<p><strong>ನವದೆಹಲಿ</strong>: ಬುಡಕಟ್ಟು ಸಮುದಾಯವನ್ನು ರಾಜಕೀಯವಾಗಿ ಸಬಲೀಕರಣಗೊಳಿಸುವ ಮೂಲಕ ಆ ಸಮುದಾಯದವರನ್ನು ಸಾಮಾಜಿಕವಾಗಿ ಬಲಪಡಿಸಲು ಕಾಂಗ್ರೆಸ್ ಬಯಸುತ್ತದೆ. ಅದಕ್ಕಾಗಿ ಪಕ್ಷದಲ್ಲೂ ನಾಯಕತ್ವ, ಸ್ಥಾನಮಾನ ನೀಡಲಾಗುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ತಮ್ಮ ನಿವಾಸದಲ್ಲಿ ಕೆಲವು ದಿನಗಳ ಹಿಂದೆ ಆದಿವಾಸಿ ಮುಖಂಡರೊಂದಿಗೆ ನಡೆದ ಸಂವಾದದ ವಿಡಿಯೊವನ್ನು ರಾಹುಲ್ ಹಂಚಿಕೊಂಡಿದ್ದಾರೆ. ‘ಕಾಂಗ್ರೆಸ್ ಪಕ್ಷದಲ್ಲಿ ದೇಶದಾದ್ಯಂತ ಬುಡಕಟ್ಟು ಸಮುದಾಯದ ನಾಯಕತ್ವವನ್ನು ಬೆಳೆಸಲು ನಾವು ಬಯಸುತ್ತೇವೆ’ ಎಂದಿದ್ದಾರೆ. </p>.<p>‘ಬುಡಕಟ್ಟು ಸಮುದಾಯದವರಿಗೆ ಸಹಾಯ ಮಾಡಲು ಬಯಸುತ್ತೇನೆ. ಅದಕ್ಕಾಗಿ ಸಮುದಾಯದ ಜನರು ಒಗ್ಗೂಡಬೇಕು ಮತ್ತು ಆದಿವಾಸಿಗಳ ಹಕ್ಕುಗಳಿಗಾಗಿ ನೈಜ ಹೋರಾಟ ನಡೆಸುವವರು ಮುಂದೆ ಬರಬೇಕು. ಆದಿವಾಸಿ ನಾಯಕರಿಗೆ ಬಲ ತುಂಬಬೇಕೆಂಬುದು ನಮ್ಮ ಬಯಕೆಯಾಗಿದ್ದು, ಪ್ರತಿ ರಾಜ್ಯದಲ್ಲಿ 10-15 ಬುಡಕಟ್ಟು ನಾಯಕರು ಹೊರಹೊಮ್ಮಬೇಕೆಂದು ಆಶಿಸುತ್ತೇವೆ’ ಎಂದು ಅವರು ಬುಡಕಟ್ಟು ಸಮುದಾಯದ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.</p>.<p>‘ರಾಜಕೀಯ ಅಧಿಕಾರ ನೀಡುವ ಮೂಲಕ ಅವರನ್ನು ಸಾಮಾಜಿಕವಾಗಿ ಬಲಪಡಿಸುವುದು ನನ್ನ ಗುರಿ. ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ನೀಡುವ ಮೂಲಕ ಈ ಕೆಲಸ ಆರಂಭವಾಗಲಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬುಡಕಟ್ಟು ಸಮುದಾಯವನ್ನು ರಾಜಕೀಯವಾಗಿ ಸಬಲೀಕರಣಗೊಳಿಸುವ ಮೂಲಕ ಆ ಸಮುದಾಯದವರನ್ನು ಸಾಮಾಜಿಕವಾಗಿ ಬಲಪಡಿಸಲು ಕಾಂಗ್ರೆಸ್ ಬಯಸುತ್ತದೆ. ಅದಕ್ಕಾಗಿ ಪಕ್ಷದಲ್ಲೂ ನಾಯಕತ್ವ, ಸ್ಥಾನಮಾನ ನೀಡಲಾಗುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ತಮ್ಮ ನಿವಾಸದಲ್ಲಿ ಕೆಲವು ದಿನಗಳ ಹಿಂದೆ ಆದಿವಾಸಿ ಮುಖಂಡರೊಂದಿಗೆ ನಡೆದ ಸಂವಾದದ ವಿಡಿಯೊವನ್ನು ರಾಹುಲ್ ಹಂಚಿಕೊಂಡಿದ್ದಾರೆ. ‘ಕಾಂಗ್ರೆಸ್ ಪಕ್ಷದಲ್ಲಿ ದೇಶದಾದ್ಯಂತ ಬುಡಕಟ್ಟು ಸಮುದಾಯದ ನಾಯಕತ್ವವನ್ನು ಬೆಳೆಸಲು ನಾವು ಬಯಸುತ್ತೇವೆ’ ಎಂದಿದ್ದಾರೆ. </p>.<p>‘ಬುಡಕಟ್ಟು ಸಮುದಾಯದವರಿಗೆ ಸಹಾಯ ಮಾಡಲು ಬಯಸುತ್ತೇನೆ. ಅದಕ್ಕಾಗಿ ಸಮುದಾಯದ ಜನರು ಒಗ್ಗೂಡಬೇಕು ಮತ್ತು ಆದಿವಾಸಿಗಳ ಹಕ್ಕುಗಳಿಗಾಗಿ ನೈಜ ಹೋರಾಟ ನಡೆಸುವವರು ಮುಂದೆ ಬರಬೇಕು. ಆದಿವಾಸಿ ನಾಯಕರಿಗೆ ಬಲ ತುಂಬಬೇಕೆಂಬುದು ನಮ್ಮ ಬಯಕೆಯಾಗಿದ್ದು, ಪ್ರತಿ ರಾಜ್ಯದಲ್ಲಿ 10-15 ಬುಡಕಟ್ಟು ನಾಯಕರು ಹೊರಹೊಮ್ಮಬೇಕೆಂದು ಆಶಿಸುತ್ತೇವೆ’ ಎಂದು ಅವರು ಬುಡಕಟ್ಟು ಸಮುದಾಯದ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.</p>.<p>‘ರಾಜಕೀಯ ಅಧಿಕಾರ ನೀಡುವ ಮೂಲಕ ಅವರನ್ನು ಸಾಮಾಜಿಕವಾಗಿ ಬಲಪಡಿಸುವುದು ನನ್ನ ಗುರಿ. ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ನೀಡುವ ಮೂಲಕ ಈ ಕೆಲಸ ಆರಂಭವಾಗಲಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>