ಹೊಸದಾಗಿ ರಚನೆಗೊಂಡ 17ನೇ ಲೋಕಸಭೆಯಲ್ಲಿ ರಾಹುಲ್ ಮೊದಲ ಬಾರಿ ಮಾತನಾಡಿದರು. ರೈತರು ಸಾಲದ ಹೊರೆಯಲ್ಲಿ ತತ್ತರಿಸಲು ಬಿಜೆಪಿ ಸರ್ಕಾರವೇ ಕಾರಣ ಎಂದು ಅವರು ಪ್ರತಿಪಾದಿಸಿದರು.ರೈತರ ಸಂಕಷ್ಟ ನೀಗುವುದಕ್ಕೆ ಬಜೆಟ್ನಲ್ಲಿ ಯಾವುದೇ ಗಟ್ಟಿ ಕ್ರಮಗಳು ಇಲ್ಲ ಎಂಬುದನ್ನು ನೋಡಿ ಬೇಸರವಾಗಿದೆ ಎಂದು ಅವರು ಹೇಳಿದರು. ಆದರೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರಾಹುಲ್ ಆರೋಪವನ್ನು ತಳ್ಳಿ ಹಾಕಿದರು. ಈ ಪರಿಸ್ಥಿತಿಗೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದರು.