‘ಅದರ ಜತೆಯಲ್ಲೇ ನಾವು ನಡೆಸುತ್ತಿರುವ ಸೈದ್ಧಾಂತಿಕ ಹೋರಾಟವು ಮುಂದುವರಿಯಲಿದೆ. ತೆಲಂಗಾಣದ ಜತೆಗೆ ಧನ್ಯವಾದಗಳು. ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನತೆಗೆ ನಾವು ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ. ಚುನಾವಣೆಯಲ್ಲಿ ಅದ್ಭುತವಾಗಿ ಕೆಲಸ ಮಾಡಿ ಪಕ್ಷವನ್ನು ಬೆಂಬಲಿಸಿದ ಕಾರ್ಯಕರ್ತರಿಗೆ ಧನ್ಯವಾದಗಳು’ ಎಂದಿದ್ದಾರೆ.
ಮಧ್ಯಪ್ರದೇಶದಲ್ಲಿ ಬಿಜೆಪಿ ಎರಡನೇ ಬಾರಿ ಬಹುಮತದತ್ತ ಸಾಗುತ್ತಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಪರಾಭವಗೊಂಡಿದೆ, ಛತ್ತಿಸಗಢದಲ್ಲೂ ಕಾಂಗ್ರೆಸ್ನ ನಿರೀಕ್ಷೆ ಹುಸಿಯಾಗಿದೆ. ತೆಲಂಗಾಣದಲ್ಲಿ ಬಿಆರ್ಎಸ್ನ ಕೋಟೆಗೆ ಕಾಂಗ್ರೆಸ್ ಲಗ್ಗೆ ಇಟ್ಟಿದೆ. ಮತ್ತೊಂದೆಡೆ ಬಿಜೆಪಿ ಒಂದಂಕಿಗೆ ತೃಪ್ತಿಪಟ್ಟುಕೊಳ್ಳುವಂತಾಗಿದೆ.