ಕಾಂಗ್ರೆಸ್ ಪಕ್ಷಕ್ಕೆ ಎಷ್ಟು ಹಣವನ್ನು ಸಂಗ್ರಹಿಸಲು ಸಾಧ್ಯವಾಗುತ್ತದೆ? ಎಂದು ರಾಹುಲ್ ಗಾಂಧಿ ಪಕ್ಷದ ಖಜಾಂಚಿ ಅಜಯ್ ಮಾಕನ್ ಅವರನ್ನು ಕೇಳಿದರು. ಪಕ್ಷ ಇನ್ನೂ ಯಾವುದೇ ನಿರ್ದಿಷ್ಟ ಗುರಿಯನ್ನು ನಿಗದಿಪಡಿಸಿಲ್ಲ. ಆದರೆ ಇದು ನಿರೀಕ್ಷೆಗಿಂತ ಹೆಚ್ಚಿನ ಮೊತ್ತವನ್ನು ಸಂಗ್ರಹಿಸಬಹುದು ಎಂದು ಮಾಕೆನ್ ಭರವಸೆ ವ್ಯಕ್ತಪಡಿಸಿದರು.
ಮಹಾರಾಷ್ಟ್ರ ಇಲ್ಲಿಯವರೆಗೆ ಹೆಚ್ಚಿನ ದೇಣಿಗೆಯನ್ನು ನೀಡಿದೆ. ರಾಜಸ್ಥಾನ ಮತ್ತು ಉತ್ತರ ಪ್ರದೇಶ ನಂತರದ ಸ್ಥಾನದಲ್ಲಿದೆ ಎಂದು ಮಾಕೆನ್ ವಿವರಿಸಿದರು.
2024ರ ಲೋಕಸಭೆ ಚುನಾವಣೆಗೂ ಮುನ್ನ ಸಂಪನ್ಮೂಲವನ್ನು ಕ್ರೋಡೀಕರಿಸಲು ಕಾಂಗ್ರೆಸ್ ದೇಶದಾದ್ಯಂತ 'ದೇಶಕ್ಕಾಗಿ ದೇಣಿಗೆ' ಕ್ರೌಡ್ಫಂಡಿಂಗ್ ಅಭಿಯಾನವನ್ನು ಪ್ರಾರಂಭಿಸಿದೆ. ಡಿಸೆಂಬರ್ 18 ರಂದು ಮಲ್ಲಿಕಾರ್ಜುನ ಖರ್ಗೆ ದೇಣಿಗೆ ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.