<p><strong>ನವದೆಹಲಿ:</strong> ರಾಹುಲ್ ಗಾಂಧಿ ತಮ್ಮ ಕುಟುಂಬದ ಅಪರಾಧಗಳನ್ನು ರಕ್ಷಣೆ ಮಾಡಲು ಲೋಕಸಭಾ ವಿರೋಧ ಪಕ್ಷದ ನಾಯಕನ ಸಾಂವಿಧಾನಿಕ ಹುದ್ದೆಯನ್ನು ದುರ್ಬಳಕೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಶನಿವಾರ ಆಪಾದಿಸಿದೆ.</p>.RSS, BJP ವಿರುದ್ಧ ವ್ಯವಸ್ಥಿತವಾಗಿ ಹೋರಾಡುತ್ತಿದ್ದೇವೆ: ರಾಹುಲ್ ಗಾಂಧಿಗೆ CPI(M).<p>ತಮ್ಮ ಭಾವ ರಾಬರ್ಟ್ ವಾದ್ರಾ ವಿರುದ್ಧ ಇ.ಡಿ ಆರೋಪ ಪಟ್ಟಿ ಸಲ್ಲಿಸಿದ್ದನ್ನು ಉಲ್ಲೇಖಿಸಿ, ಅವರ ವಿರುದ್ಧ ಕೇಂದ್ರ ಸರ್ಕಾರ ದ್ವೇಷ ಸಾಧನೆ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಗುರಿಯಾಗಿಸಿಕೊಂಡು ಬಿಜೆಪಿ ಹೀಗೆ ಹೇಳಿದೆ.</p><p>ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಸುದಾಂಶು ತ್ರಿವೇದಿ, ‘ಇಂಡಿಯಾ ಮೈತ್ರಿಕೂಟದಲ್ಲಿ ಆಂತರಿಕ ಕಲಹವಿದ್ದು, ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ದುರ್ಬಲಗೊಂಡಿದೆ’ ಎಂದು ಹೇಳಿದ್ದಾರೆ.</p>.ವಾದ್ರಾ ವಿರುದ್ಧ ದೋಷಾರೋಪ: ದ್ವೇಷ ಸಾಧನೆಯ ಮುಂದುವರಿದ ಭಾಗ ಎಂದ ರಾಹುಲ್.<p>ಹಿಂದಿ ಗೀತೆಯೊಂದನ್ನು ಉಲ್ಲೇಖಿಸಿ ವಿರೋಧ ಪಕ್ಷಗಳನ್ನು ಲೇವಡಿ ಮಾಡಿದ ಅವರು, ಮೈತ್ರಿಯ ಪರಿಸ್ಥಿತಿ ಈಗಲೇ ಸಂಕಷ್ಟದಲ್ಲಿದ್ದು, ಭವಿಷ್ಯದಲ್ಲಿ ಎಷ್ಟು ಕೆಟ್ಟದಾಗಿರಬಹುದು ಎಂದು ಯೋಚಿಸುತ್ತಿದ್ದೇನೆ ಎಂದು ಹೇಳಿದ್ದಾರೆ.</p><p>ಇಂಡಿಯಾ ಮೈತ್ರಿಕೂಟದಿಂದ ಹೊರಬಂದಿದ್ದಾಗಿ ಆಮ್ ಆದ್ಮಿ ಪಕ್ಷ ಈಗಾಗಲೇ ಘೋಷಿಸಿದೆ. ಕೇರಳ ಸರ್ಕಾರವನ್ನು ಟೀಕಿಸಿದ ರಾಹುಲ್ ಗಾಂಧಿ ವಿರುದ್ಧ ಸಿಪಿಐಎಂ ಅಸಮಾಧಾನ ವ್ಯಕ್ತಪಡಿಸಿದೆ.</p><p>ವಾದ್ರಾ ಬಗೆಗಿನ ರಾಹುಲ್ ಗಾಂಧಿ ಅವರ ಪೋಸ್ಟ್ ಅನ್ನು ಉಲ್ಲೇಖಿಸಿ ತ್ರಿವೇದಿ, ‘ಸಾಂವಿಧಾನಿಕ ಹುದ್ದೆಯನ್ನು ಕುಟುಂಬದ ಅಪರಾಧಗಳ ರಕ್ಷಣೆಗೆ ಬಳಸಿಕೊಳ್ಳುತ್ತಿದ್ದಾರೆ’ ಎಂದರು.</p>.Fact Check | ರಾಹುಲ್ ಗಾಂಧಿ ಜೊತೆ ನ್ಯಾಯಾಧೀಶರ ಸೆಲ್ಫಿ; ಇದು ಸುಳ್ಳು ಸುದ್ದಿ.<p> ಸಮಾಜವನ್ನು ಭಾಷೆ, ಪ್ರಾದೇಶಿಕವಾಗಿ ವಿಭಜಿಸಿಯಾದರೂ ಸರಿ, ಕಾಂಗ್ರೆಸ್ನ ‘ಮೊದಲ ಕುಟುಂಬ’ ಹಣ ಹಾಗೂ ಅಧಿಕಾರಕ್ಕಾಗಿ ಹಾತೊರೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.</p><p>ಕತ್ತಿನವರೆಗೆ ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ನ ಮೊದಲ ಕುಟುಂಬವು, ಕುಟುಂಬದ ವಿಚಾರವನ್ನು ರಾಜಕೀಯಗೊಳಿಸುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.</p><p>ಛತ್ತೀಸಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹಾಗೂ ಅವರ ಕುಟುಂಬಸ್ಥರ ಮೇಲಿನ ಇ.ಡಿ ದಾಳಿಯನ್ನು ಟೀಕಿಸಿದ ಸಂಸದೆ ಪ್ರಿಯಾಂಕಾ ಗಾಂಧಿಯವರನ್ನು ಉಲ್ಲೇಖಿಸಿದ ತ್ರಿವೇದಿ, ಗಾಂಧಿ ಕುಟುಂಬವು ಭ್ರಷ್ಟಾಚಾರಿಗಳನ್ನು ರಕ್ಷಣೆ ಮಾಡುತ್ತಿದೆ ಎಂದು ಹೇಳಿದ್ದಾರೆ.</p>.ಬಿಹಾರ | ಚುನಾವಣಾ ಆಯೋಗ BJPಯ ಶಾಖೆಯಾಯಿತೇ..?: ರಾಹುಲ್ ಗಾಂಧಿ ಕಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಹುಲ್ ಗಾಂಧಿ ತಮ್ಮ ಕುಟುಂಬದ ಅಪರಾಧಗಳನ್ನು ರಕ್ಷಣೆ ಮಾಡಲು ಲೋಕಸಭಾ ವಿರೋಧ ಪಕ್ಷದ ನಾಯಕನ ಸಾಂವಿಧಾನಿಕ ಹುದ್ದೆಯನ್ನು ದುರ್ಬಳಕೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಶನಿವಾರ ಆಪಾದಿಸಿದೆ.</p>.RSS, BJP ವಿರುದ್ಧ ವ್ಯವಸ್ಥಿತವಾಗಿ ಹೋರಾಡುತ್ತಿದ್ದೇವೆ: ರಾಹುಲ್ ಗಾಂಧಿಗೆ CPI(M).<p>ತಮ್ಮ ಭಾವ ರಾಬರ್ಟ್ ವಾದ್ರಾ ವಿರುದ್ಧ ಇ.ಡಿ ಆರೋಪ ಪಟ್ಟಿ ಸಲ್ಲಿಸಿದ್ದನ್ನು ಉಲ್ಲೇಖಿಸಿ, ಅವರ ವಿರುದ್ಧ ಕೇಂದ್ರ ಸರ್ಕಾರ ದ್ವೇಷ ಸಾಧನೆ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಗುರಿಯಾಗಿಸಿಕೊಂಡು ಬಿಜೆಪಿ ಹೀಗೆ ಹೇಳಿದೆ.</p><p>ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಸುದಾಂಶು ತ್ರಿವೇದಿ, ‘ಇಂಡಿಯಾ ಮೈತ್ರಿಕೂಟದಲ್ಲಿ ಆಂತರಿಕ ಕಲಹವಿದ್ದು, ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ದುರ್ಬಲಗೊಂಡಿದೆ’ ಎಂದು ಹೇಳಿದ್ದಾರೆ.</p>.ವಾದ್ರಾ ವಿರುದ್ಧ ದೋಷಾರೋಪ: ದ್ವೇಷ ಸಾಧನೆಯ ಮುಂದುವರಿದ ಭಾಗ ಎಂದ ರಾಹುಲ್.<p>ಹಿಂದಿ ಗೀತೆಯೊಂದನ್ನು ಉಲ್ಲೇಖಿಸಿ ವಿರೋಧ ಪಕ್ಷಗಳನ್ನು ಲೇವಡಿ ಮಾಡಿದ ಅವರು, ಮೈತ್ರಿಯ ಪರಿಸ್ಥಿತಿ ಈಗಲೇ ಸಂಕಷ್ಟದಲ್ಲಿದ್ದು, ಭವಿಷ್ಯದಲ್ಲಿ ಎಷ್ಟು ಕೆಟ್ಟದಾಗಿರಬಹುದು ಎಂದು ಯೋಚಿಸುತ್ತಿದ್ದೇನೆ ಎಂದು ಹೇಳಿದ್ದಾರೆ.</p><p>ಇಂಡಿಯಾ ಮೈತ್ರಿಕೂಟದಿಂದ ಹೊರಬಂದಿದ್ದಾಗಿ ಆಮ್ ಆದ್ಮಿ ಪಕ್ಷ ಈಗಾಗಲೇ ಘೋಷಿಸಿದೆ. ಕೇರಳ ಸರ್ಕಾರವನ್ನು ಟೀಕಿಸಿದ ರಾಹುಲ್ ಗಾಂಧಿ ವಿರುದ್ಧ ಸಿಪಿಐಎಂ ಅಸಮಾಧಾನ ವ್ಯಕ್ತಪಡಿಸಿದೆ.</p><p>ವಾದ್ರಾ ಬಗೆಗಿನ ರಾಹುಲ್ ಗಾಂಧಿ ಅವರ ಪೋಸ್ಟ್ ಅನ್ನು ಉಲ್ಲೇಖಿಸಿ ತ್ರಿವೇದಿ, ‘ಸಾಂವಿಧಾನಿಕ ಹುದ್ದೆಯನ್ನು ಕುಟುಂಬದ ಅಪರಾಧಗಳ ರಕ್ಷಣೆಗೆ ಬಳಸಿಕೊಳ್ಳುತ್ತಿದ್ದಾರೆ’ ಎಂದರು.</p>.Fact Check | ರಾಹುಲ್ ಗಾಂಧಿ ಜೊತೆ ನ್ಯಾಯಾಧೀಶರ ಸೆಲ್ಫಿ; ಇದು ಸುಳ್ಳು ಸುದ್ದಿ.<p> ಸಮಾಜವನ್ನು ಭಾಷೆ, ಪ್ರಾದೇಶಿಕವಾಗಿ ವಿಭಜಿಸಿಯಾದರೂ ಸರಿ, ಕಾಂಗ್ರೆಸ್ನ ‘ಮೊದಲ ಕುಟುಂಬ’ ಹಣ ಹಾಗೂ ಅಧಿಕಾರಕ್ಕಾಗಿ ಹಾತೊರೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.</p><p>ಕತ್ತಿನವರೆಗೆ ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ನ ಮೊದಲ ಕುಟುಂಬವು, ಕುಟುಂಬದ ವಿಚಾರವನ್ನು ರಾಜಕೀಯಗೊಳಿಸುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.</p><p>ಛತ್ತೀಸಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹಾಗೂ ಅವರ ಕುಟುಂಬಸ್ಥರ ಮೇಲಿನ ಇ.ಡಿ ದಾಳಿಯನ್ನು ಟೀಕಿಸಿದ ಸಂಸದೆ ಪ್ರಿಯಾಂಕಾ ಗಾಂಧಿಯವರನ್ನು ಉಲ್ಲೇಖಿಸಿದ ತ್ರಿವೇದಿ, ಗಾಂಧಿ ಕುಟುಂಬವು ಭ್ರಷ್ಟಾಚಾರಿಗಳನ್ನು ರಕ್ಷಣೆ ಮಾಡುತ್ತಿದೆ ಎಂದು ಹೇಳಿದ್ದಾರೆ.</p>.ಬಿಹಾರ | ಚುನಾವಣಾ ಆಯೋಗ BJPಯ ಶಾಖೆಯಾಯಿತೇ..?: ರಾಹುಲ್ ಗಾಂಧಿ ಕಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>