ಲಿ ಮಂಗಳವಾರ ಭೇಟಿಯಾದರು. ವಿಖೆ ಪಾಟೀಲ್ ಅವರ ಮಗ ಸುಜಯ್, ಅಹ್ಮದ್ನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದಾರೆ. ‘ನಾನು ಮಗನ ಪರ ಬಹಿರಂಗವಾಗಿಯೇ ಪ್ರಚಾರ ಮಾಡಿದ್ದೇನೆ. ನನ್ನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ನನ್ನ ಮಗನಿಗೆ ಟಿಕೆಟ್ ನಿರಾಕರಿಸಿದ್ದು ಅನ್ಯಾಯ. ಇದು ಕಾಂಗ್ರೆಸ್ ಪಕ್ಷದ ನೀತಿಯನ್ನು ತೋರಿಸುತ್ತದೆ’ ಎಂದು ವಿಖೆ ಪಾಟೀಲ್ ಅವರು ಹರಿಹಾಯ್ದಿದ್ದಾರೆ.