ಸುಪ್ರೀಂ ಕೋರ್ಟ್ ತೀರ್ಪನ್ನು ಮುಂದಿಟ್ಟುಕೊಂಡು ರಫೇಲ್ ಖರೀದಿ ಹಗರಣವನ್ನು ಯಾರಿಗೂ ತಿಳಿಯದಂತೆ ಮಣ್ಣು ಮಾಡಿಬಿಡಬಹುದು ಎಂದು ಮೋದಿ ಸರ್ಕಾರ ಭಾವಿಸಿತ್ತು. ಆದರೆ, ವಿವಾದ ಈಗಲೂ ಜೀವಂತವಾಗಿದೆ ಮತ್ತು ಹೊಸ ಹೊಸ ಆಯಾಮಗಳತ್ತ ತೆರೆದುಕೊಳ್ಳುತ್ತಿದೆ ಎಂದು ಪ್ರತಿಪಾದಿಸಿದರು. ಒಪ್ಪಂದದ ಬಗ್ಗೆ ಜಂಟಿ ಸಂಸದೀಯ ತನಿಖೆ ನಡೆಯಲೇಬೇಕು ಎಂದು ಒತ್ತಾಯಿಸಿದರು.