ನಗರದ ಗಾಂಧಿ ಮೈದಾನದಲ್ಲಿ ರ್ಯಾಲಿಯನ್ನು ಆಯೋಜಿಸಲಾಗಿತ್ತು.
ಈ ರ್ಯಾಲಿಯು ಮುಂಬರುವ ಲೋಕಸಭಾ ಚುನಾವಣೆಗೆ ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಶಕ್ತಿ ಪ್ರದರ್ಶನವಾಗಿದೆ ಎಂದು ಪಕ್ಷವು ತಿಳಿಸಿದೆ.
ರ್ಯಾಲಿಯಲ್ಲಿ ಪಕ್ಷದ ಅಧ್ಯಕ್ಷ ಲಾಲು ಪ್ರಸಾದ್, ಅವರ ಪುತ್ರ ತೇಜಸ್ವಿ ಯಾದವ್, ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಮತ್ತು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ. ರಾಜ ಸೇರಿದಂತೆ ಉನ್ನತ ನಾಯಕರು ಉಪಸ್ಥಿತರಿದ್ದರು.
ಆರ್ಜೆಡಿ ಜತೆಗಿನ ಮಹಾಘಟಬಂಧನ್ ಮೈತ್ರಿ ಮುರಿದುಕೊಂಡಿದ್ದ ನಿತೀಶ್ ಕುಮಾರ್, ಬಿಜೆಪಿ ಜತೆ ಸೇರಿಕೊಂಡು ಮತ್ತೆ ಸರ್ಕಾರ ರಚಿಸಿದ್ದರು. ಇದರಿಂದ ತೇಜಸ್ವಿ ಯಾದವ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನಷ್ಟವಾಗಿತ್ತು. ಈಗ ಜನರ ಬೆಂಬಲ ಪಡೆಯಲು ಮತ್ತು ಹೆಚ್ಚಿನ ಉದ್ಯೋಗ ಸೃಷ್ಟಿಯ ಭರವಸೆಯೊಂದಿಗೆ ಲೋಕಸಭೆ ಚುನಾವಣೆ ಎದುರಿಸಲು ಆರ್ಜೆಡಿ ಸಿದ್ಧತೆ ನಡೆಸುತ್ತಿದೆ.