<p><strong>ಗುರುಗ್ರಾಮ:</strong> ‘ಹರಿಯಾಣದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಸ್ವಂತ ಅಕಾಡೆಮಿ ಹೊಂದಿರಲಿಲ್ಲ. ಕಲಿಕಾರ್ಥಿಗಳಿಗೆ ವಿವಿಧ ಪ್ರದೇಶದಲ್ಲಿರುವ ಟೆನ್ನಿಸ್ ಮೈದಾನಗಳಲ್ಲಿ ತರಬೇತಿ ನೀಡುತ್ತಿದ್ದರು. ಇದಕ್ಕೂ ಆಕೆಯ ತಂದೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು’ ಎಂದು ಗುರುಗ್ರಾಮದ ಪೊಲೀಸರು ತಿಳಿಸಿದ್ದಾರೆ.</p>.<p>ಗುರುಗ್ರಾಮದ ಸುಶಾಂತ್ ಲೋಕ್ ಪ್ರದೇಶದಲ್ಲಿರುವ ಎರಡು ಮಹಡಿಯ ಕಟ್ಟಡದಲ್ಲಿ ಕುಟುಂಬದ ಜೊತೆಗೆ ವಾಸವಾಗಿದ್ದ ರಾಧಿಕಾ ಅವರನ್ನು ತಂದೆ ದೀಪಕ್ ಯಾದವ್ ಗುಂಡಿಕ್ಕಿ ಹತ್ಯೆ ಮಾಡಿದ್ದರು.</p>.<p>ದೀಪಕ್ ಅವರನ್ನು ಶನಿವಾರ ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಶುಕ್ರವಾರದ ಮಟ್ಟಿಗೆ ತಮ್ಮ ಕಸ್ಟಡಿಗೆ ಪಡೆದಿದ್ದ ಪೊಲೀಸರು ಅವರ ಮನೆಯಲ್ಲಿ ಶೋಧ ಕಾರ್ಯ ನಡೆಸಿದರು. ಈ ವೇಳೆ ಅವರ ನಿವಾಸದಲ್ಲಿದ್ದ ಐದು ಜೀವಂತ ಗುಂಡುಗಳನ್ನು ವಶಕ್ಕೆ ಪಡೆದರು. ತನಿಖೆಯ ಭಾಗವಾಗಿ ಅವರ ಗ್ರಾಮಕ್ಕೆ ಕರೆದೊಯ್ಯಲಾಯಿತು.</p>.<p>‘ತನಿಖೆಯ ವೇಳೆ ಮಗಳನ್ನು ಹತ್ಯೆ ಮಾಡಿರುವುದನ್ನು ದೀಪಕ್ ಒಪ್ಪಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ವಿವಿಧ ಕಟ್ಟಡಗಳ ಬಾಡಿಗೆಯಿಂದ ಸಾಕಷ್ಟು ಆದಾಯ ಪಡೆಯುತ್ತಿದ್ದ ಅವರು, ಮಗಳ ದುಡಿಮೆ ಮೇಲೆ ಅವಲಂಬಿತರಾಗಿ ಇರಲಿಲ್ಲ. ಅಕಾಡೆಮಿಗಳಲ್ಲಿ ತರಬೇತಿ ಮೂಲಕ ಮಗಳು ಹಣ ಸಂಪಾದಿಸುತ್ತಿದ್ದ ವಿಚಾರಕ್ಕೆ ಹಲವು ಸಲ ಆಕ್ಷೇಪ ವ್ಯಕ್ತಪಡಿಸಿದ್ದರು. ತರಬೇತಿ ಸ್ಥಗಿತಗೊಳಿಸಲು ಮಗಳು ಕೂಡ ಒಪ್ಪಿರಲಿಲ್ಲ. ಈ ವಿಚಾರವೇ ಇಬ್ಬರ ನಡುವೆ ಗಲಾಟೆಗೆ ಕಾರಣವಾಗಿತ್ತು’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<p>‘2023 ರಲ್ಲಿ ರಾಧಿಕಾ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ ವಿಡಿಯೊಗೂ ಕೊಲೆಗೂ ಯಾವುದೇ ಸಂಬಂಧವಿಲ್ಲ. ತರಬೇತಿಯ ಮೂಲಕ ಮಗಳು ಸಂಪಾದನೆ ಮಾಡುವುದನ್ನು ನೋಡಲು ತಂದೆ ಬಯಸಿರಲಿಲ್ಲ’ ಎಂದು ಸೆಕ್ಟರ್ 56ರ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ವಿನೋದ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.</p>.<p>ರಾಧಿಕಾಳ ಹಿಂಬದಿಯಿಂದ ಮೂರು ಹಾಗೂ ಭುಜಕ್ಕೆ ಒಂದು ಗುಂಡು ತಗುಲಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಅಂತ್ಯಕ್ರಿಯೆಯು ಶುಕ್ರವಾರ ಕುಟುಂಬಸ್ಥರ ಸ್ವಗ್ರಾಮ ವಾಜೀರಾಬಾದ್ನಲ್ಲಿ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುರುಗ್ರಾಮ:</strong> ‘ಹರಿಯಾಣದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಸ್ವಂತ ಅಕಾಡೆಮಿ ಹೊಂದಿರಲಿಲ್ಲ. ಕಲಿಕಾರ್ಥಿಗಳಿಗೆ ವಿವಿಧ ಪ್ರದೇಶದಲ್ಲಿರುವ ಟೆನ್ನಿಸ್ ಮೈದಾನಗಳಲ್ಲಿ ತರಬೇತಿ ನೀಡುತ್ತಿದ್ದರು. ಇದಕ್ಕೂ ಆಕೆಯ ತಂದೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು’ ಎಂದು ಗುರುಗ್ರಾಮದ ಪೊಲೀಸರು ತಿಳಿಸಿದ್ದಾರೆ.</p>.<p>ಗುರುಗ್ರಾಮದ ಸುಶಾಂತ್ ಲೋಕ್ ಪ್ರದೇಶದಲ್ಲಿರುವ ಎರಡು ಮಹಡಿಯ ಕಟ್ಟಡದಲ್ಲಿ ಕುಟುಂಬದ ಜೊತೆಗೆ ವಾಸವಾಗಿದ್ದ ರಾಧಿಕಾ ಅವರನ್ನು ತಂದೆ ದೀಪಕ್ ಯಾದವ್ ಗುಂಡಿಕ್ಕಿ ಹತ್ಯೆ ಮಾಡಿದ್ದರು.</p>.<p>ದೀಪಕ್ ಅವರನ್ನು ಶನಿವಾರ ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಶುಕ್ರವಾರದ ಮಟ್ಟಿಗೆ ತಮ್ಮ ಕಸ್ಟಡಿಗೆ ಪಡೆದಿದ್ದ ಪೊಲೀಸರು ಅವರ ಮನೆಯಲ್ಲಿ ಶೋಧ ಕಾರ್ಯ ನಡೆಸಿದರು. ಈ ವೇಳೆ ಅವರ ನಿವಾಸದಲ್ಲಿದ್ದ ಐದು ಜೀವಂತ ಗುಂಡುಗಳನ್ನು ವಶಕ್ಕೆ ಪಡೆದರು. ತನಿಖೆಯ ಭಾಗವಾಗಿ ಅವರ ಗ್ರಾಮಕ್ಕೆ ಕರೆದೊಯ್ಯಲಾಯಿತು.</p>.<p>‘ತನಿಖೆಯ ವೇಳೆ ಮಗಳನ್ನು ಹತ್ಯೆ ಮಾಡಿರುವುದನ್ನು ದೀಪಕ್ ಒಪ್ಪಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ವಿವಿಧ ಕಟ್ಟಡಗಳ ಬಾಡಿಗೆಯಿಂದ ಸಾಕಷ್ಟು ಆದಾಯ ಪಡೆಯುತ್ತಿದ್ದ ಅವರು, ಮಗಳ ದುಡಿಮೆ ಮೇಲೆ ಅವಲಂಬಿತರಾಗಿ ಇರಲಿಲ್ಲ. ಅಕಾಡೆಮಿಗಳಲ್ಲಿ ತರಬೇತಿ ಮೂಲಕ ಮಗಳು ಹಣ ಸಂಪಾದಿಸುತ್ತಿದ್ದ ವಿಚಾರಕ್ಕೆ ಹಲವು ಸಲ ಆಕ್ಷೇಪ ವ್ಯಕ್ತಪಡಿಸಿದ್ದರು. ತರಬೇತಿ ಸ್ಥಗಿತಗೊಳಿಸಲು ಮಗಳು ಕೂಡ ಒಪ್ಪಿರಲಿಲ್ಲ. ಈ ವಿಚಾರವೇ ಇಬ್ಬರ ನಡುವೆ ಗಲಾಟೆಗೆ ಕಾರಣವಾಗಿತ್ತು’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<p>‘2023 ರಲ್ಲಿ ರಾಧಿಕಾ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ ವಿಡಿಯೊಗೂ ಕೊಲೆಗೂ ಯಾವುದೇ ಸಂಬಂಧವಿಲ್ಲ. ತರಬೇತಿಯ ಮೂಲಕ ಮಗಳು ಸಂಪಾದನೆ ಮಾಡುವುದನ್ನು ನೋಡಲು ತಂದೆ ಬಯಸಿರಲಿಲ್ಲ’ ಎಂದು ಸೆಕ್ಟರ್ 56ರ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ವಿನೋದ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.</p>.<p>ರಾಧಿಕಾಳ ಹಿಂಬದಿಯಿಂದ ಮೂರು ಹಾಗೂ ಭುಜಕ್ಕೆ ಒಂದು ಗುಂಡು ತಗುಲಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಅಂತ್ಯಕ್ರಿಯೆಯು ಶುಕ್ರವಾರ ಕುಟುಂಬಸ್ಥರ ಸ್ವಗ್ರಾಮ ವಾಜೀರಾಬಾದ್ನಲ್ಲಿ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>