<p><strong>ನವದೆಹಲಿ</strong>: ‘ವಾರ್ಷಿಕ ಎರಡು ಕೋಟಿ ಉದ್ಯೋಗಾವಕಾಶ ಸೃಷ್ಟಿ ಕುರಿತಂತೆ ಬಿಜೆಪಿಯು ದೇಶದ ಯುವಜನರನ್ನು ತಪ್ಪುದಾರಿಗೆ ಎಳೆಯುತ್ತಿದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಆರೋಪಿಸಿದರು.</p>.<p>ಉದ್ಯೋಗ ಸೃಷ್ಟಿ ಕುರಿತಂತೆ ಬಿಜೆಪಿ ಸೃಷ್ಟಿಸಿದ ಭ್ರಮೆಯ ಚೌಕಟ್ಟಿನಿಂದ ಹೊರಬಂದು ಯುವಜನರು ತಮ್ಮದೇ ಗುರಿ ನಿಗದಿಪಡಿಸಿ ಕೊಳ್ಳಬೇಕು. ಕಾಂಗ್ರೆಸ್ ‘ಯುವ ನ್ಯಾಯ’ ಭರವಸೆ ಮೂಲಕ ದೇಶದಲ್ಲಿ ಉದ್ಯೋಗ ಕ್ರಾಂತಿ ಕೈಗೊಳ್ಳಲು ತೀರ್ಮಾನಿಸಿದೆ ಎಂದು ತಿಳಿಸಿದರು.</p>.<p>‘ಮೋದಿಯವರೇ, ಉದ್ಯೋಗಾವಕಾಶ ಕುರಿತು ನಿಮಗೆ ಸ್ಪಷ್ಟ ಯೋಜನೆಗಳಿವೆಯೇ ಎಂಬುದು ಯುವಜನರ ಪ್ರಶ್ನೆಯಾಗಿದೆ. ಪ್ರತಿ ಗ್ರಾಮ, ರಸ್ತೆಯಲ್ಲಿ ಬಿಜೆಪಿಯವರಿಗೆ ಈ ಪ್ರಶ್ನೆ ಕೇಳಲಾಗುತ್ತಿದೆ. ಉದ್ಯೋಗ ಸೃಷ್ಟಿ ಕುರಿತಂತೆ ಸುಳ್ಳು ಹೇಳಿದ್ದೇಕೆ?’ ಎಂದು ಪ್ರಶ್ನಿಸಿದ್ದಾರೆ. </p>.<p>ಯುವ ನ್ಯಾಯ ಯೋಜನೆಯಡಿ ಉದ್ಯೋಗ ಕ್ರಾಂತಿಗೆ ಕಾಂಗ್ರೆಸ್ ನಿರ್ಧರಿಸಿದೆ. ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ 30 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಪ್ರತಿ ಪದವೀಧರ ಯುವಜನರಿಗೆ ‘ಮೊದಲ ಉದ್ಯೋಗ ಖಚಿತ’ ಯೋಜನೆಯಡಿ ವಾರ್ಷಿಕ ₹1 ಲಕ್ಷ ನೀಡಲಾಗುತ್ತದೆ. ಕಾಯ್ದೆ ರೂಪಿಸುವ ಮೂಲಕ ಪ್ರಶ್ನೆಪತ್ರಿಕೆ ಸೋರಿಕೆ ಸಮಸ್ಯೆ ಬಗೆಹರಿಸಲಾಗುವುದು ಎಂದು ಅವರು ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ.</p>.<p>ಎರಡು ಭಿನ್ನ ಸಿದ್ಧಾಂತಗಳ ನಡುವಣ ವ್ಯತ್ಯಾಸ ಗುರುತಿಸಲು ಈಗ ಸಕಾಲ. ಕಾಂಗ್ರೆಸ್ ಯುವಜನರ ಭವಿಷ್ಯ ಭದ್ರಪಡಿಸಲು ಬಯಸುತ್ತದೆ. ಬಿಜೆಪಿಯು ಅವರನ್ನು ತಪ್ಪುದಾರಿಗೆ ಎಳೆಯಲು ಬಯಸುತ್ತಿದೆ ಎಂದು ರಾಹುಲ್ಗಾಂಧಿ ಅವರು ಹೇಳಿದ್ದಾರೆ. </p>.<p>ನಿರುದ್ಯೋಗ ಸಮಸ್ಯೆ ಕುರಿತಾಗಿ ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ಪಕ್ಷವು ನಿರಂತರವಾಗಿ ತರಾಟೆಗೆ ತೆಗೆದುಕೊಳ್ಳುತ್ತಿದ್ದು, ಇದನ್ನು ಚುನಾವಣಾ ವಸ್ತುವಾಗಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ವಾರ್ಷಿಕ ಎರಡು ಕೋಟಿ ಉದ್ಯೋಗಾವಕಾಶ ಸೃಷ್ಟಿ ಕುರಿತಂತೆ ಬಿಜೆಪಿಯು ದೇಶದ ಯುವಜನರನ್ನು ತಪ್ಪುದಾರಿಗೆ ಎಳೆಯುತ್ತಿದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಆರೋಪಿಸಿದರು.</p>.<p>ಉದ್ಯೋಗ ಸೃಷ್ಟಿ ಕುರಿತಂತೆ ಬಿಜೆಪಿ ಸೃಷ್ಟಿಸಿದ ಭ್ರಮೆಯ ಚೌಕಟ್ಟಿನಿಂದ ಹೊರಬಂದು ಯುವಜನರು ತಮ್ಮದೇ ಗುರಿ ನಿಗದಿಪಡಿಸಿ ಕೊಳ್ಳಬೇಕು. ಕಾಂಗ್ರೆಸ್ ‘ಯುವ ನ್ಯಾಯ’ ಭರವಸೆ ಮೂಲಕ ದೇಶದಲ್ಲಿ ಉದ್ಯೋಗ ಕ್ರಾಂತಿ ಕೈಗೊಳ್ಳಲು ತೀರ್ಮಾನಿಸಿದೆ ಎಂದು ತಿಳಿಸಿದರು.</p>.<p>‘ಮೋದಿಯವರೇ, ಉದ್ಯೋಗಾವಕಾಶ ಕುರಿತು ನಿಮಗೆ ಸ್ಪಷ್ಟ ಯೋಜನೆಗಳಿವೆಯೇ ಎಂಬುದು ಯುವಜನರ ಪ್ರಶ್ನೆಯಾಗಿದೆ. ಪ್ರತಿ ಗ್ರಾಮ, ರಸ್ತೆಯಲ್ಲಿ ಬಿಜೆಪಿಯವರಿಗೆ ಈ ಪ್ರಶ್ನೆ ಕೇಳಲಾಗುತ್ತಿದೆ. ಉದ್ಯೋಗ ಸೃಷ್ಟಿ ಕುರಿತಂತೆ ಸುಳ್ಳು ಹೇಳಿದ್ದೇಕೆ?’ ಎಂದು ಪ್ರಶ್ನಿಸಿದ್ದಾರೆ. </p>.<p>ಯುವ ನ್ಯಾಯ ಯೋಜನೆಯಡಿ ಉದ್ಯೋಗ ಕ್ರಾಂತಿಗೆ ಕಾಂಗ್ರೆಸ್ ನಿರ್ಧರಿಸಿದೆ. ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ 30 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಪ್ರತಿ ಪದವೀಧರ ಯುವಜನರಿಗೆ ‘ಮೊದಲ ಉದ್ಯೋಗ ಖಚಿತ’ ಯೋಜನೆಯಡಿ ವಾರ್ಷಿಕ ₹1 ಲಕ್ಷ ನೀಡಲಾಗುತ್ತದೆ. ಕಾಯ್ದೆ ರೂಪಿಸುವ ಮೂಲಕ ಪ್ರಶ್ನೆಪತ್ರಿಕೆ ಸೋರಿಕೆ ಸಮಸ್ಯೆ ಬಗೆಹರಿಸಲಾಗುವುದು ಎಂದು ಅವರು ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ.</p>.<p>ಎರಡು ಭಿನ್ನ ಸಿದ್ಧಾಂತಗಳ ನಡುವಣ ವ್ಯತ್ಯಾಸ ಗುರುತಿಸಲು ಈಗ ಸಕಾಲ. ಕಾಂಗ್ರೆಸ್ ಯುವಜನರ ಭವಿಷ್ಯ ಭದ್ರಪಡಿಸಲು ಬಯಸುತ್ತದೆ. ಬಿಜೆಪಿಯು ಅವರನ್ನು ತಪ್ಪುದಾರಿಗೆ ಎಳೆಯಲು ಬಯಸುತ್ತಿದೆ ಎಂದು ರಾಹುಲ್ಗಾಂಧಿ ಅವರು ಹೇಳಿದ್ದಾರೆ. </p>.<p>ನಿರುದ್ಯೋಗ ಸಮಸ್ಯೆ ಕುರಿತಾಗಿ ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ಪಕ್ಷವು ನಿರಂತರವಾಗಿ ತರಾಟೆಗೆ ತೆಗೆದುಕೊಳ್ಳುತ್ತಿದ್ದು, ಇದನ್ನು ಚುನಾವಣಾ ವಸ್ತುವಾಗಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>