<p><strong>ತಿರುವನಂತಪುರ:</strong> ಲೋಕಸಭೆ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಶಶಿ ತರೂರ್, ಬಿಜೆಪಿ ತಾನಾಗಿಯೇ ಸೆಲ್ಫ್ ಗೋಲು ಹೊಡೆದ ಹಾಗಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.</p>.<p>ಲೋಕಸಭೆ ಕಾರ್ಯಾಲಯದ ಕ್ರಮವನ್ನು ಖಂಡಿಸಿರುವ ತರೂರ್, ಅಂತಿಮವಾಗಿ ಇದರಿಂದ ರಾಹುಲ್ ಗಾಂಧಿ ಹಾಗೂ ವಿರೋಧ ಪಕ್ಷಗಳಿಗೆ ಪ್ರಯೋಜನವಾಗಲಿದೆ ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ: <a href="https://www.prajavani.net/india-news/disqualified-from-lok-sabha-as-pm-scared-of-my-next-speech-on-adani-issue-rahul-gandhi-1026297.html" itemprop="url">ಅದಾನಿ ಪ್ರಕರಣದಲ್ಲಿ ನನ್ನ ಮುಂದಿನ ಭಾಷಣದ ಬಗ್ಗೆ ಪ್ರಧಾನಿಗೆ ಭಯ: ರಾಹುಲ್ ಗಾಂಧಿ </a></p>.<p>ಇದು ಜಗತ್ತಿನಲ್ಲಿ ಭಾರತದ ಪ್ರಜಾಪ್ರಭುತ್ವವನ್ನು ಕೆಟ್ಟದಾಗಿ ಬಿಂಬಿಸಲಿದ್ದು, ಬಿಜೆಪಿ ಮೇಲೆ ಅಸಂಕಲ್ಪಿತ ಪರಿಣಾಮವನ್ನು ಉಂಟು ಮಾಡಲಿದೆ ಎಂದು ಹೇಳಿದ್ದಾರೆ.</p>.<p>ಪ್ರತಿಯೊಂದು ರಾಜಧಾನಿಯಲ್ಲೂ ರಾಹುಲ್ ಗಾಂಧಿ ಅವರಿಗೆ ಏನಾಯಿತು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಅಲ್ಲದೆ ವಿರೋಧ ಪಕ್ಷಗಳ ನಡುವೆ ಈ ಹಿಂದೆಂದೂ ಇರದ ರೀತಿಯಲ್ಲಿ ಒಗ್ಗಟ್ಟನ್ನು ಸೃಷ್ಟಿ ಮಾಡಿದೆ ಎಂದು ಹೇಳಿದರು.</p>.<p>ಕಾಂಗ್ರೆಸ್ ಪಕ್ಷವನ್ನು ವಿರೋಧಿಸುವ ಪ್ರಾದೇಶಿಕ ಪಕ್ಷಗಳು ರಾಹುಲ್ ಪರವಾಗಿ ನಿಂತಿದ್ದು, ಪ್ರಜಾಪ್ರಭುತ್ವದ ಮೇಲಿನ ಈ ದಾಳಿಯನ್ನು ಖಂಡಿಸಿವೆ ಎಂದು ಉಲ್ಲೇಖ ಮಾಡಿದರು.<br /><br />ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿರುವ ಸೂರತ್ ನ್ಯಾಯಾಲಯದ ತೀರ್ಪನ್ನು ತರೂರ್ ಪ್ರಶ್ನೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಲೋಕಸಭೆ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಶಶಿ ತರೂರ್, ಬಿಜೆಪಿ ತಾನಾಗಿಯೇ ಸೆಲ್ಫ್ ಗೋಲು ಹೊಡೆದ ಹಾಗಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.</p>.<p>ಲೋಕಸಭೆ ಕಾರ್ಯಾಲಯದ ಕ್ರಮವನ್ನು ಖಂಡಿಸಿರುವ ತರೂರ್, ಅಂತಿಮವಾಗಿ ಇದರಿಂದ ರಾಹುಲ್ ಗಾಂಧಿ ಹಾಗೂ ವಿರೋಧ ಪಕ್ಷಗಳಿಗೆ ಪ್ರಯೋಜನವಾಗಲಿದೆ ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ: <a href="https://www.prajavani.net/india-news/disqualified-from-lok-sabha-as-pm-scared-of-my-next-speech-on-adani-issue-rahul-gandhi-1026297.html" itemprop="url">ಅದಾನಿ ಪ್ರಕರಣದಲ್ಲಿ ನನ್ನ ಮುಂದಿನ ಭಾಷಣದ ಬಗ್ಗೆ ಪ್ರಧಾನಿಗೆ ಭಯ: ರಾಹುಲ್ ಗಾಂಧಿ </a></p>.<p>ಇದು ಜಗತ್ತಿನಲ್ಲಿ ಭಾರತದ ಪ್ರಜಾಪ್ರಭುತ್ವವನ್ನು ಕೆಟ್ಟದಾಗಿ ಬಿಂಬಿಸಲಿದ್ದು, ಬಿಜೆಪಿ ಮೇಲೆ ಅಸಂಕಲ್ಪಿತ ಪರಿಣಾಮವನ್ನು ಉಂಟು ಮಾಡಲಿದೆ ಎಂದು ಹೇಳಿದ್ದಾರೆ.</p>.<p>ಪ್ರತಿಯೊಂದು ರಾಜಧಾನಿಯಲ್ಲೂ ರಾಹುಲ್ ಗಾಂಧಿ ಅವರಿಗೆ ಏನಾಯಿತು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಅಲ್ಲದೆ ವಿರೋಧ ಪಕ್ಷಗಳ ನಡುವೆ ಈ ಹಿಂದೆಂದೂ ಇರದ ರೀತಿಯಲ್ಲಿ ಒಗ್ಗಟ್ಟನ್ನು ಸೃಷ್ಟಿ ಮಾಡಿದೆ ಎಂದು ಹೇಳಿದರು.</p>.<p>ಕಾಂಗ್ರೆಸ್ ಪಕ್ಷವನ್ನು ವಿರೋಧಿಸುವ ಪ್ರಾದೇಶಿಕ ಪಕ್ಷಗಳು ರಾಹುಲ್ ಪರವಾಗಿ ನಿಂತಿದ್ದು, ಪ್ರಜಾಪ್ರಭುತ್ವದ ಮೇಲಿನ ಈ ದಾಳಿಯನ್ನು ಖಂಡಿಸಿವೆ ಎಂದು ಉಲ್ಲೇಖ ಮಾಡಿದರು.<br /><br />ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿರುವ ಸೂರತ್ ನ್ಯಾಯಾಲಯದ ತೀರ್ಪನ್ನು ತರೂರ್ ಪ್ರಶ್ನೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>