<p><strong>ನವದೆಹಲಿ:</strong> ಆಮ್ ಆದ್ಮಿ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿರುವ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯ ಅರ್ಜಿಗಳ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.</p>.<p>ಅರ್ಜಿಗಳ ಸಮಿತಿಯನ್ನು ಪುನರ್ರಚಿಸಿದ ನಂತರ, ರಾಜ್ಯಸಭೆಯ ಸಭಾಪತಿ ಸಿ.ಪಿ. ರಾಧಾಕೃಷ್ಣನ್ ಅವರು ಸದನದ ಹತ್ತು ಸದಸ್ಯರ ನಾಮನಿರ್ದೇಶನ ಮಾಡಿದ್ದಾರೆ. </p>.<p>ಇದಲ್ಲದೆ, ರಾಜ್ಯಸಭೆ ಸದಸ್ಯೆ ಡಾ. ಮೇನಕಾ ಗುರುಸ್ವಾಮಿ ಅವರನ್ನು ಕಾರ್ಪೊರೇಟ್ ಕಾನೂನುಗಳು (ತಿದ್ದುಪಡಿ) ಮಸೂದೆ, 2026ರ ಜಂಟಿ ಸಮಿತಿಯ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದ್ದಾರೆ.</p>.<p>ಅಲ್ಲದೆ, ಈ ಜಂಟಿ ಸಮಿತಿಗೆ ಅರವಿಂದ್ ಗಣಪತ್ ಸಾವಂತ್ ಅವರನ್ನು ಸ್ಪೀಕರ್ ಅವರು ನಾಮನಿರ್ದೇಶನ ಮಾಡಿರುವುದಾಗಿ ಲೋಕಸಭೆಯ ಅಧಿಸೂಚನೆ ತಿಳಿಸಿದೆ.</p>.<p><strong>ಸಮಿತಿ ಸದಸ್ಯರು:</strong> ಹರ್ಷ್ ಮಹಾಜನ್, ಗುಲಾಮ್ ಅಲಿ, ಶಂಭು ಶರಣ್ ಪಟೇಲ್, ಮಯಂಕ್ ಕುಮಾರ್ ನಾಯಕ್, ಮಸ್ತಾನ್ ರಾವ್ ಯಾದವ್, ಜೆ.ಬಿ. ಮಾಥೆರ್ ಹಿಶಾಮ್, ಸುಭಾಶೀಷ್ ಖುಂಟಿಯಾ, ರಂಗವ್ರಾ ನಾರ್ಜಾರಿ ಮತ್ತು ಸಂತೋಷ್ ಕುಮಾರ್ ಪಿ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಆಮ್ ಆದ್ಮಿ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿರುವ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯ ಅರ್ಜಿಗಳ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.</p>.<p>ಅರ್ಜಿಗಳ ಸಮಿತಿಯನ್ನು ಪುನರ್ರಚಿಸಿದ ನಂತರ, ರಾಜ್ಯಸಭೆಯ ಸಭಾಪತಿ ಸಿ.ಪಿ. ರಾಧಾಕೃಷ್ಣನ್ ಅವರು ಸದನದ ಹತ್ತು ಸದಸ್ಯರ ನಾಮನಿರ್ದೇಶನ ಮಾಡಿದ್ದಾರೆ. </p>.<p>ಇದಲ್ಲದೆ, ರಾಜ್ಯಸಭೆ ಸದಸ್ಯೆ ಡಾ. ಮೇನಕಾ ಗುರುಸ್ವಾಮಿ ಅವರನ್ನು ಕಾರ್ಪೊರೇಟ್ ಕಾನೂನುಗಳು (ತಿದ್ದುಪಡಿ) ಮಸೂದೆ, 2026ರ ಜಂಟಿ ಸಮಿತಿಯ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದ್ದಾರೆ.</p>.<p>ಅಲ್ಲದೆ, ಈ ಜಂಟಿ ಸಮಿತಿಗೆ ಅರವಿಂದ್ ಗಣಪತ್ ಸಾವಂತ್ ಅವರನ್ನು ಸ್ಪೀಕರ್ ಅವರು ನಾಮನಿರ್ದೇಶನ ಮಾಡಿರುವುದಾಗಿ ಲೋಕಸಭೆಯ ಅಧಿಸೂಚನೆ ತಿಳಿಸಿದೆ.</p>.<p><strong>ಸಮಿತಿ ಸದಸ್ಯರು:</strong> ಹರ್ಷ್ ಮಹಾಜನ್, ಗುಲಾಮ್ ಅಲಿ, ಶಂಭು ಶರಣ್ ಪಟೇಲ್, ಮಯಂಕ್ ಕುಮಾರ್ ನಾಯಕ್, ಮಸ್ತಾನ್ ರಾವ್ ಯಾದವ್, ಜೆ.ಬಿ. ಮಾಥೆರ್ ಹಿಶಾಮ್, ಸುಭಾಶೀಷ್ ಖುಂಟಿಯಾ, ರಂಗವ್ರಾ ನಾರ್ಜಾರಿ ಮತ್ತು ಸಂತೋಷ್ ಕುಮಾರ್ ಪಿ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>