<p><strong>ನವದೆಹಲಿ:</strong> ‘ಎಸ್ಐಆರ್ ಎಲ್ಲೆಲ್ಲಿ ನಡೆಯುತ್ತದೆಯೊ ಅಲ್ಲೆಲ್ಲಾ ಮತಗಳ್ಳತನ ನಡೆಯುತ್ತದೆ. ಗುಜರಾತ್ನಲ್ಲಿ ನಡೆಯುತ್ತಿರುವುದು ಆಡಳಿತಾತ್ಮಕವಾದ ಎಸ್ಐಆರ್ ಪ್ರಕ್ರಿಯೆ ಅಲ್ಲ. ಅಲ್ಲಿ ನಡೆಯುತ್ತಿರುವುದು ಯೋಜಿತ ಸಂಘಟಿತ ಮತ್ತು ಕಾರ್ಯತಂತ್ರದ ಭಾಗವಾದ ಮತಗಳ್ಳತನ’ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.</p><p>‘ನಿರ್ದಿಷ್ಟ ಸಮುದಾಯದವರನ್ನು ನಿರ್ದಿಷ್ಟ ಬೂತ್ಗಳಿಂದ ಜನರನ್ನು ಆಯ್ಕೆ ಮಾಡಿ ಪಟ್ಟಿಯಿಂದ ಅಳಿಸಿ ಹಾಕಲಾಗುತ್ತಿತ್ತು. ಇವರೆಲ್ಲ ಕಾಂಗ್ರೆಸ್ನ ಮತದಾರರು. ರಾಜಕೀಯವಾಗಿ ಬಿಜೆಪಿಗೆ ಹಿನ್ನಡೆಯಾಗುತ್ತದೆ ಎಂದಾದರೆ ಅಂಥಲ್ಲಿಂದ ಮತದಾರರನ್ನು ಅಳಿಸಿಬಿಡಲಾಗುತ್ತದೆ. ಇದೇ ರೀತಿಯಲ್ಲಿಯೇ ಅಳಂದದಲ್ಲಿ ಮತ್ತು ರಜೂರಾದಲ್ಲಿ ಮತಗಳ್ಳತನ ನಡೆದಿದ್ದವು’ ಎಂದರು.</p><p>‘ಗುಜರಾತ್ನಲ್ಲಿ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಜ.18 ಕೊನೇ ದಿನವಾಗಿತ್ತು. ಜ.15ರವರೆಗೆ ಕೆಲವೇ ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದವು. ಆದರೆ ಈ ಬಳಿಕ ದೊಡ್ಡ ಮಟ್ಟದ ಕಳ್ಳಾಟ ನಡೆಯಿತು. ಜ.15ರ ಬಳಿಕ 12 ಲಕ್ಷ ಆಕ್ಷೇಪಣೆಗಳು ಒಮ್ಮೆಲೆ ಬಂದವು’ ಎಂದು ಗುಜರಾತ್ನ ಕಾಂಗ್ರೆಸ್ ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ರಾಹುಲ್ ಅವರು ಪೋಸ್ಟ್ ಹಂಚಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಎಸ್ಐಆರ್ ಎಲ್ಲೆಲ್ಲಿ ನಡೆಯುತ್ತದೆಯೊ ಅಲ್ಲೆಲ್ಲಾ ಮತಗಳ್ಳತನ ನಡೆಯುತ್ತದೆ. ಗುಜರಾತ್ನಲ್ಲಿ ನಡೆಯುತ್ತಿರುವುದು ಆಡಳಿತಾತ್ಮಕವಾದ ಎಸ್ಐಆರ್ ಪ್ರಕ್ರಿಯೆ ಅಲ್ಲ. ಅಲ್ಲಿ ನಡೆಯುತ್ತಿರುವುದು ಯೋಜಿತ ಸಂಘಟಿತ ಮತ್ತು ಕಾರ್ಯತಂತ್ರದ ಭಾಗವಾದ ಮತಗಳ್ಳತನ’ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.</p><p>‘ನಿರ್ದಿಷ್ಟ ಸಮುದಾಯದವರನ್ನು ನಿರ್ದಿಷ್ಟ ಬೂತ್ಗಳಿಂದ ಜನರನ್ನು ಆಯ್ಕೆ ಮಾಡಿ ಪಟ್ಟಿಯಿಂದ ಅಳಿಸಿ ಹಾಕಲಾಗುತ್ತಿತ್ತು. ಇವರೆಲ್ಲ ಕಾಂಗ್ರೆಸ್ನ ಮತದಾರರು. ರಾಜಕೀಯವಾಗಿ ಬಿಜೆಪಿಗೆ ಹಿನ್ನಡೆಯಾಗುತ್ತದೆ ಎಂದಾದರೆ ಅಂಥಲ್ಲಿಂದ ಮತದಾರರನ್ನು ಅಳಿಸಿಬಿಡಲಾಗುತ್ತದೆ. ಇದೇ ರೀತಿಯಲ್ಲಿಯೇ ಅಳಂದದಲ್ಲಿ ಮತ್ತು ರಜೂರಾದಲ್ಲಿ ಮತಗಳ್ಳತನ ನಡೆದಿದ್ದವು’ ಎಂದರು.</p><p>‘ಗುಜರಾತ್ನಲ್ಲಿ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಜ.18 ಕೊನೇ ದಿನವಾಗಿತ್ತು. ಜ.15ರವರೆಗೆ ಕೆಲವೇ ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದವು. ಆದರೆ ಈ ಬಳಿಕ ದೊಡ್ಡ ಮಟ್ಟದ ಕಳ್ಳಾಟ ನಡೆಯಿತು. ಜ.15ರ ಬಳಿಕ 12 ಲಕ್ಷ ಆಕ್ಷೇಪಣೆಗಳು ಒಮ್ಮೆಲೆ ಬಂದವು’ ಎಂದು ಗುಜರಾತ್ನ ಕಾಂಗ್ರೆಸ್ ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ರಾಹುಲ್ ಅವರು ಪೋಸ್ಟ್ ಹಂಚಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>