ಇಲ್ಲಿಯ ಗ್ರಾಮವೊಂದರಲ್ಲಿ ಯಾತ್ರೆ ಸಾಗುತ್ತಿದ್ದ ವೇಳೆ ರಾಹುಲ್ ಅವರನ್ನು ಭೇಟಿಯಾದ 63 ವರ್ಷ ವಯಸ್ಸಿನ ವೃದ್ಧೆಯೊಬ್ಬರು, ‘ಮುಂಬರಲಿರುವ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಬೇಕೆಂದರೆ ರಾಜ್ಯದ ರೈತರ ಸಾಲ ಮನ್ನಾ ಮಾಡುವ ಘೋಷಣೆ ಮಾಡಿ’ ಎಂದು ಸಲಹೆ ನೀಡಿದರು. ಜೊತೆಗೆ, ಅಡುಗೆ ಅನಿಲ ಮತ್ತು ರಾಸಾಯನಿಕ ಗೊಬ್ಬರಗಳ ಬೆಲೆ ಇಳಿಸುವುದಕ್ಕೆ ಪ್ರಯತ್ನಿಸುವಂತೆ ಹೇಳಿದರು.