<p><strong>ನವದೆಹಲಿ</strong>: ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ, ರಾಹುಲ್ ಗಾಂಧಿ ಅವರು ದೇಶದೊಳಕ್ಕೆ ತಮ್ಮ ಅಜೆಂಡಾ ನುಗ್ಗಿಸಲು ಪ್ರಯತ್ನಿಸುತ್ತಿರುವ ಭಾರತ ವಿರೋಧಿ ಶಕ್ತಿಗಳ ಧ್ವಜಧಾರಿಯಾಗಿದ್ದಾರೆ ಎಂದು ಆರೋಪಿಸಿದೆ. ಜನರು ಅವರ ಬಗ್ಗೆ ಎಚ್ಚರದಿಂದಿರಬೇಕು ಎಂದು ಕರೆ ನೀಡಿದೆ.</p><p>ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಸುಧಾಂಶು ತ್ರಿವೇದಿ, ಕೊಲಂಬಿಯಾದಲ್ಲಿ ನಡೆದ ವಿಚಾರ ಸಂಕಿರಣವೊಂದರಲ್ಲಿ ರಾಹುಲ್ ಗಾಂಧಿ ಅವರ ಇತ್ತೀಚಿನ ಹೇಳಿಕೆಗಳ ವಿರುದ್ಧ ವಾಗ್ದಾಳಿ ನಡೆಸಿದರು. 100 ವರ್ಷಗಳಿಗೂ ಹೆಚ್ಚು ಕಾಲ ನೆಹರೂ-ಗಾಂಧಿ ಕುಟುಂಬದ ನಿಯಂತ್ರಣದಲ್ಲಿರುವ ಕಾಂಗ್ರೆಸ್ ಈಗ ಭಾರತ ವಿರೋಧಿ ಶಕ್ತಿಗಳ ಹಿಡಿತಕ್ಕೆ ಸಿಲುಕುತ್ತಿರುವುದು ಸ್ಪಷ್ಟವಾಗಿದೆ ಎಂದು ಆರೋಪಿಸಿದ್ದಾರೆ.</p><p>ಗುರುವಾರ ಕೊಲಂಬಿಯಾದ ವಿಶ್ವವಿದ್ಯಾಲಯವೊಂದರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಹುಲ್ ಹೇಳಿಕೆಗಳನ್ನು ಉಲ್ಲೇಖಿಸಿದ ತ್ರಿವೇದಿ, ಭಾರತದಲ್ಲಿ 16-17 ಭಾಷೆಗಳಿವೆ ಎಂದು ರಾಹುಲ್ ಹೇಳಿದ್ದು, ಭಾಷಾ ಸಂಘರ್ಷ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಈ ಹಿಂದೆ ಉತ್ತರ-ದಕ್ಷಿಣ ಸಂಘರ್ಷವನ್ನು ಸೃಷ್ಟಿಸಲು ಪ್ರಯತ್ನಗಳು ನಡೆದಿವೆ ಎಂದು ದೂರಿದ್ದಾರೆ.</p><p>ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ್ದ ರಾಹುಲ್, ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಯುತ್ತಿದೆ ಎಂದು ಹೇಳಿದ್ದರು.</p><p>ರಾಹುಲ್ ಗಾಂಧಿ ಭಾರತ ವಿರೋಧಿ ಶಕ್ತಿಗಳ ಧ್ವಜಧಾರಿ ಆಗಿದ್ದಾರೆ. ಜನರು ಅವರು ಮತ್ತು ನೆಹರು-ಗಾಂಧಿ ಕುಟುಂಬದ ಬಗ್ಗೆ ಎಚ್ಚರಿಕೆಯಿಂದಿರಬೇಕು ಎಂದು ತ್ರಿವೇದಿ ಮನವಿ ಮಾಡಿದ್ದಾರೆ.</p><p>'ಇಂದು ಅವರಂತಹ ವಿರೋಧ ಪಕ್ಷದ ನಾಯಕನನ್ನು ಹೊಂದಿರುವುದು ಭಾರತೀಯ ಪ್ರಜಾಪ್ರಭುತ್ವದ ಹೃದಯಕ್ಕೆ ಮುಳ್ಳಿನಂತೆ ಕಾಣುತ್ತಿದೆ' ಎಂದಿದ್ದಾರೆ.</p><p>'ಪಕ್ಷವು ಅಪಾಯಕಾರಿ ವಿದೇಶಿ ಶಕ್ತಿಗಳ ಹಿಡಿತಕ್ಕೆ ಸಿಲುಕುತ್ತಿದೆ ಎಂದು ತಿಳಿದೂ ಸುಮ್ಮನಿರುವ ಕಾಂಗ್ರೆಸ್ ನಾಯಕರು ದೇಶದ್ರೋಹ ಎಸಗುತ್ತಿದ್ದಾರೆ’ ಎಂದು ದೂರಿದ್ದಾರೆ.</p><p>ಕಾಂಗ್ರೆಸ್ಗೆ ಪ್ರಬುದ್ಧ ನಾಯಕತ್ವವಿದ್ದ ಕಾಲವಿತ್ತು ಎಂದ ತ್ರಿವೇದಿ, ಇಂದು ಕಾಂಗ್ರೆಸ್ ನಾಯಕತ್ವವು ತುಂಬಾ ಅಪಕ್ವವಾಗಿದೆ ಎಂದು ಕಿಡಿಕಾರಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ, ರಾಹುಲ್ ಗಾಂಧಿ ಅವರು ದೇಶದೊಳಕ್ಕೆ ತಮ್ಮ ಅಜೆಂಡಾ ನುಗ್ಗಿಸಲು ಪ್ರಯತ್ನಿಸುತ್ತಿರುವ ಭಾರತ ವಿರೋಧಿ ಶಕ್ತಿಗಳ ಧ್ವಜಧಾರಿಯಾಗಿದ್ದಾರೆ ಎಂದು ಆರೋಪಿಸಿದೆ. ಜನರು ಅವರ ಬಗ್ಗೆ ಎಚ್ಚರದಿಂದಿರಬೇಕು ಎಂದು ಕರೆ ನೀಡಿದೆ.</p><p>ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಸುಧಾಂಶು ತ್ರಿವೇದಿ, ಕೊಲಂಬಿಯಾದಲ್ಲಿ ನಡೆದ ವಿಚಾರ ಸಂಕಿರಣವೊಂದರಲ್ಲಿ ರಾಹುಲ್ ಗಾಂಧಿ ಅವರ ಇತ್ತೀಚಿನ ಹೇಳಿಕೆಗಳ ವಿರುದ್ಧ ವಾಗ್ದಾಳಿ ನಡೆಸಿದರು. 100 ವರ್ಷಗಳಿಗೂ ಹೆಚ್ಚು ಕಾಲ ನೆಹರೂ-ಗಾಂಧಿ ಕುಟುಂಬದ ನಿಯಂತ್ರಣದಲ್ಲಿರುವ ಕಾಂಗ್ರೆಸ್ ಈಗ ಭಾರತ ವಿರೋಧಿ ಶಕ್ತಿಗಳ ಹಿಡಿತಕ್ಕೆ ಸಿಲುಕುತ್ತಿರುವುದು ಸ್ಪಷ್ಟವಾಗಿದೆ ಎಂದು ಆರೋಪಿಸಿದ್ದಾರೆ.</p><p>ಗುರುವಾರ ಕೊಲಂಬಿಯಾದ ವಿಶ್ವವಿದ್ಯಾಲಯವೊಂದರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಹುಲ್ ಹೇಳಿಕೆಗಳನ್ನು ಉಲ್ಲೇಖಿಸಿದ ತ್ರಿವೇದಿ, ಭಾರತದಲ್ಲಿ 16-17 ಭಾಷೆಗಳಿವೆ ಎಂದು ರಾಹುಲ್ ಹೇಳಿದ್ದು, ಭಾಷಾ ಸಂಘರ್ಷ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಈ ಹಿಂದೆ ಉತ್ತರ-ದಕ್ಷಿಣ ಸಂಘರ್ಷವನ್ನು ಸೃಷ್ಟಿಸಲು ಪ್ರಯತ್ನಗಳು ನಡೆದಿವೆ ಎಂದು ದೂರಿದ್ದಾರೆ.</p><p>ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ್ದ ರಾಹುಲ್, ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಯುತ್ತಿದೆ ಎಂದು ಹೇಳಿದ್ದರು.</p><p>ರಾಹುಲ್ ಗಾಂಧಿ ಭಾರತ ವಿರೋಧಿ ಶಕ್ತಿಗಳ ಧ್ವಜಧಾರಿ ಆಗಿದ್ದಾರೆ. ಜನರು ಅವರು ಮತ್ತು ನೆಹರು-ಗಾಂಧಿ ಕುಟುಂಬದ ಬಗ್ಗೆ ಎಚ್ಚರಿಕೆಯಿಂದಿರಬೇಕು ಎಂದು ತ್ರಿವೇದಿ ಮನವಿ ಮಾಡಿದ್ದಾರೆ.</p><p>'ಇಂದು ಅವರಂತಹ ವಿರೋಧ ಪಕ್ಷದ ನಾಯಕನನ್ನು ಹೊಂದಿರುವುದು ಭಾರತೀಯ ಪ್ರಜಾಪ್ರಭುತ್ವದ ಹೃದಯಕ್ಕೆ ಮುಳ್ಳಿನಂತೆ ಕಾಣುತ್ತಿದೆ' ಎಂದಿದ್ದಾರೆ.</p><p>'ಪಕ್ಷವು ಅಪಾಯಕಾರಿ ವಿದೇಶಿ ಶಕ್ತಿಗಳ ಹಿಡಿತಕ್ಕೆ ಸಿಲುಕುತ್ತಿದೆ ಎಂದು ತಿಳಿದೂ ಸುಮ್ಮನಿರುವ ಕಾಂಗ್ರೆಸ್ ನಾಯಕರು ದೇಶದ್ರೋಹ ಎಸಗುತ್ತಿದ್ದಾರೆ’ ಎಂದು ದೂರಿದ್ದಾರೆ.</p><p>ಕಾಂಗ್ರೆಸ್ಗೆ ಪ್ರಬುದ್ಧ ನಾಯಕತ್ವವಿದ್ದ ಕಾಲವಿತ್ತು ಎಂದ ತ್ರಿವೇದಿ, ಇಂದು ಕಾಂಗ್ರೆಸ್ ನಾಯಕತ್ವವು ತುಂಬಾ ಅಪಕ್ವವಾಗಿದೆ ಎಂದು ಕಿಡಿಕಾರಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>